Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಧರಿಸಿದ ಪುರುಷ

Dharwad : ಉಚಿತ ಬಸ್​ ಪ್ರಯಾಣಕ್ಕಾಗಿ ಧಾರವಾಡದ ಬಸ್​ ಸ್ಟ್ಯಾಂಡಿನಲ್ಲಿ ಬಸ್ಸಿಗಾಗಿ ಕಾಯ್ದು ಕುಳಿತಾಗ, ಸ್ಥಳೀಯರ ಕೈಗೆ ಸಿಕ್ಕಿಬಿದ್ದು ಇವನ ನಾಟಕ ಬಯಲಾಗಿದೆ. ಆದರೆ ತಾನು ಬುರ್ಖಾ ಧರಿಸಿದ್ದ ಉದ್ದೇಶವೇ ಬೇರೆ ಎಂದಿದ್ದಾನೆ ಈತ!

Viral Video: ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಧರಿಸಿದ ಪುರುಷ
ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಹಾಕಿಕೊಂಡಿದ್ದ ವಿಜಯಪುರದ ವೀರಭದ್ರಯ್ಯ ಮಠಪತಿ.
Follow us
ಶ್ರೀದೇವಿ ಕಳಸದ
|

Updated on:Jul 08, 2023 | 6:35 PM

Free Bus Ride : ರಾಜ್ಯಾದ್ಯಂತ ಮಹಿಳೆಯರು ಉಚಿತ ಬಸ್​ಗಳಲ್ಲಿ ಪ್ರಯಾಣಿಸುತ್ತಾ ತಮ್ಮ ತಮ್ಮ ಕೆಲಸಕಾರ್ಯಗಳಲ್ಲಿ ಮುಳುಗಿದ್ದಾರೆ. ಪುರುಷರು ಅವಕಾಶ ಸಿಕ್ಕಲ್ಲೆಲ್ಲಾ ಆ ಬಗ್ಗೆ ಟೀಕೆ ಟಿಪ್ಪಣಿ ತಕರಾರುಗಳನ್ನು ತೆಗೆದದ್ದೂ ಆಯಿತು. ಸಾಮಾಜಿಕ ಜಾಲತಾಣಗಳಲ್ಲಿ ಅವುಗಳು ವೈರಲ್ಲೂ ಆದವು. ತದನಂತರ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಎನ್ನುವಾಗಲೇ ವಿಚಿತ್ರ ಘಟನೆಯೊಂದು ನಡೆದಿದೆ. ಪುರುಷನೊಬ್ಬ  ಬುರ್ಖಾ ಧರಿಸಿ ಉಚಿತ ಬಸ್​ ಪ್ರಯಾಣ ಮಾಡಲು ಪ್ರಯತ್ನ ನಡೆಸುತ್ತಿರುವಾಗ ಸ್ಥಳೀಯರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.

ಈ ವ್ಯಕ್ತಿಯನ್ನು ವಿಜಯಪುರದ ವೀರಭದ್ರಯ್ಯ ಮಠಪತಿ (Vijayapura) ಎಂದು ಗುರುತಿಸಲಾಗಿದೆ. ಗುರುವಾರದಂದು ಇವನು ಧಾರವಾಡದಿಂದ (Dharwad) ಉಚಿತವಾಗಿ ಪ್ರಯಾಣಿಸಲು ಇಲ್ಲಿಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತ ಕುಳಿತಿದ್ದಾನೆ. ಬುರ್ಖಾ ಧರಿಸಿ, ಮಹಿಳೆಯಂತೆ ನಟಿಸುತ್ತಿರುವಾಗ ಅಕ್ಕಪಕ್ಕದವರಿಗೆ ಅನುಮಾನ ಬಂದಿದೆ.

ಇದನ್ನೂ ಓದಿ : Viral Video: ಹಿಮಾಲಯದಲ್ಲಿಯೂ ಕುಡಿಯುವ ನೀರಿಗೆ ತತ್ವಾರ; ಈ ಉಪಾಯವೇ ಆಧಾರ

ನಂತರ ಕೆಲವರು ಅವನೊಂದಿಗೆ ಮಾತಿಗಿಳಿದಾಗ ತಾನು ಉಚಿತ ಬಸ್​ ಪ್ರಯಾಣಕ್ಕಾಗಿ ಕಾದು ಕುಳಿತಿಲ್ಲ, ಭಿಕ್ಷೆ ಬೇಡಲು ಹೀಗೆ ವೇಷ ಹಾಕಿದ್ದೇನೆ ಎಂದಿದ್ದಾನೆ. ಆದರೆ ಅವನ ಬಳಿ ನಕಲಿ ಆಧಾರ್ ಕಾರ್ಡ್​ ಪತ್ತೆಯಾಗಿದೆ. ಇದೆಲ್ಲವನ್ನು ಗಮನಿಸಿದಾಗ ಅಲ್ಲಿದ್ದವರಿಗೆ ಅವನು ಉಚಿತ ಬಸ್​ ಪ್ರಯಾಣಕ್ಕೆ ಸಂಚು ಹೂಡಿದ್ದುದು ಖಾತ್ರಿಯಾಗಿದೆ.

ಇದನ್ನೂ ಓದಿ : Viral Video: ತಮಿಳಿನ ”ಟಮ್ ಟಮ್”​ ಧಾಟಿಯಲ್ಲಿ ಟೊಮ್ಯಾಟೋ ಗೀತೆ

ಈ ಟ್ವೀಟ್​ ಅನ್ನು ಸತೀಶ್​ ಕಂದಗಲ್​ಪುರ್​​ ಎನ್ನುವವರು ಟ್ವೀಟ್ ಮಾಡಿದ್ದಾರೆ. ಇಂಡಿಯಾ ಟುಡೇ ಇದನ್ನು ವರದಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿಯ ಮೀಮ್​​ಗಳಲ್ಲಿಯ ಪಾತ್ರವೊಂದು ಹೀಗೊಂದು ದಿನ ಎದ್ದು ಬರಬಹುದು ಎಂಬ ಕಲ್ಪನೆಯೇ ಇರಲಿಲ್ಲ ಅಲ್ಲವೆ? ಏನಂತೀರಿ ಈ ವಿಡಿಯೋ ನೋಡಿದ ನೀವು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:34 pm, Sat, 8 July 23

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ