Video Viral: ಮೊಬೈಲ್​​ ಕಿತ್ತುಕೊಳ್ಳಲು ಬಂದ ಯುವಕನಿಗೆ ನಡುರಸ್ತೆಯಲ್ಲೇ ಬಟ್ಟೆಬಿಚ್ಚಿಸಿ ಥಳಿಸಿದ ಮಹಿಳೆ

ಮೀರತ್‌ನಲ್ಲಿ ಫೋನ್ ಕಸಿದುಕೊಳ್ಳಲು ಯತ್ನಿಸಿದ ಯುವಕನನ್ನು ಮಹಿಳೆ ಮತ್ತು ಸ್ಥಳೀಯರು ಅಮಾನುಷವಾಗಿ ಥಳಿಸಿದ ಘಟನೆ ವೈರಲ್ ಆಗಿದೆ. ಮೊಬೈಲ್​​ ಕಸಿಯಲು ಯತ್ನಿಸಿದ ಯುವಕನನ್ನು ಹಿಡಿದು ಮಹಿಳೆ ಅರೆಬೆತ್ತಲೆಯಾಗಿ ವಿವಸ್ತ್ರಗೊಳಿಸಿ ಥಳಿಸಿದ್ದಾಳೆ. ಸ್ಥಳೀಯರೂ ಸೇರಿ ಹೊಡೆದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Follow us
|

Updated on: Oct 26, 2024 | 10:45 AM

ಉತ್ತರ ಪ್ರದೇಶ: ಮಹಿಳೆಯ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮಹಿಳೆ ಮತ್ತು ಸ್ಥಳೀಯರು ಸೇರಿ ಅರೆಬೆತ್ತಲೆಯಾಗಿ ವಿವಸ್ತ್ರಗೊಳಿಸಿ ಅಮಾನುಷವಾಗಿ ಥಳಿಸಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಜನಸಂದಣಿಯಿರುವ ಮಾರ್ಕೆಟ್​​ನಲ್ಲಿ ಯುವಕ ಫೋನ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆ ವೇಳೆ ಮಹಿಳೆ ಜೋರಾಗಿ ಕಿರುಚಿದ್ದು ತಕ್ಷಣ ಸ್ಥಳೀಯರು ಆತನನ್ನು ಹಿಡಿದು ಮಹಿಳೆಯ ಕೈಗೊಪ್ಪಿಸಿದ್ದಾರೆ. ಕೋಪಗೊಂಡ ಮಹಿಳೆ ನಡುರಸ್ತೆಯಲ್ಲೇ ಆತನ ಬಟ್ಟೆಬಿಚ್ಚಿಸಿ ಮನಬಂದಂತೆ ಥಳಿಸಿದ್ದಾಳೆ. ಜೊತೆಗೆ ಸ್ಥಳೀಯರೂ ಕೂಡ ಸೇರಿ ಹೊಡೆದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಆರೋಪಿಯು ತನಗೆ ಥಳಿಸುವುದನ್ನು ನಿಲ್ಲಿಸುವಂತೆ ಮಹಿಳೆಗೆ ಮನವಿ ಮಾಡುವುದನ್ನು ವೀಡಿಯೊದಲ್ಲಿ ಕಾಣಬಹುದು. ಸ್ಥಳೀಯರು ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಂಪುಲ್ ಬಳಿ ಈ ಘಟನೆ ನಡೆದಿದೆ. ಆರೋಪಿಯನ್ನು ಅರ್ಮಾನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಪ್ರಿಯತಮೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡಿ ಪಿಂಡ ಬಿಟ್ಟ ಪತಿರಾಯ

@ManojSh28986262 ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ಮಹಿಳೆ ಆರೋಪಿಯ ತಲೆಗೂದಲು ಹಿಡಿದು ಆತನ ಮುಖಕ್ಕೆ ಬಾರಿಸಿದ್ದು, ಸ್ಥಳದಲ್ಲಿದ್ದ ಇತರ ಜನರು ಕೂಡ ಆತನಿಗೆ ಒದೆಯುತ್ತಿರುವುದು ಮತ್ತು ಥಳಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಯುವಕ ತನ್ನನ್ನು ಹೊಡೆಯುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದು,”ಮೇಡಂ, ನೀವು ನನ್ನನ್ನು ಎಷ್ಟು ಹೊಡೆಯುತ್ತೀರಿ, ದಯವಿಟ್ಟು ಬಿಟ್ಟುಬಿಡಿ” ಎಂದು ಹೇಳಿದ್ದಾನೆ. ಮಹಿಳೆ ಕರುಣೆ ತೋರದೆ ಆರೋಪಿಯನ್ನು ಹಿಂಬಾಲಿಸಿ ಮನಬಂದಂತೆ ಥಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಂಡ್ಯ ಜನ ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ ಎಂದ ಶಿವರಾಮೇಗೌಡ
ಮಂಡ್ಯ ಜನ ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ ಎಂದ ಶಿವರಾಮೇಗೌಡ
ಬಿಗ್​ಬಾಸ್ ಮನೆಗೆ ಕಾಲಿಟ್ಟ ಯೋಗರಾಜ್ ಭಟ್, ಮನೆಯಲ್ಲಿ ನಗುವೋ ನಗು
ಬಿಗ್​ಬಾಸ್ ಮನೆಗೆ ಕಾಲಿಟ್ಟ ಯೋಗರಾಜ್ ಭಟ್, ಮನೆಯಲ್ಲಿ ನಗುವೋ ನಗು
2ನೇ ದಿನದ ಹಾಸನಾಂಬ ದೇವಿ ದರ್ಶನ​​ ಲೈವ್​
2ನೇ ದಿನದ ಹಾಸನಾಂಬ ದೇವಿ ದರ್ಶನ​​ ಲೈವ್​
ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ
ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ಹೂಡಿಕೆಯಿಂದ ಲಾಭವಾಗುತ್ತದೆ
Nithya Bhavishya: ಈ ರಾಶಿಯವರಿಗೆ ಇಂದು ಹೂಡಿಕೆಯಿಂದ ಲಾಭವಾಗುತ್ತದೆ
ಹಾಸನಾಂಬೆ ಬಳಿ ಡಿಕೆ ಶಿವಕುಮಾರ್​ ಬೇಡಿಕೊಂಡಿದ್ದು ಹೀಗಂತೆ
ಹಾಸನಾಂಬೆ ಬಳಿ ಡಿಕೆ ಶಿವಕುಮಾರ್​ ಬೇಡಿಕೊಂಡಿದ್ದು ಹೀಗಂತೆ
10 ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕರಿಸಿದ ಐಎಎಸ್​ ಅಧಿಕಾರಿ
10 ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕರಿಸಿದ ಐಎಎಸ್​ ಅಧಿಕಾರಿ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ