AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ದೇಸಿ ಕ್ರೀಡೆಯ ಸೊಬಗು; ದುಡಿಮೆಯ ನಡುವೆ ಖೋಖೋ ಆಟ ಆಡಿದ ನಾರಿಮಣಿಗಳು

ಹಳ್ಳಿ ಬದುಕು ನಿಜಕ್ಕೂ ಸುಂದರ. ಮಣ್ಣಿನ ಮಕ್ಕಳಾಗಿ ದುಡಿಯುವ ಹಾಗೂ ಬದುಕನ್ನು ಇರುವುದರಲ್ಲೇ ಆನಂದಿಸುವ ಹಳ್ಳಿ ಜನರ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ದುಡಿಮೆ ನಡುವೆ ಹಳ್ಳಿಯ ಮಹಿಳೆಯರು ಖೋ ಖೋ ಆಟ ಆಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಇದು ದೇಸಿ ಕ್ರೀಡೆಯ ಸೊಬಗು; ದುಡಿಮೆಯ ನಡುವೆ ಖೋಖೋ ಆಟ ಆಡಿದ ನಾರಿಮಣಿಗಳು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 28, 2026 | 12:44 PM

Share

ಹಳ್ಳಿ ಬದುಕೇ (village life) ಹಾಗೆ, ಕೃಷಿ ಕೆಲಸ, ಕಣ್ಣ ತುಂಬಾ ನಿದ್ದೆ, ಇರಲು ಪುಟ್ಟ ಸೂರು. ಕೃಷಿ ಕಾಯಕವನ್ನೇ ನಂಬಿಕೊಂಡು ಬದುಕು ಸಾಗಿಸುವವರು ಈ ಹಳ್ಳಿ ಮಕ್ಕಳು. ವಿರಾಮದ ಸಮಯದಲ್ಲಿ ಊರ ಮಂದಿ ಬೆರೆಯುತ ಹಳ್ಳಿಯ ಸಾಂಪ್ರಾದಾಯಿಕ ಆಟ ಆಡುತ್ತಾ ಸಮಯ ಕಳೆಯುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಇದೀಗ ಕೆಲಸದ ಒತ್ತಡವನ್ನು ಬದಿಗಿರಿಸಿ ಖೋ ಖೋ (Kho Kho) ಆಟ ಆಡುತ್ತಾ ತಮ್ಮ ಪ್ರತಿಭೆಗಳ ಅನಾವರಣ ಮಾಡಿರುವ ಮಹಿಳಾಮಣಿಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಈ ದೃಶ್ಯವನ್ನು ನೆಟ್ಟಿಗರು ಕಣ್ತುಂಬಿಸಿಕೊಂಡಿದ್ದಾರೆ.

ಖೋ ಖೋ ಚಾಂಪಿಯನ್ಸ್ (Kho Kho Champions) ಹೆಸರಿನ ಇನ್ಸ್ಟಾಗ್ರಾಮ್ ವಿಡಿಯೋ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಹಳ್ಳಿಯ ಮಹಿಳೆಯರು ತಮ್ಮ ಕೆಲಸದ ಬಿಡುವಿನ ಸಮಯದಲ್ಲಿ ಖೋ ಖೋ ಆಟ ಆಡಿ ಖುಷಿ ಪಡುತ್ತಿರುವುದನ್ನು ಕಾಣಬಹುದು. ಹೆಂಗಳೆಯರು ದೇಸಿ ಆಟ ಆಡಿ ಖುಷಿ ಪಡುತ್ತಿದ್ದರೆ ಪುರುಷರು ಈ ದೃಶ್ಯವನ್ನು ಕಣ್ತುಂಬಿಸಿಕೊಳ್ಳುತ್ತಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಇದು ದೇಸಿ ಕ್ರೀಡೆಯ ಕರಾಮತ್ತು; ಸೀರೆಯುಟ್ಟ ನಾರಿಮಣಿಗಳ ಕಬಡ್ಡಿ ಆಟ ಹೇಗಿದೆ ನೋಡಿ

ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಖೋ ಖೋ ಆಟದಲ್ಲಿ ಮಿಂಚಿದ ಪ್ರತಿಭೆಗಳು ಎಂದು ಹೇಳಿದ್ದಾರೆ. ಕೆಲವರು ಹಾರ್ಟ್ ಸಿಂಬಲ್ ಕಳುಹಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ