AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಧರಿಸಿದ ಪುರುಷ

Dharwad : ಉಚಿತ ಬಸ್​ ಪ್ರಯಾಣಕ್ಕಾಗಿ ಧಾರವಾಡದ ಬಸ್​ ಸ್ಟ್ಯಾಂಡಿನಲ್ಲಿ ಬಸ್ಸಿಗಾಗಿ ಕಾಯ್ದು ಕುಳಿತಾಗ, ಸ್ಥಳೀಯರ ಕೈಗೆ ಸಿಕ್ಕಿಬಿದ್ದು ಇವನ ನಾಟಕ ಬಯಲಾಗಿದೆ. ಆದರೆ ತಾನು ಬುರ್ಖಾ ಧರಿಸಿದ್ದ ಉದ್ದೇಶವೇ ಬೇರೆ ಎಂದಿದ್ದಾನೆ ಈತ!

Viral Video: ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಧರಿಸಿದ ಪುರುಷ
ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಹಾಕಿಕೊಂಡಿದ್ದ ವಿಜಯಪುರದ ವೀರಭದ್ರಯ್ಯ ಮಠಪತಿ.
ಶ್ರೀದೇವಿ ಕಳಸದ
|

Updated on:Jul 08, 2023 | 6:35 PM

Share

Free Bus Ride : ರಾಜ್ಯಾದ್ಯಂತ ಮಹಿಳೆಯರು ಉಚಿತ ಬಸ್​ಗಳಲ್ಲಿ ಪ್ರಯಾಣಿಸುತ್ತಾ ತಮ್ಮ ತಮ್ಮ ಕೆಲಸಕಾರ್ಯಗಳಲ್ಲಿ ಮುಳುಗಿದ್ದಾರೆ. ಪುರುಷರು ಅವಕಾಶ ಸಿಕ್ಕಲ್ಲೆಲ್ಲಾ ಆ ಬಗ್ಗೆ ಟೀಕೆ ಟಿಪ್ಪಣಿ ತಕರಾರುಗಳನ್ನು ತೆಗೆದದ್ದೂ ಆಯಿತು. ಸಾಮಾಜಿಕ ಜಾಲತಾಣಗಳಲ್ಲಿ ಅವುಗಳು ವೈರಲ್ಲೂ ಆದವು. ತದನಂತರ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಎನ್ನುವಾಗಲೇ ವಿಚಿತ್ರ ಘಟನೆಯೊಂದು ನಡೆದಿದೆ. ಪುರುಷನೊಬ್ಬ  ಬುರ್ಖಾ ಧರಿಸಿ ಉಚಿತ ಬಸ್​ ಪ್ರಯಾಣ ಮಾಡಲು ಪ್ರಯತ್ನ ನಡೆಸುತ್ತಿರುವಾಗ ಸ್ಥಳೀಯರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.

ಈ ವ್ಯಕ್ತಿಯನ್ನು ವಿಜಯಪುರದ ವೀರಭದ್ರಯ್ಯ ಮಠಪತಿ (Vijayapura) ಎಂದು ಗುರುತಿಸಲಾಗಿದೆ. ಗುರುವಾರದಂದು ಇವನು ಧಾರವಾಡದಿಂದ (Dharwad) ಉಚಿತವಾಗಿ ಪ್ರಯಾಣಿಸಲು ಇಲ್ಲಿಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತ ಕುಳಿತಿದ್ದಾನೆ. ಬುರ್ಖಾ ಧರಿಸಿ, ಮಹಿಳೆಯಂತೆ ನಟಿಸುತ್ತಿರುವಾಗ ಅಕ್ಕಪಕ್ಕದವರಿಗೆ ಅನುಮಾನ ಬಂದಿದೆ.

ಇದನ್ನೂ ಓದಿ : Viral Video: ಹಿಮಾಲಯದಲ್ಲಿಯೂ ಕುಡಿಯುವ ನೀರಿಗೆ ತತ್ವಾರ; ಈ ಉಪಾಯವೇ ಆಧಾರ

ನಂತರ ಕೆಲವರು ಅವನೊಂದಿಗೆ ಮಾತಿಗಿಳಿದಾಗ ತಾನು ಉಚಿತ ಬಸ್​ ಪ್ರಯಾಣಕ್ಕಾಗಿ ಕಾದು ಕುಳಿತಿಲ್ಲ, ಭಿಕ್ಷೆ ಬೇಡಲು ಹೀಗೆ ವೇಷ ಹಾಕಿದ್ದೇನೆ ಎಂದಿದ್ದಾನೆ. ಆದರೆ ಅವನ ಬಳಿ ನಕಲಿ ಆಧಾರ್ ಕಾರ್ಡ್​ ಪತ್ತೆಯಾಗಿದೆ. ಇದೆಲ್ಲವನ್ನು ಗಮನಿಸಿದಾಗ ಅಲ್ಲಿದ್ದವರಿಗೆ ಅವನು ಉಚಿತ ಬಸ್​ ಪ್ರಯಾಣಕ್ಕೆ ಸಂಚು ಹೂಡಿದ್ದುದು ಖಾತ್ರಿಯಾಗಿದೆ.

ಇದನ್ನೂ ಓದಿ : Viral Video: ತಮಿಳಿನ ”ಟಮ್ ಟಮ್”​ ಧಾಟಿಯಲ್ಲಿ ಟೊಮ್ಯಾಟೋ ಗೀತೆ

ಈ ಟ್ವೀಟ್​ ಅನ್ನು ಸತೀಶ್​ ಕಂದಗಲ್​ಪುರ್​​ ಎನ್ನುವವರು ಟ್ವೀಟ್ ಮಾಡಿದ್ದಾರೆ. ಇಂಡಿಯಾ ಟುಡೇ ಇದನ್ನು ವರದಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿಯ ಮೀಮ್​​ಗಳಲ್ಲಿಯ ಪಾತ್ರವೊಂದು ಹೀಗೊಂದು ದಿನ ಎದ್ದು ಬರಬಹುದು ಎಂಬ ಕಲ್ಪನೆಯೇ ಇರಲಿಲ್ಲ ಅಲ್ಲವೆ? ಏನಂತೀರಿ ಈ ವಿಡಿಯೋ ನೋಡಿದ ನೀವು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:34 pm, Sat, 8 July 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ