AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರಯಾಣಿಕರೊಬ್ಬರಿಗೆ ಅತಿಸಾರ; ಇದು ಜೈವಿಕ ಅಪಾಯ ಎಂದು ವಿಮಾನವನ್ನೇ ಯೂಟರ್ನ್ ಮಾಡಿದ ಪೈಲಟ್

Pilot: ವಿಮಾನವು ಅಟ್ಲಂಟಾದಿಂದ ಹೊರಟ ಎರಡು ಗಂಟೆಗಳ ನಂತರ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಅತಿಸಾರದಿಂದ ಬಳಲುತ್ತಿರುವ ವಿಷಯ ತಿಳಿದುಬಂದಿದೆ. ಪ್ರಯಾಣಿಕರ ಇಚ್ಛೆಯಂತೆ ಅಟ್ಲಾಂಟಾಗೆ ವಿಮಾನವನ್ನು ತಿರುಗಿಸುವ ತುರ್ತು ಉಂಟಾಗಿದೆ. ಈ ವಿಷಯವನ್ನು ಪೈಲಟ್​ ಏರ್​ ಟ್ರಾಫಿಕ್​ ಕಂಟ್ರೋಲರ್​ಗೆ ತಿಳಿಸಿದ ಆಡಿಯೋ ಇದೀಗ ವೈರಲ್ ಆಗಿದೆ.

Viral Video: ಪ್ರಯಾಣಿಕರೊಬ್ಬರಿಗೆ ಅತಿಸಾರ; ಇದು ಜೈವಿಕ ಅಪಾಯ ಎಂದು ವಿಮಾನವನ್ನೇ ಯೂಟರ್ನ್ ಮಾಡಿದ ಪೈಲಟ್
ಡೆಲ್ಟಾ ಏರ್​ಲೈನ್​ನ ವಿಮಾನ (ಪ್ರಾತಿನಿಧಿಕ ಚಿತ್ರ)
Follow us
ಶ್ರೀದೇವಿ ಕಳಸದ
|

Updated on:Sep 05, 2023 | 5:18 PM

America: ಅನೇಕ ಕಾರಣಗಳಿಂದ ವಿಮಾನಗಳು ರದ್ದಾಗುತ್ತವೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ರದ್ದುಮಾಡುತ್ತಾರೆ. ಆದರೆ ಇದೀಗ ಪೈಲಟ್​ ಪ್ರಯಾಣಿಕರಿಗಾಗಿ ವಿಮಾನವನ್ನೇ ಯೂಟರ್ನ್​ ಮಾಡಿದ ಅಪರೂಪದ ಘಟನೆ ನಡೆದಿದೆ. ವಿಮಾನದಲ್ಲಿರುವ ಪ್ರಯಾಣಿಕರೊಬ್ಬರು ಅತಿಸಾರದಿಂದ (Diarrhea) ಬಳಲುತ್ತಿದ್ದಾರೆ ಎನ್ನುವ ವಿಷಯ ತಿಳಿಯುತ್ತಿದ್ದಂತೆ ಡೆಲ್ಟಾ ಏರ್​​ಲೈನ್ಸ್​ನ ಪೈಲಟ್​ ವಿಮಾನವನ್ನು ಯೂ ಟರ್ನ್ ತೆಗೆದುಕೊಂಡಿದ್ದಾರೆ. ಇಷ್ಟೇ ಅಲ್ಲ, ಇದೊಂದು ಜೈವಿಕ ಅಪಾಯ ಎಂದೂ ಹೇಳಿದ್ದಾರೆ. ಜಾರ್ಜಿಯಾದ ಅಟ್ಲಾಂಟಾದಿಂದ ಸ್ಪೇನ್‌ನ ಬಾರ್ಸಿಲೋನಾ ತಲುಪಲು ಎಂಟು ಗಂಟೆಗಳ ಕಾಲ ಪ್ರಯಾಣಿಸಬೇಕಾಗುತ್ತದೆ. ಆದರೆ ಮಾರ್ಗಮಧ್ಯೆ ಸಮಸ್ಯೆ ಉದ್ಭವಿಸಿದ್ದರಿಂದ ಪೈಲಟ್ ಈ ನಿರ್ಧಾರ ತೆಗೆದುಕೊಂಡು ಒಟ್ಟಾರೆ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸಿದ್ದಾರೆ.

ಇದನ್ನೂ ಓದಿ : Viral Video: ಸಪ್ತಸಾಗರದಾಚೆ ಎಲ್ಲೋ; ಸುನಿಧಿ ಗಣೇಶ್ ಹಾಡಿರುವ ಟೈಟಲ್ ಟ್ರ್ಯಾಕ್​ ವೈರಲ್ 

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ಈ ವಿಮಾನವು ಟೇಕ್​ಆಫ್ ಆದ ಎರಡು ಗಂಟೆಗಳ ನಂತರ ಯೂಟೂರ್ನ್ ತೆಗೆದುಕೊಂಡಿದೆ. ಈ ನಿರ್ಧಾರದ ಹಿಂದಿನ ಕಾರಣವನ್ನು ಪೈಲಟ್​ ಫ್ಲೈಟ್ ಡೆಕ್‌ನಿಂದ ಏರ್ ಟ್ರಾಫಿಕ್ ಕಂಟ್ರೋಲ್​ಗೆ ತಲುಪಿಸುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪೈಲಟ್​ನ ಆಡಿಯೋ ಇಲ್ಲಿ ಕೇಳಿ

ವಿಮಾನವು ಅಟ್ಲಾಂಟಾಗೆ ಹಿಂದಿರುಗಿದ ನಂತರ ಎಲ್ಲ ಪ್ರಯಾಣಿಕರನ್ನು ಮತ್ತೊಂದು ವಿಮಾನದ ಮೂಲಕ ಬಾರ್ಸಿಲೋನಾಗೆ ತಲುಪಿಸಲಾಯಿತು. ಅವರೆಲ್ಲರೂ ಸುಮಾರು ಎಂಟು ಗಂಟೆ ತಡವಾಗಿ ಬಾರ್ಸಿಲೋನಾ ತಲುಪಿದರು. ತುರ್ತು ವೈದ್ಯಕೀಯ ಕಾರಣಗಳಿಗಾಗಿ ಈ ತೀರ್ಮಾನ ಕೈಗೊಳ್ಳಬೇಕಾಯಿತೆಂದು ಏರ್​​ಲೈನ್ಸ್​ನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಂತರ ವಿಮಾನವನ್ನು ಶುಚಿಗೊಳಿಸಲಾಗಿದೆ. ಆದರೆ, ಅತಿಸಾರದಿಂದ ಬಳಲುತ್ತಿದ್ದ ಪ್ರಯಾಣಿಕರ ವಿವರವನ್ನು ಅವರು ಗೌಪ್ಯವಾಗಿರಿಸಿದ್ದಾರೆ. ಉಳಿದ ಪ್ರಯಾಣಿಕರಿಗೆ ಉಂಟಾದ ತೊಂದರೆಗಾಗಿ ಕ್ಷಮೆ ಕೇಳಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:17 pm, Tue, 5 September 23

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ