AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮೊಬೈಲ್​​ ಕಿತ್ತುಕೊಳ್ಳಲು ಬಂದ ಯುವಕನಿಗೆ ನಡುರಸ್ತೆಯಲ್ಲೇ ಬಟ್ಟೆಬಿಚ್ಚಿಸಿ ಥಳಿಸಿದ ಮಹಿಳೆ

ಮೀರತ್‌ನಲ್ಲಿ ಫೋನ್ ಕಸಿದುಕೊಳ್ಳಲು ಯತ್ನಿಸಿದ ಯುವಕನನ್ನು ಮಹಿಳೆ ಮತ್ತು ಸ್ಥಳೀಯರು ಅಮಾನುಷವಾಗಿ ಥಳಿಸಿದ ಘಟನೆ ವೈರಲ್ ಆಗಿದೆ. ಮೊಬೈಲ್​​ ಕಸಿಯಲು ಯತ್ನಿಸಿದ ಯುವಕನನ್ನು ಹಿಡಿದು ಮಹಿಳೆ ಅರೆಬೆತ್ತಲೆಯಾಗಿ ವಿವಸ್ತ್ರಗೊಳಿಸಿ ಥಳಿಸಿದ್ದಾಳೆ. ಸ್ಥಳೀಯರೂ ಸೇರಿ ಹೊಡೆದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಅಕ್ಷತಾ ವರ್ಕಾಡಿ
|

Updated on: Oct 26, 2024 | 10:45 AM

Share

ಉತ್ತರ ಪ್ರದೇಶ: ಮಹಿಳೆಯ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮಹಿಳೆ ಮತ್ತು ಸ್ಥಳೀಯರು ಸೇರಿ ಅರೆಬೆತ್ತಲೆಯಾಗಿ ವಿವಸ್ತ್ರಗೊಳಿಸಿ ಅಮಾನುಷವಾಗಿ ಥಳಿಸಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಜನಸಂದಣಿಯಿರುವ ಮಾರ್ಕೆಟ್​​ನಲ್ಲಿ ಯುವಕ ಫೋನ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆ ವೇಳೆ ಮಹಿಳೆ ಜೋರಾಗಿ ಕಿರುಚಿದ್ದು ತಕ್ಷಣ ಸ್ಥಳೀಯರು ಆತನನ್ನು ಹಿಡಿದು ಮಹಿಳೆಯ ಕೈಗೊಪ್ಪಿಸಿದ್ದಾರೆ. ಕೋಪಗೊಂಡ ಮಹಿಳೆ ನಡುರಸ್ತೆಯಲ್ಲೇ ಆತನ ಬಟ್ಟೆಬಿಚ್ಚಿಸಿ ಮನಬಂದಂತೆ ಥಳಿಸಿದ್ದಾಳೆ. ಜೊತೆಗೆ ಸ್ಥಳೀಯರೂ ಕೂಡ ಸೇರಿ ಹೊಡೆದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಆರೋಪಿಯು ತನಗೆ ಥಳಿಸುವುದನ್ನು ನಿಲ್ಲಿಸುವಂತೆ ಮಹಿಳೆಗೆ ಮನವಿ ಮಾಡುವುದನ್ನು ವೀಡಿಯೊದಲ್ಲಿ ಕಾಣಬಹುದು. ಸ್ಥಳೀಯರು ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಂಪುಲ್ ಬಳಿ ಈ ಘಟನೆ ನಡೆದಿದೆ. ಆರೋಪಿಯನ್ನು ಅರ್ಮಾನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಪ್ರಿಯತಮೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡಿ ಪಿಂಡ ಬಿಟ್ಟ ಪತಿರಾಯ

@ManojSh28986262 ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ಮಹಿಳೆ ಆರೋಪಿಯ ತಲೆಗೂದಲು ಹಿಡಿದು ಆತನ ಮುಖಕ್ಕೆ ಬಾರಿಸಿದ್ದು, ಸ್ಥಳದಲ್ಲಿದ್ದ ಇತರ ಜನರು ಕೂಡ ಆತನಿಗೆ ಒದೆಯುತ್ತಿರುವುದು ಮತ್ತು ಥಳಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಯುವಕ ತನ್ನನ್ನು ಹೊಡೆಯುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದು,”ಮೇಡಂ, ನೀವು ನನ್ನನ್ನು ಎಷ್ಟು ಹೊಡೆಯುತ್ತೀರಿ, ದಯವಿಟ್ಟು ಬಿಟ್ಟುಬಿಡಿ” ಎಂದು ಹೇಳಿದ್ದಾನೆ. ಮಹಿಳೆ ಕರುಣೆ ತೋರದೆ ಆರೋಪಿಯನ್ನು ಹಿಂಬಾಲಿಸಿ ಮನಬಂದಂತೆ ಥಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ