AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಧರಿಸಿದ ಪುರುಷ

Dharwad : ಉಚಿತ ಬಸ್​ ಪ್ರಯಾಣಕ್ಕಾಗಿ ಧಾರವಾಡದ ಬಸ್​ ಸ್ಟ್ಯಾಂಡಿನಲ್ಲಿ ಬಸ್ಸಿಗಾಗಿ ಕಾಯ್ದು ಕುಳಿತಾಗ, ಸ್ಥಳೀಯರ ಕೈಗೆ ಸಿಕ್ಕಿಬಿದ್ದು ಇವನ ನಾಟಕ ಬಯಲಾಗಿದೆ. ಆದರೆ ತಾನು ಬುರ್ಖಾ ಧರಿಸಿದ್ದ ಉದ್ದೇಶವೇ ಬೇರೆ ಎಂದಿದ್ದಾನೆ ಈತ!

Viral Video: ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಧರಿಸಿದ ಪುರುಷ
ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಹಾಕಿಕೊಂಡಿದ್ದ ವಿಜಯಪುರದ ವೀರಭದ್ರಯ್ಯ ಮಠಪತಿ.
ಶ್ರೀದೇವಿ ಕಳಸದ
|

Updated on:Jul 08, 2023 | 6:35 PM

Share

Free Bus Ride : ರಾಜ್ಯಾದ್ಯಂತ ಮಹಿಳೆಯರು ಉಚಿತ ಬಸ್​ಗಳಲ್ಲಿ ಪ್ರಯಾಣಿಸುತ್ತಾ ತಮ್ಮ ತಮ್ಮ ಕೆಲಸಕಾರ್ಯಗಳಲ್ಲಿ ಮುಳುಗಿದ್ದಾರೆ. ಪುರುಷರು ಅವಕಾಶ ಸಿಕ್ಕಲ್ಲೆಲ್ಲಾ ಆ ಬಗ್ಗೆ ಟೀಕೆ ಟಿಪ್ಪಣಿ ತಕರಾರುಗಳನ್ನು ತೆಗೆದದ್ದೂ ಆಯಿತು. ಸಾಮಾಜಿಕ ಜಾಲತಾಣಗಳಲ್ಲಿ ಅವುಗಳು ವೈರಲ್ಲೂ ಆದವು. ತದನಂತರ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಎನ್ನುವಾಗಲೇ ವಿಚಿತ್ರ ಘಟನೆಯೊಂದು ನಡೆದಿದೆ. ಪುರುಷನೊಬ್ಬ  ಬುರ್ಖಾ ಧರಿಸಿ ಉಚಿತ ಬಸ್​ ಪ್ರಯಾಣ ಮಾಡಲು ಪ್ರಯತ್ನ ನಡೆಸುತ್ತಿರುವಾಗ ಸ್ಥಳೀಯರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.

ಈ ವ್ಯಕ್ತಿಯನ್ನು ವಿಜಯಪುರದ ವೀರಭದ್ರಯ್ಯ ಮಠಪತಿ (Vijayapura) ಎಂದು ಗುರುತಿಸಲಾಗಿದೆ. ಗುರುವಾರದಂದು ಇವನು ಧಾರವಾಡದಿಂದ (Dharwad) ಉಚಿತವಾಗಿ ಪ್ರಯಾಣಿಸಲು ಇಲ್ಲಿಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತ ಕುಳಿತಿದ್ದಾನೆ. ಬುರ್ಖಾ ಧರಿಸಿ, ಮಹಿಳೆಯಂತೆ ನಟಿಸುತ್ತಿರುವಾಗ ಅಕ್ಕಪಕ್ಕದವರಿಗೆ ಅನುಮಾನ ಬಂದಿದೆ.

ಇದನ್ನೂ ಓದಿ : Viral Video: ಹಿಮಾಲಯದಲ್ಲಿಯೂ ಕುಡಿಯುವ ನೀರಿಗೆ ತತ್ವಾರ; ಈ ಉಪಾಯವೇ ಆಧಾರ

ನಂತರ ಕೆಲವರು ಅವನೊಂದಿಗೆ ಮಾತಿಗಿಳಿದಾಗ ತಾನು ಉಚಿತ ಬಸ್​ ಪ್ರಯಾಣಕ್ಕಾಗಿ ಕಾದು ಕುಳಿತಿಲ್ಲ, ಭಿಕ್ಷೆ ಬೇಡಲು ಹೀಗೆ ವೇಷ ಹಾಕಿದ್ದೇನೆ ಎಂದಿದ್ದಾನೆ. ಆದರೆ ಅವನ ಬಳಿ ನಕಲಿ ಆಧಾರ್ ಕಾರ್ಡ್​ ಪತ್ತೆಯಾಗಿದೆ. ಇದೆಲ್ಲವನ್ನು ಗಮನಿಸಿದಾಗ ಅಲ್ಲಿದ್ದವರಿಗೆ ಅವನು ಉಚಿತ ಬಸ್​ ಪ್ರಯಾಣಕ್ಕೆ ಸಂಚು ಹೂಡಿದ್ದುದು ಖಾತ್ರಿಯಾಗಿದೆ.

ಇದನ್ನೂ ಓದಿ : Viral Video: ತಮಿಳಿನ ”ಟಮ್ ಟಮ್”​ ಧಾಟಿಯಲ್ಲಿ ಟೊಮ್ಯಾಟೋ ಗೀತೆ

ಈ ಟ್ವೀಟ್​ ಅನ್ನು ಸತೀಶ್​ ಕಂದಗಲ್​ಪುರ್​​ ಎನ್ನುವವರು ಟ್ವೀಟ್ ಮಾಡಿದ್ದಾರೆ. ಇಂಡಿಯಾ ಟುಡೇ ಇದನ್ನು ವರದಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿಯ ಮೀಮ್​​ಗಳಲ್ಲಿಯ ಪಾತ್ರವೊಂದು ಹೀಗೊಂದು ದಿನ ಎದ್ದು ಬರಬಹುದು ಎಂಬ ಕಲ್ಪನೆಯೇ ಇರಲಿಲ್ಲ ಅಲ್ಲವೆ? ಏನಂತೀರಿ ಈ ವಿಡಿಯೋ ನೋಡಿದ ನೀವು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:34 pm, Sat, 8 July 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ