Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವಿನ ವಿಷ ಮಾನವನ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ? ವಿಡಿಯೋ ವೈರಲ್​

ಈ ವೈರಲ್ ವೀಡಿಯೊದಲ್ಲಿ ಪ್ರಯೋಗವೊಂದನ್ನು ತೋರಿಸಲಾಗಿದೆ. ಈ ಪ್ರಯೋಗವು ಹಾವು ಮಾನವ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತೋರಿಸುತ್ತದೆ. ಒಂದು ಹನಿ ವಿಷವು ನಿಮ್ಮ ರಕ್ತದ ಮೇಲೆ ಎಷ್ಟು ಆಳವಾಗಿ ಪರಿಣಾಮ ಬೀರುತ್ತದೆ ಎಂಬುದನ್ನು ವೀಡಿಯೊದಲ್ಲಿ ಕಾಣಬಹುದು.

ಹಾವಿನ ವಿಷ ಮಾನವನ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ? ವಿಡಿಯೋ ವೈರಲ್​
Video Viral
Follow us
ಅಕ್ಷತಾ ವರ್ಕಾಡಿ
|

Updated on: Mar 08, 2024 | 9:28 PM

ಹಾವಿನ ವಿಷ ನೇರವಾಗಿ ಮನುಷ್ಯನ ದೇಹ ಪ್ರವೇಶಿಸಿದರೆ ಪ್ರಾಣ ಕಳೆದುಕೊಳ್ಳುವುದಂತೂ ಖಂಡಿತಾ. ಹಾಗಾಗಿ ಸಾಕಷ್ಟು ಜನರಿಗೆ ಹಾವುಗಳೆಂದರೆ ಭಯ. ಹಾವು ಯಾರಿಗಾದರೂ ಕಚ್ಚಿದರೆ ಅವರ ಜೀವ ಉಳಿಸುವುದು ತುಂಬಾ ಕಷ್ಟ. ಹಾವಿನ ವಿಷ ನಮ್ಮ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ? ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಹಾವಿನ ವಿಷವು ಮಾನವನ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಈ ವೈರಲ್ ವೀಡಿಯೊದಲ್ಲಿ ತೋರಿಸಲಾಗಿದೆ.ಈ ವಿಡಿಯೋ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ಈ ವೈರಲ್ ವೀಡಿಯೊದಲ್ಲಿ ಪ್ರಯೋಗವೊಂದನ್ನು ತೋರಿಸಲಾಗಿದೆ. ಈ ಪ್ರಯೋಗವು ಹಾವು ಮಾನವ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತೋರಿಸುತ್ತದೆ. ಈ ವೈರಲ್ ವೀಡಿಯೊದಲ್ಲಿ ತಜ್ಞರು ಹಾವಿನ ವಿಷವನ್ನು ಗಾಜಿನ ಪಾತ್ರೆಯಲ್ಲಿ ಸಂಗ್ರಹಿಸುವುದನ್ನು ಕಾಣಬಹುದು. ಬಳಿಕ ಈ ವಿಷವನ್ನು ಇದೀಗಾಗಲೇ ಸಂಗ್ರಹಿಸಿಟ್ಟಿದ್ದ ಮಾನವ ರಕ್ತದೊಂದಿಗೆ ಸಂಗ್ರಹಿಸುತ್ತಿರುವುದನ್ನು ಕಾಣಬಹುದು. ಹಾವಿನ ವಿಷ ರಕ್ತದೊಂದಿಗೆ ಸೇರುತ್ತಿದ್ದಂತೆ ರಕ್ತ ಹೆಪ್ಪುಗಟ್ಟುವುದನ್ನು ಕಾಣಬಹುದು. ಒಂದು ಹನಿ ವಿಷವು ನಿಮ್ಮ ರಕ್ತದ ಮೇಲೆ ಎಷ್ಟು ಆಳವಾಗಿ ಪರಿಣಾಮ ಬೀರುತ್ತದೆ ಎಂಬುದನ್ನು ವೀಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿ: ಇಲ್ಲಿ ಪುರುಷರು ಕಡ್ಡಾಯವಾಗಿ ಎರಡು ಮದುವೆಯಾಗಲೇಬೇಕು! ʼನೋʼ ಅಂದ್ರೆ ಕಠಿಣ ಶಿಕ್ಷೆ

ಈ ವೀಡಿಯೊವನ್ನು @cooltechtipz ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ಬಳಕೆದಾರರು ವೀಡಿಯೊಗೆ ಪ್ರತಿಕ್ರಿಯಿಸಿದ್ದಾರೆ. ಒಬ್ಬ ಬಳಕೆದಾರನು ವಿಡಿಯೋ ವೀಕ್ಷಿಸಲು ಭಯಾನಕವಾಗಿದೆ ಎಂದು ಬರೆದರೆ, ಇನ್ನೊಬ್ಬ ಹಾವು ಕಚ್ಚಿದಾಗ ರಕ್ತ ಹೆಪ್ಪುಗಟ್ಟುತ್ತದೆಯೇ..? ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು