AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ‘ಉಸಿರಾಡಲಾಗುತ್ತಿಲ್ಲ ಎಂದರೂ ಬಿಟ್ಟಿಲ್ಲ’; ಪೊಲೀಸ್‌ ದೌರ್ಜನ್ಯಕ್ಕೆ ಕಪ್ಪು ವರ್ಣೀಯ ಬಲಿ

ಪೋಲೀಸ್ ಅಧಿಕಾರಿಯೊಬ್ಬರು ಟೈಸನ್‌ನ ಹಿಂಭಾಗದಲ್ಲಿ ಕುತ್ತಿಗೆಯ ಬಳಿ ಮೊಣಕಾಲಿನಿಂದ ಸುಮಾರು 30 ಸೆಕೆಂಡುಗಳ ಕಾಲ ಬಲವಾಗಿ ಒತ್ತಿ ಹಿಡಿದಿರುವುದು ಮತ್ತು ಟೈಸನ್ 'ನನಗೆ ಉಸಿರಾಡಲು ಆಗುತ್ತಿಲ್ಲ' ಎಂದು ಕಿರುಚುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಅಕ್ಷತಾ ವರ್ಕಾಡಿ
|

Updated on: Apr 28, 2024 | 11:44 AM

Share

ಅಮೆರಿಕದಲ್ಲಿ ಕಪ್ಪು ವರ್ಣೀಯರ ವಿರುದ್ಧ ಪೊಲೀಸರು ನಡೆಸಿದ ದೌರ್ಜನ್ಯ ಮತ್ತೊಮ್ಮೆ ಬೆಳಕಿಗೆ ಬಂದಿದೆ. 2020ರಲ್ಲಿ ‘ಜಾರ್ಜ್‌ ಫ್ಲಾಯ್ಡ್‌’ ಸಾವು ಮರೆಯುವ ಮುನ್ನವೇ ಅದೇ ರೀತಿ ಮತ್ತೊಂದು ದೌರ್ಜನ್ಯ ನಡೆದಿದೆ. ಫ್ರಾಂಕ್ ಟೈಸನ್ (53) ಎಂಬ ಕಪ್ಪು ವರ್ಣೀಯ ವ್ಯಕ್ತಿಯನ್ನು ಪೊಲೀಸರು ಹಿಡಿದು, ಮೊಣಕಾಲಿನಿಂದ ಆತನ ಕುತ್ತಿಗೆಗೆ ಬಲವಾಗಿ ಒತ್ತಿ ಮತ್ತು ಉಸಿರುಗಟ್ಟಿಸಿ ಕೊಲ್ಲಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.  ‘ನನಗೆ ಉಸಿರಾಡುತ್ತಿಲ್ಲ’ ಎಂದು ಸಂತ್ರಸ್ತೆ ಹೇಳಿದರೂ ಪೊಲೀಸರು ಬಿಡದ ಕಾರಣ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವುದು ವರದಿಯಾಗಿದೆ. ವಾರದ ಹಿಂದೆ ಓಹಿಯೋದ ಕ್ಯಾಂಟನ್ ನಗರದಲ್ಲಿ ಈ ಭಯಾನಕ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಏಪ್ರಿಲ್ 18 ರಂದು, ಪೊಲೀಸ್ ಅಧಿಕಾರಿಗಳು ಫ್ರಾಂಕ್ ಟೈಸನ್ ಅವರನ್ನು ಕಾರು ಅಪಘಾತ ಪ್ರಕರಣದಲ್ಲಿ ಶಂಕಿತ ಎಂದು ಗುರುತಿಸಿದರು. ಇದರಿಂದ ಪೊಲೀಸರು ಸಮೀಪದ ಬಾರ್‌ನಲ್ಲಿದ್ದ ಟೈಸನ್‌ನನ್ನು ಬಂಧಿಸಲು ಪ್ರಯತ್ನಿಸಿದ್ದಾರೆ. ವೀಡಿಯೊದಲ್ಲಿ, ಟೈಸನ್ ಅವರನ್ನು ಬಂಧಿಸಿದ ಪೊಲೀಸರು ಕೈಕೋಳ ಹಾಕಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ‘ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ, ಜಿಲ್ಲಾಧಿಕಾರಿಗೆ ಕರೆ ಮಾಡಿ’ ಎಂದು ಸಂತ್ರಸ್ತೆ ಕೂಗುತ್ತಿರುವುದನ್ನು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಅಳಿಯನ ಮದುವೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಮಾವ ಹೃದಯಾಘಾತದಿಂದ ಸಾವು

ಪೋಲೀಸ್ ಅಧಿಕಾರಿಯೊಬ್ಬರು ಟೈಸನ್‌ನ ಹಿಂಭಾಗದಲ್ಲಿ ಕುತ್ತಿಗೆಯ ಬಳಿ ಮೊಣಕಾಲಿನಿಂದ ಸುಮಾರು 30 ಸೆಕೆಂಡುಗಳ ಕಾಲ ಬಲವಾಗಿ ಒತ್ತಿ ಹಿಡಿದಿರುವುದು ಮತ್ತು ಟೈಸನ್ ‘ನನಗೆ ಉಸಿರಾಡಲು ಆಗುತ್ತಿಲ್ಲ’ ಎಂದು ಕಿರುಚುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಟೈಸನ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ವ್ಯಕ್ತಿ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಟೈಸನ್ ಸಾವಿಗೆ ನಿಖರವಾದ ಕಾರಣವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಈ ಘಟನೆಯಲ್ಲಿ ಟೈಸನ್‌ರನ್ನು ಕ್ರೂರವಾಗಿ ನಡೆಸಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಬ್ಯೂ ಸ್ಕೋನೆಗ್ಸ್ ಮತ್ತು ಕ್ಯಾಮ್ಡೆನ್ ಬರ್ಚ್ ಎಂದು ಗುರುತಿಸಲಾಗಿದೆ. ಓಹಿಯೋ ಬ್ಯೂರೋ ಆಫ್ ಕ್ರಿಮಿನಲ್ ಇನ್ವೆಸ್ಟಿಗೇಶನ್ (ಒಸಿಐ) ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ