AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಲಿಫ್ಟ್​ನಲ್ಲಿ ಬಾಲಕನನ್ನು ಕಚ್ಚಿದ ನಾಯಿ, ಮುಂದೇನಾಯಿತು?

Dog Bite : ನನ್ನ ಮಗನಿಗೆ ನಿಮ್ಮ ನಾಯಿ ಕಚ್ಚಿದೆ ಎಂದು ಈ ಬಾಲಕನ ತಂದೆ ಹೇಳಿದಾಗ ಆಕೆ, ‘ನಿನಗೆ ಹುಚ್ಚಾ? ಹೆಣ್ಣುಮಕ್ಕಳೊಂದಿಗೆ ಹೇಗೆ ಮಾತನಾಡಬೇಕೆಂದು ಗೊತ್ತಿಲ್ಲವಾ?’ ಎಂದು ಉಲ್ಟಾ ಅವರನ್ನೇ ತರಾಟೆಗೆ ತೆಗೆದುಕೊಂಡಿದ್ದಾಳೆ.

Viral Video : ಲಿಫ್ಟ್​ನಲ್ಲಿ ಬಾಲಕನನ್ನು ಕಚ್ಚಿದ ನಾಯಿ, ಮುಂದೇನಾಯಿತು?
ಲಿಫ್ಟ್​ನಲ್ಲಿ ನಾಯಿಯಿಂದ ಕಚ್ಚಿಸಿಕೊಂಡ ಹುಡುಗ
TV9 Web
| Edited By: |

Updated on:Sep 07, 2022 | 5:57 PM

Share

Viral Video : ಘಾಝಿಯಾಬಾದ್ ಹೌಸಿಂಗ್ ಸೊಸೈಟಿ ಲಿಫ್ಟ್​ನಲ್ಲಿ ಸಾಕುನಾಯಿಯೊಂದು ಬಾಲಕನನ್ನು ಕಚ್ಚುತ್ತದೆ. ನೋವಿನಿಂದ ಬಾಲಕ ಒದ್ದಾಡುತ್ತಿದ್ದರೂ ನಾಯಿಯ ಪೋಷಕಿ ಏನೂ ನಡೆದೇ ಇಲ್ಲವೆಂಬಂತೆ ನಿಂತುಕೊಳ್ಳುತ್ತಾಳೆ. ಈ ವಿಡಿಯೋ ನೋಡಿದ ನೆಟ್ಟಿಗರು ಶಾಕ್​ಗೆ ಒಳಗಾಗಿದ್ದಾರೆ. ಆಘಾತಕ್ಕೊಳಗಾದ ಈ ಬಾಲಕನ ತಂದೆ ಈ ಮಹಿಳೆಯೊಂದಿಗೆ ಮಾತಿಗಿಳಿದಿದ್ಧಾರೆ. ನಿಮ್ಮ ಫ್ಲ್ಯಾಟ್​ ನಂಬರ್ ಹೇಳಿ ಎಂದು ಆಕೆಗೆ ಕೇಳಿದರೂ ಆಕೆ ಉದ್ಧಟತನದಿಂದ ವರ್ತಿಸಿದ್ದಾರೆ. ಯಾಕೆ ನನ್ನ ಹಿಂದೆ ಬಿದ್ದಿದ್ದೀರಿ. ನೀವು ಹುಚ್ಚರಾ? ಹೆಣ್ಣುಮಕ್ಕಳೊಂದಿಗೆ ಹೇಗೆ ಮಾತನಾಡಬೇಕೆಂದು ನಿಮಗೆ ಗೊತ್ತಿಲ್ಲವಾ? ಏನಿದ್ದರೂ ನನ್ನ ಗಂಡನೊಂದಿಗೆ ಮಾತನಾಡಿ ಎಂದು ಬೇಜವಾಬ್ದಾರಿಯಿಂದ ಕೂಗಾಡಿದ್ದಾಳೆ. ಇದರಿಂದ ಬಾಲಕನ ತಂದೆ ರೋಸಿ ಹೋಗಿದ್ದಾರೆ.

ಈ ಮಹಿಳೆ ತನ್ನ ನಾಯಿಯನ್ನು ಬಹಿರ್ದೆಸೆಗಾಗಿ ಕರೆದುಕೊಂಡು ಬಂದಾಗ ಈ ಘಟನೆ ನಡೆದಿದೆ. ನನ್ನ ಮಗನಿಗೆ ನಿಮ್ಮ ನಾಯಿ ಕಚ್ಚಿದೆ ಎನ್ನುವುದು ನಿಮಗೆ ಅರ್ಥವಾಗಿಲ್ಲವಾ? ಎಂದು ಬಾಲಕನ ತಂದೆ ಆತಂಕ, ಕೋಪದಿಂದ ಕೇಳಿದಾಗ ಈಕೆ ತನಗಿದು ಸಂಬಂಧವೇ ಇಲ್ಲವೆಂಬಂತೆ ವಾದಿಸಿ ನುಣುಚಿಕೊಳ್ಳಲು ಪ್ರಯತ್ನಿಸಿದ್ಧಾಳೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನೆಟ್ಟಿಗರು ಈ ಅಮಾನವೀಯ ದೃಶ್ಯವನ್ನು ನೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರಿಗೋ ನೋವು ಗಾಯವಾಗಿದೆ ಎಂದರೆ ಸ್ಪಂದಿಸುವುದು ಮನುಷ್ಯನ ಆದ್ಯ ಕರ್ತವ್ಯ. ಇಲ್ಲಿ ನಡೆದಿರುವ ಈ ಘಟನೆ ತನಗೆ ನೇರವಾಗಿ ಸಂಬಂಧವಿದ್ದರೂ ಅದನ್ನು ನಿರ್ಲಕ್ಷಿಸಿ ವಾದಿಸುತ್ತಿರುವ ಈ ಮಹಿಳೆಗೆ ಏನೆನ್ನಬೇಕು? ಇದು ಧಾರ್ಷ್ಟ್ರತನ ಅಲ್ಲದೆ ಇನ್ನೇನು? ಪ್ರಾಣಿಗಳನ್ನು ಸಾಕುವವರು ಹೆಚ್ಚು ಅಂತಃಕರಣ, ಮಾನವೀಯತೆ ಉಳ್ಳವರಾಗಿರುತ್ತಾರೆ. ಆದರೆ ಈ ಘಟನೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:52 pm, Wed, 7 September 22

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ