Viral Video: ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಧರಿಸಿದ ಪುರುಷ

Dharwad : ಉಚಿತ ಬಸ್​ ಪ್ರಯಾಣಕ್ಕಾಗಿ ಧಾರವಾಡದ ಬಸ್​ ಸ್ಟ್ಯಾಂಡಿನಲ್ಲಿ ಬಸ್ಸಿಗಾಗಿ ಕಾಯ್ದು ಕುಳಿತಾಗ, ಸ್ಥಳೀಯರ ಕೈಗೆ ಸಿಕ್ಕಿಬಿದ್ದು ಇವನ ನಾಟಕ ಬಯಲಾಗಿದೆ. ಆದರೆ ತಾನು ಬುರ್ಖಾ ಧರಿಸಿದ್ದ ಉದ್ದೇಶವೇ ಬೇರೆ ಎಂದಿದ್ದಾನೆ ಈತ!

Viral Video: ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಧರಿಸಿದ ಪುರುಷ
ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಹಾಕಿಕೊಂಡಿದ್ದ ವಿಜಯಪುರದ ವೀರಭದ್ರಯ್ಯ ಮಠಪತಿ.
Follow us
|

Updated on:Jul 08, 2023 | 6:35 PM

Free Bus Ride : ರಾಜ್ಯಾದ್ಯಂತ ಮಹಿಳೆಯರು ಉಚಿತ ಬಸ್​ಗಳಲ್ಲಿ ಪ್ರಯಾಣಿಸುತ್ತಾ ತಮ್ಮ ತಮ್ಮ ಕೆಲಸಕಾರ್ಯಗಳಲ್ಲಿ ಮುಳುಗಿದ್ದಾರೆ. ಪುರುಷರು ಅವಕಾಶ ಸಿಕ್ಕಲ್ಲೆಲ್ಲಾ ಆ ಬಗ್ಗೆ ಟೀಕೆ ಟಿಪ್ಪಣಿ ತಕರಾರುಗಳನ್ನು ತೆಗೆದದ್ದೂ ಆಯಿತು. ಸಾಮಾಜಿಕ ಜಾಲತಾಣಗಳಲ್ಲಿ ಅವುಗಳು ವೈರಲ್ಲೂ ಆದವು. ತದನಂತರ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಎನ್ನುವಾಗಲೇ ವಿಚಿತ್ರ ಘಟನೆಯೊಂದು ನಡೆದಿದೆ. ಪುರುಷನೊಬ್ಬ  ಬುರ್ಖಾ ಧರಿಸಿ ಉಚಿತ ಬಸ್​ ಪ್ರಯಾಣ ಮಾಡಲು ಪ್ರಯತ್ನ ನಡೆಸುತ್ತಿರುವಾಗ ಸ್ಥಳೀಯರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.

ಈ ವ್ಯಕ್ತಿಯನ್ನು ವಿಜಯಪುರದ ವೀರಭದ್ರಯ್ಯ ಮಠಪತಿ (Vijayapura) ಎಂದು ಗುರುತಿಸಲಾಗಿದೆ. ಗುರುವಾರದಂದು ಇವನು ಧಾರವಾಡದಿಂದ (Dharwad) ಉಚಿತವಾಗಿ ಪ್ರಯಾಣಿಸಲು ಇಲ್ಲಿಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತ ಕುಳಿತಿದ್ದಾನೆ. ಬುರ್ಖಾ ಧರಿಸಿ, ಮಹಿಳೆಯಂತೆ ನಟಿಸುತ್ತಿರುವಾಗ ಅಕ್ಕಪಕ್ಕದವರಿಗೆ ಅನುಮಾನ ಬಂದಿದೆ.

ಇದನ್ನೂ ಓದಿ : Viral Video: ಹಿಮಾಲಯದಲ್ಲಿಯೂ ಕುಡಿಯುವ ನೀರಿಗೆ ತತ್ವಾರ; ಈ ಉಪಾಯವೇ ಆಧಾರ

ನಂತರ ಕೆಲವರು ಅವನೊಂದಿಗೆ ಮಾತಿಗಿಳಿದಾಗ ತಾನು ಉಚಿತ ಬಸ್​ ಪ್ರಯಾಣಕ್ಕಾಗಿ ಕಾದು ಕುಳಿತಿಲ್ಲ, ಭಿಕ್ಷೆ ಬೇಡಲು ಹೀಗೆ ವೇಷ ಹಾಕಿದ್ದೇನೆ ಎಂದಿದ್ದಾನೆ. ಆದರೆ ಅವನ ಬಳಿ ನಕಲಿ ಆಧಾರ್ ಕಾರ್ಡ್​ ಪತ್ತೆಯಾಗಿದೆ. ಇದೆಲ್ಲವನ್ನು ಗಮನಿಸಿದಾಗ ಅಲ್ಲಿದ್ದವರಿಗೆ ಅವನು ಉಚಿತ ಬಸ್​ ಪ್ರಯಾಣಕ್ಕೆ ಸಂಚು ಹೂಡಿದ್ದುದು ಖಾತ್ರಿಯಾಗಿದೆ.

ಇದನ್ನೂ ಓದಿ : Viral Video: ತಮಿಳಿನ ”ಟಮ್ ಟಮ್”​ ಧಾಟಿಯಲ್ಲಿ ಟೊಮ್ಯಾಟೋ ಗೀತೆ

ಈ ಟ್ವೀಟ್​ ಅನ್ನು ಸತೀಶ್​ ಕಂದಗಲ್​ಪುರ್​​ ಎನ್ನುವವರು ಟ್ವೀಟ್ ಮಾಡಿದ್ದಾರೆ. ಇಂಡಿಯಾ ಟುಡೇ ಇದನ್ನು ವರದಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿಯ ಮೀಮ್​​ಗಳಲ್ಲಿಯ ಪಾತ್ರವೊಂದು ಹೀಗೊಂದು ದಿನ ಎದ್ದು ಬರಬಹುದು ಎಂಬ ಕಲ್ಪನೆಯೇ ಇರಲಿಲ್ಲ ಅಲ್ಲವೆ? ಏನಂತೀರಿ ಈ ವಿಡಿಯೋ ನೋಡಿದ ನೀವು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:34 pm, Sat, 8 July 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ