AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಧರಿಸಿದ ಪುರುಷ

Dharwad : ಉಚಿತ ಬಸ್​ ಪ್ರಯಾಣಕ್ಕಾಗಿ ಧಾರವಾಡದ ಬಸ್​ ಸ್ಟ್ಯಾಂಡಿನಲ್ಲಿ ಬಸ್ಸಿಗಾಗಿ ಕಾಯ್ದು ಕುಳಿತಾಗ, ಸ್ಥಳೀಯರ ಕೈಗೆ ಸಿಕ್ಕಿಬಿದ್ದು ಇವನ ನಾಟಕ ಬಯಲಾಗಿದೆ. ಆದರೆ ತಾನು ಬುರ್ಖಾ ಧರಿಸಿದ್ದ ಉದ್ದೇಶವೇ ಬೇರೆ ಎಂದಿದ್ದಾನೆ ಈತ!

Viral Video: ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಧರಿಸಿದ ಪುರುಷ
ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಹಾಕಿಕೊಂಡಿದ್ದ ವಿಜಯಪುರದ ವೀರಭದ್ರಯ್ಯ ಮಠಪತಿ.
ಶ್ರೀದೇವಿ ಕಳಸದ
|

Updated on:Jul 08, 2023 | 6:35 PM

Share

Free Bus Ride : ರಾಜ್ಯಾದ್ಯಂತ ಮಹಿಳೆಯರು ಉಚಿತ ಬಸ್​ಗಳಲ್ಲಿ ಪ್ರಯಾಣಿಸುತ್ತಾ ತಮ್ಮ ತಮ್ಮ ಕೆಲಸಕಾರ್ಯಗಳಲ್ಲಿ ಮುಳುಗಿದ್ದಾರೆ. ಪುರುಷರು ಅವಕಾಶ ಸಿಕ್ಕಲ್ಲೆಲ್ಲಾ ಆ ಬಗ್ಗೆ ಟೀಕೆ ಟಿಪ್ಪಣಿ ತಕರಾರುಗಳನ್ನು ತೆಗೆದದ್ದೂ ಆಯಿತು. ಸಾಮಾಜಿಕ ಜಾಲತಾಣಗಳಲ್ಲಿ ಅವುಗಳು ವೈರಲ್ಲೂ ಆದವು. ತದನಂತರ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಎನ್ನುವಾಗಲೇ ವಿಚಿತ್ರ ಘಟನೆಯೊಂದು ನಡೆದಿದೆ. ಪುರುಷನೊಬ್ಬ  ಬುರ್ಖಾ ಧರಿಸಿ ಉಚಿತ ಬಸ್​ ಪ್ರಯಾಣ ಮಾಡಲು ಪ್ರಯತ್ನ ನಡೆಸುತ್ತಿರುವಾಗ ಸ್ಥಳೀಯರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.

ಈ ವ್ಯಕ್ತಿಯನ್ನು ವಿಜಯಪುರದ ವೀರಭದ್ರಯ್ಯ ಮಠಪತಿ (Vijayapura) ಎಂದು ಗುರುತಿಸಲಾಗಿದೆ. ಗುರುವಾರದಂದು ಇವನು ಧಾರವಾಡದಿಂದ (Dharwad) ಉಚಿತವಾಗಿ ಪ್ರಯಾಣಿಸಲು ಇಲ್ಲಿಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತ ಕುಳಿತಿದ್ದಾನೆ. ಬುರ್ಖಾ ಧರಿಸಿ, ಮಹಿಳೆಯಂತೆ ನಟಿಸುತ್ತಿರುವಾಗ ಅಕ್ಕಪಕ್ಕದವರಿಗೆ ಅನುಮಾನ ಬಂದಿದೆ.

ಇದನ್ನೂ ಓದಿ : Viral Video: ಹಿಮಾಲಯದಲ್ಲಿಯೂ ಕುಡಿಯುವ ನೀರಿಗೆ ತತ್ವಾರ; ಈ ಉಪಾಯವೇ ಆಧಾರ

ನಂತರ ಕೆಲವರು ಅವನೊಂದಿಗೆ ಮಾತಿಗಿಳಿದಾಗ ತಾನು ಉಚಿತ ಬಸ್​ ಪ್ರಯಾಣಕ್ಕಾಗಿ ಕಾದು ಕುಳಿತಿಲ್ಲ, ಭಿಕ್ಷೆ ಬೇಡಲು ಹೀಗೆ ವೇಷ ಹಾಕಿದ್ದೇನೆ ಎಂದಿದ್ದಾನೆ. ಆದರೆ ಅವನ ಬಳಿ ನಕಲಿ ಆಧಾರ್ ಕಾರ್ಡ್​ ಪತ್ತೆಯಾಗಿದೆ. ಇದೆಲ್ಲವನ್ನು ಗಮನಿಸಿದಾಗ ಅಲ್ಲಿದ್ದವರಿಗೆ ಅವನು ಉಚಿತ ಬಸ್​ ಪ್ರಯಾಣಕ್ಕೆ ಸಂಚು ಹೂಡಿದ್ದುದು ಖಾತ್ರಿಯಾಗಿದೆ.

ಇದನ್ನೂ ಓದಿ : Viral Video: ತಮಿಳಿನ ”ಟಮ್ ಟಮ್”​ ಧಾಟಿಯಲ್ಲಿ ಟೊಮ್ಯಾಟೋ ಗೀತೆ

ಈ ಟ್ವೀಟ್​ ಅನ್ನು ಸತೀಶ್​ ಕಂದಗಲ್​ಪುರ್​​ ಎನ್ನುವವರು ಟ್ವೀಟ್ ಮಾಡಿದ್ದಾರೆ. ಇಂಡಿಯಾ ಟುಡೇ ಇದನ್ನು ವರದಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿಯ ಮೀಮ್​​ಗಳಲ್ಲಿಯ ಪಾತ್ರವೊಂದು ಹೀಗೊಂದು ದಿನ ಎದ್ದು ಬರಬಹುದು ಎಂಬ ಕಲ್ಪನೆಯೇ ಇರಲಿಲ್ಲ ಅಲ್ಲವೆ? ಏನಂತೀರಿ ಈ ವಿಡಿಯೋ ನೋಡಿದ ನೀವು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:34 pm, Sat, 8 July 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ