AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮೊಬೈಲ್​​ ಕಿತ್ತುಕೊಳ್ಳಲು ಬಂದ ಯುವಕನಿಗೆ ನಡುರಸ್ತೆಯಲ್ಲೇ ಬಟ್ಟೆಬಿಚ್ಚಿಸಿ ಥಳಿಸಿದ ಮಹಿಳೆ

ಮೀರತ್‌ನಲ್ಲಿ ಫೋನ್ ಕಸಿದುಕೊಳ್ಳಲು ಯತ್ನಿಸಿದ ಯುವಕನನ್ನು ಮಹಿಳೆ ಮತ್ತು ಸ್ಥಳೀಯರು ಅಮಾನುಷವಾಗಿ ಥಳಿಸಿದ ಘಟನೆ ವೈರಲ್ ಆಗಿದೆ. ಮೊಬೈಲ್​​ ಕಸಿಯಲು ಯತ್ನಿಸಿದ ಯುವಕನನ್ನು ಹಿಡಿದು ಮಹಿಳೆ ಅರೆಬೆತ್ತಲೆಯಾಗಿ ವಿವಸ್ತ್ರಗೊಳಿಸಿ ಥಳಿಸಿದ್ದಾಳೆ. ಸ್ಥಳೀಯರೂ ಸೇರಿ ಹೊಡೆದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಅಕ್ಷತಾ ವರ್ಕಾಡಿ
|

Updated on: Oct 26, 2024 | 10:45 AM

Share

ಉತ್ತರ ಪ್ರದೇಶ: ಮಹಿಳೆಯ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮಹಿಳೆ ಮತ್ತು ಸ್ಥಳೀಯರು ಸೇರಿ ಅರೆಬೆತ್ತಲೆಯಾಗಿ ವಿವಸ್ತ್ರಗೊಳಿಸಿ ಅಮಾನುಷವಾಗಿ ಥಳಿಸಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಜನಸಂದಣಿಯಿರುವ ಮಾರ್ಕೆಟ್​​ನಲ್ಲಿ ಯುವಕ ಫೋನ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆ ವೇಳೆ ಮಹಿಳೆ ಜೋರಾಗಿ ಕಿರುಚಿದ್ದು ತಕ್ಷಣ ಸ್ಥಳೀಯರು ಆತನನ್ನು ಹಿಡಿದು ಮಹಿಳೆಯ ಕೈಗೊಪ್ಪಿಸಿದ್ದಾರೆ. ಕೋಪಗೊಂಡ ಮಹಿಳೆ ನಡುರಸ್ತೆಯಲ್ಲೇ ಆತನ ಬಟ್ಟೆಬಿಚ್ಚಿಸಿ ಮನಬಂದಂತೆ ಥಳಿಸಿದ್ದಾಳೆ. ಜೊತೆಗೆ ಸ್ಥಳೀಯರೂ ಕೂಡ ಸೇರಿ ಹೊಡೆದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಆರೋಪಿಯು ತನಗೆ ಥಳಿಸುವುದನ್ನು ನಿಲ್ಲಿಸುವಂತೆ ಮಹಿಳೆಗೆ ಮನವಿ ಮಾಡುವುದನ್ನು ವೀಡಿಯೊದಲ್ಲಿ ಕಾಣಬಹುದು. ಸ್ಥಳೀಯರು ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಂಪುಲ್ ಬಳಿ ಈ ಘಟನೆ ನಡೆದಿದೆ. ಆರೋಪಿಯನ್ನು ಅರ್ಮಾನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಪ್ರಿಯತಮೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡಿ ಪಿಂಡ ಬಿಟ್ಟ ಪತಿರಾಯ

@ManojSh28986262 ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ಮಹಿಳೆ ಆರೋಪಿಯ ತಲೆಗೂದಲು ಹಿಡಿದು ಆತನ ಮುಖಕ್ಕೆ ಬಾರಿಸಿದ್ದು, ಸ್ಥಳದಲ್ಲಿದ್ದ ಇತರ ಜನರು ಕೂಡ ಆತನಿಗೆ ಒದೆಯುತ್ತಿರುವುದು ಮತ್ತು ಥಳಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಯುವಕ ತನ್ನನ್ನು ಹೊಡೆಯುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದು,”ಮೇಡಂ, ನೀವು ನನ್ನನ್ನು ಎಷ್ಟು ಹೊಡೆಯುತ್ತೀರಿ, ದಯವಿಟ್ಟು ಬಿಟ್ಟುಬಿಡಿ” ಎಂದು ಹೇಳಿದ್ದಾನೆ. ಮಹಿಳೆ ಕರುಣೆ ತೋರದೆ ಆರೋಪಿಯನ್ನು ಹಿಂಬಾಲಿಸಿ ಮನಬಂದಂತೆ ಥಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!