Viral Video : ಲಿಫ್ಟ್​ನಲ್ಲಿ ಬಾಲಕನನ್ನು ಕಚ್ಚಿದ ನಾಯಿ, ಮುಂದೇನಾಯಿತು?

Dog Bite : ನನ್ನ ಮಗನಿಗೆ ನಿಮ್ಮ ನಾಯಿ ಕಚ್ಚಿದೆ ಎಂದು ಈ ಬಾಲಕನ ತಂದೆ ಹೇಳಿದಾಗ ಆಕೆ, ‘ನಿನಗೆ ಹುಚ್ಚಾ? ಹೆಣ್ಣುಮಕ್ಕಳೊಂದಿಗೆ ಹೇಗೆ ಮಾತನಾಡಬೇಕೆಂದು ಗೊತ್ತಿಲ್ಲವಾ?’ ಎಂದು ಉಲ್ಟಾ ಅವರನ್ನೇ ತರಾಟೆಗೆ ತೆಗೆದುಕೊಂಡಿದ್ದಾಳೆ.

Viral Video : ಲಿಫ್ಟ್​ನಲ್ಲಿ ಬಾಲಕನನ್ನು ಕಚ್ಚಿದ ನಾಯಿ, ಮುಂದೇನಾಯಿತು?
ಲಿಫ್ಟ್​ನಲ್ಲಿ ನಾಯಿಯಿಂದ ಕಚ್ಚಿಸಿಕೊಂಡ ಹುಡುಗ
Follow us
| Updated By: ಶ್ರೀದೇವಿ ಕಳಸದ

Updated on:Sep 07, 2022 | 5:57 PM

Viral Video : ಘಾಝಿಯಾಬಾದ್ ಹೌಸಿಂಗ್ ಸೊಸೈಟಿ ಲಿಫ್ಟ್​ನಲ್ಲಿ ಸಾಕುನಾಯಿಯೊಂದು ಬಾಲಕನನ್ನು ಕಚ್ಚುತ್ತದೆ. ನೋವಿನಿಂದ ಬಾಲಕ ಒದ್ದಾಡುತ್ತಿದ್ದರೂ ನಾಯಿಯ ಪೋಷಕಿ ಏನೂ ನಡೆದೇ ಇಲ್ಲವೆಂಬಂತೆ ನಿಂತುಕೊಳ್ಳುತ್ತಾಳೆ. ಈ ವಿಡಿಯೋ ನೋಡಿದ ನೆಟ್ಟಿಗರು ಶಾಕ್​ಗೆ ಒಳಗಾಗಿದ್ದಾರೆ. ಆಘಾತಕ್ಕೊಳಗಾದ ಈ ಬಾಲಕನ ತಂದೆ ಈ ಮಹಿಳೆಯೊಂದಿಗೆ ಮಾತಿಗಿಳಿದಿದ್ಧಾರೆ. ನಿಮ್ಮ ಫ್ಲ್ಯಾಟ್​ ನಂಬರ್ ಹೇಳಿ ಎಂದು ಆಕೆಗೆ ಕೇಳಿದರೂ ಆಕೆ ಉದ್ಧಟತನದಿಂದ ವರ್ತಿಸಿದ್ದಾರೆ. ಯಾಕೆ ನನ್ನ ಹಿಂದೆ ಬಿದ್ದಿದ್ದೀರಿ. ನೀವು ಹುಚ್ಚರಾ? ಹೆಣ್ಣುಮಕ್ಕಳೊಂದಿಗೆ ಹೇಗೆ ಮಾತನಾಡಬೇಕೆಂದು ನಿಮಗೆ ಗೊತ್ತಿಲ್ಲವಾ? ಏನಿದ್ದರೂ ನನ್ನ ಗಂಡನೊಂದಿಗೆ ಮಾತನಾಡಿ ಎಂದು ಬೇಜವಾಬ್ದಾರಿಯಿಂದ ಕೂಗಾಡಿದ್ದಾಳೆ. ಇದರಿಂದ ಬಾಲಕನ ತಂದೆ ರೋಸಿ ಹೋಗಿದ್ದಾರೆ.

ಈ ಮಹಿಳೆ ತನ್ನ ನಾಯಿಯನ್ನು ಬಹಿರ್ದೆಸೆಗಾಗಿ ಕರೆದುಕೊಂಡು ಬಂದಾಗ ಈ ಘಟನೆ ನಡೆದಿದೆ. ನನ್ನ ಮಗನಿಗೆ ನಿಮ್ಮ ನಾಯಿ ಕಚ್ಚಿದೆ ಎನ್ನುವುದು ನಿಮಗೆ ಅರ್ಥವಾಗಿಲ್ಲವಾ? ಎಂದು ಬಾಲಕನ ತಂದೆ ಆತಂಕ, ಕೋಪದಿಂದ ಕೇಳಿದಾಗ ಈಕೆ ತನಗಿದು ಸಂಬಂಧವೇ ಇಲ್ಲವೆಂಬಂತೆ ವಾದಿಸಿ ನುಣುಚಿಕೊಳ್ಳಲು ಪ್ರಯತ್ನಿಸಿದ್ಧಾಳೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನೆಟ್ಟಿಗರು ಈ ಅಮಾನವೀಯ ದೃಶ್ಯವನ್ನು ನೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರಿಗೋ ನೋವು ಗಾಯವಾಗಿದೆ ಎಂದರೆ ಸ್ಪಂದಿಸುವುದು ಮನುಷ್ಯನ ಆದ್ಯ ಕರ್ತವ್ಯ. ಇಲ್ಲಿ ನಡೆದಿರುವ ಈ ಘಟನೆ ತನಗೆ ನೇರವಾಗಿ ಸಂಬಂಧವಿದ್ದರೂ ಅದನ್ನು ನಿರ್ಲಕ್ಷಿಸಿ ವಾದಿಸುತ್ತಿರುವ ಈ ಮಹಿಳೆಗೆ ಏನೆನ್ನಬೇಕು? ಇದು ಧಾರ್ಷ್ಟ್ರತನ ಅಲ್ಲದೆ ಇನ್ನೇನು? ಪ್ರಾಣಿಗಳನ್ನು ಸಾಕುವವರು ಹೆಚ್ಚು ಅಂತಃಕರಣ, ಮಾನವೀಯತೆ ಉಳ್ಳವರಾಗಿರುತ್ತಾರೆ. ಆದರೆ ಈ ಘಟನೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:52 pm, Wed, 7 September 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ