AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಟ್ರಾಫಿಕ್ ಸಿಗ್ನಲ್‌ನಲ್ಲಿ ಬೈಕ್ ಸವಾರನ ಬ್ಯಾಗ್‌ನಿಂದ 40 ಲಕ್ಷ ರೂ. ಎಗರಿಸಿದ ಕಳ್ಳರು, ಇಲ್ಲಿದೆ ವಿಡಿಯೊ

ಮಾರ್ಚ್ 1ರ ಸಂಜೆ ಟ್ರಾಫಿಕ್‌ನಲ್ಲಿ ನಿಂತಿದ್ದ ಬೈಕ್ ಸವಾರರೊಬ್ಬರ ಬ್ಯಾಗ್‌ನಿಂದ ಮೂವರು ವ್ಯಕ್ತಿಗಳು 40 ಲಕ್ಷ ರೂ. ಹಣಗಳನ್ನು ಕಳ್ಳತನ ಮಾಡಿದ್ದಾರೆ. ಈ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Video Viral: ಟ್ರಾಫಿಕ್ ಸಿಗ್ನಲ್‌ನಲ್ಲಿ ಬೈಕ್ ಸವಾರನ ಬ್ಯಾಗ್‌ನಿಂದ 40 ಲಕ್ಷ ರೂ. ಎಗರಿಸಿದ ಕಳ್ಳರು, ಇಲ್ಲಿದೆ ವಿಡಿಯೊ
ವೈರಲ್ ವಿಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on:Mar 07, 2023 | 7:30 PM

Share

ಮಾರ್ಚ್ 1ರ ಸಂಜೆ ಟ್ರಾಫಿಕ್‌ನಲ್ಲಿ ನಿಂತಿದ್ದ ಬೈಕ್ ಸವಾರರೊಬ್ಬರ ಬ್ಯಾಗ್‌ನಿಂದ ಮೂವರು ವ್ಯಕ್ತಿಗಳು 40 ಲಕ್ಷ ರೂ. ಹಣಗಳನ್ನು ಕಳ್ಳತನ ಮಾಡಿದ್ದಾರೆ. ಈ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೆಹಲಿಯ ಕೆಂಪುಕೋಟೆ ಬಳಿ ಬೈಕ್ ಸವಾರನೊಬ್ಬನಿಂದ 40 ಲಕ್ಷ ರೂ. ಹಣವನ್ನು ದರೋಡೆ ಮಾಡಿದ್ದ ಮೂವರು ದರೋಡೆಕೋರರ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೋಲಿಸರು ಮಂಗಳವಾರ ತಿಳಿಸಿದ್ದಾರೆ. ಟ್ರಾಫಿಕ್ ಸಿಗ್ನಲ್‌ನಲ್ಲಿ ಬೈಕ್ ನಿಲ್ಲಿಸಿದಾಗ ಬೈಕ್‌ನಲ್ಲಿದ್ದ ಆ ವ್ಯಕ್ತಿಯ ಬ್ಯಾಗ್‌ನಿಂದ ಹಣವನ್ನು ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯದ ಆಧಾರದ ಮೇಲೆ ಪೋಲಿಸರು ಅವರನ್ನು ಬಂಧಿಸಿದ್ದಾರೆ.

ಬ್ಯಾಗ್‌ನಲ್ಲಿ ಹಣವನ್ನು ಇಟ್ಟುಕೊಂಡು ಬಂದಿದ್ದ ಬೈಕ್ ಸವಾರನನ್ನು ಮೂವರು ದರೋಡೆಕೋರರು ಹಿಂದಿನಿಂದ ಹಿಂಬಾಲಿಸಿಕೊಂಡು ಬರುತ್ತಿರುತ್ತಾರೆ. ನಂತರ ಟ್ರಾಫಿಕ್ ಸಿಗ್ನಲ್‌ನಲ್ಲಿ ಬೈಕ್ ವೇಗ ನಿಧಾನಗೊಂಡು ಅಲ್ಲೇ ಇದ್ದ ಎರಡು ಕಾರುಗಳ ನಡುವೆ ನಿಂತಾಗ, ದರೋಡೆಕೋರರು ಇದುವೇ ಸರಿಯಾದ ಸಮಯ ಎಂದು ತಿಳಿದು ಕಳ್ಳತನ ಮಾಡಲು ವೇಗವಾಗಿ ಬೈಕ್‌ನತ್ತ ಬರುತ್ತಾರೆ ಎಂಬುದನ್ನು ಈ ದೃಶ್ಯದಲ್ಲಿ ಕಾಣಬಹುದು.

ಇದನ್ನೂ ಓದಿ:Video Viral: ಬೀದಿಯಲ್ಲಿ ರಾಜಾರೋಷವಾಗಿ ಅಡ್ಡಾಡಿದ ಚಿರತೆ, ಭೋಜನ ನಂತರದ ನಡಿಗೆ ಎಂದ ನೆಟ್ಟಿಗರು

ಅದರಲ್ಲಿ ಒಬ್ಬನು ಬೈಕ್ ಸವಾರನ ಬೆನ್ನಿನಲ್ಲಿದ ಬ್ಯಾಗ್‌ನ ಜಿಪ್ ಬಿಚ್ಚಿ ನಿಧಾನವಾಗಿ ಬ್ಯಾಗ್‌ನಲ್ಲಿದ್ದ ಹಣದ ಕಟ್ಟನ್ನು ಹೊರತೆಗೆದು ವೇಗವಾಗಿ ಅದನ್ನು ಇನ್ನೊಬ್ಬ ದರೋಡೆಕೋರನಿಗೆ ರವಾನಿಸುತ್ತಾನೆ. ಈ ಭಯಾನಕ ಕಳ್ಳತನದ ದೃಶ್ಯಗಳು ಅಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿತ್ತು. ಈ ಘಟನೆಯ ಬಳಿಕ ಮೂವರು ದರೋಡೆಕೋರರ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಅವರನ್ನು ಆಕಾಶ್ ಮತ್ತು ಅಭಿಶೇಕ್ ಎಂದು ಗುರುತಿಸಲಾಗಿದೆ. ಈ ಗುಂಪು ಬೈಕ್ ಸವಾರನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು ಎಂದು ಪೋಲಿಸರು ತಿಳಿಸಿದ್ದಾರೆ. ಕಳ್ಳತನವಾಗಿರುವ 40 ಲಕ್ಷ ರೂ. ಹಣದಲ್ಲಿ 38 ಲಕ್ಷ ರೂಪಾಯಿಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.

Published On - 5:57 pm, Tue, 7 March 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ