AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರಯಾಣಿಕರೊಬ್ಬರಿಗೆ ಅತಿಸಾರ; ಇದು ಜೈವಿಕ ಅಪಾಯ ಎಂದು ವಿಮಾನವನ್ನೇ ಯೂಟರ್ನ್ ಮಾಡಿದ ಪೈಲಟ್

Pilot: ವಿಮಾನವು ಅಟ್ಲಂಟಾದಿಂದ ಹೊರಟ ಎರಡು ಗಂಟೆಗಳ ನಂತರ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಅತಿಸಾರದಿಂದ ಬಳಲುತ್ತಿರುವ ವಿಷಯ ತಿಳಿದುಬಂದಿದೆ. ಪ್ರಯಾಣಿಕರ ಇಚ್ಛೆಯಂತೆ ಅಟ್ಲಾಂಟಾಗೆ ವಿಮಾನವನ್ನು ತಿರುಗಿಸುವ ತುರ್ತು ಉಂಟಾಗಿದೆ. ಈ ವಿಷಯವನ್ನು ಪೈಲಟ್​ ಏರ್​ ಟ್ರಾಫಿಕ್​ ಕಂಟ್ರೋಲರ್​ಗೆ ತಿಳಿಸಿದ ಆಡಿಯೋ ಇದೀಗ ವೈರಲ್ ಆಗಿದೆ.

Viral Video: ಪ್ರಯಾಣಿಕರೊಬ್ಬರಿಗೆ ಅತಿಸಾರ; ಇದು ಜೈವಿಕ ಅಪಾಯ ಎಂದು ವಿಮಾನವನ್ನೇ ಯೂಟರ್ನ್ ಮಾಡಿದ ಪೈಲಟ್
ಡೆಲ್ಟಾ ಏರ್​ಲೈನ್​ನ ವಿಮಾನ (ಪ್ರಾತಿನಿಧಿಕ ಚಿತ್ರ)
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Sep 05, 2023 | 5:18 PM

Share

America: ಅನೇಕ ಕಾರಣಗಳಿಂದ ವಿಮಾನಗಳು ರದ್ದಾಗುತ್ತವೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ರದ್ದುಮಾಡುತ್ತಾರೆ. ಆದರೆ ಇದೀಗ ಪೈಲಟ್​ ಪ್ರಯಾಣಿಕರಿಗಾಗಿ ವಿಮಾನವನ್ನೇ ಯೂಟರ್ನ್​ ಮಾಡಿದ ಅಪರೂಪದ ಘಟನೆ ನಡೆದಿದೆ. ವಿಮಾನದಲ್ಲಿರುವ ಪ್ರಯಾಣಿಕರೊಬ್ಬರು ಅತಿಸಾರದಿಂದ (Diarrhea) ಬಳಲುತ್ತಿದ್ದಾರೆ ಎನ್ನುವ ವಿಷಯ ತಿಳಿಯುತ್ತಿದ್ದಂತೆ ಡೆಲ್ಟಾ ಏರ್​​ಲೈನ್ಸ್​ನ ಪೈಲಟ್​ ವಿಮಾನವನ್ನು ಯೂ ಟರ್ನ್ ತೆಗೆದುಕೊಂಡಿದ್ದಾರೆ. ಇಷ್ಟೇ ಅಲ್ಲ, ಇದೊಂದು ಜೈವಿಕ ಅಪಾಯ ಎಂದೂ ಹೇಳಿದ್ದಾರೆ. ಜಾರ್ಜಿಯಾದ ಅಟ್ಲಾಂಟಾದಿಂದ ಸ್ಪೇನ್‌ನ ಬಾರ್ಸಿಲೋನಾ ತಲುಪಲು ಎಂಟು ಗಂಟೆಗಳ ಕಾಲ ಪ್ರಯಾಣಿಸಬೇಕಾಗುತ್ತದೆ. ಆದರೆ ಮಾರ್ಗಮಧ್ಯೆ ಸಮಸ್ಯೆ ಉದ್ಭವಿಸಿದ್ದರಿಂದ ಪೈಲಟ್ ಈ ನಿರ್ಧಾರ ತೆಗೆದುಕೊಂಡು ಒಟ್ಟಾರೆ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸಿದ್ದಾರೆ.

ಇದನ್ನೂ ಓದಿ : Viral Video: ಸಪ್ತಸಾಗರದಾಚೆ ಎಲ್ಲೋ; ಸುನಿಧಿ ಗಣೇಶ್ ಹಾಡಿರುವ ಟೈಟಲ್ ಟ್ರ್ಯಾಕ್​ ವೈರಲ್ 

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ಈ ವಿಮಾನವು ಟೇಕ್​ಆಫ್ ಆದ ಎರಡು ಗಂಟೆಗಳ ನಂತರ ಯೂಟೂರ್ನ್ ತೆಗೆದುಕೊಂಡಿದೆ. ಈ ನಿರ್ಧಾರದ ಹಿಂದಿನ ಕಾರಣವನ್ನು ಪೈಲಟ್​ ಫ್ಲೈಟ್ ಡೆಕ್‌ನಿಂದ ಏರ್ ಟ್ರಾಫಿಕ್ ಕಂಟ್ರೋಲ್​ಗೆ ತಲುಪಿಸುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪೈಲಟ್​ನ ಆಡಿಯೋ ಇಲ್ಲಿ ಕೇಳಿ

ವಿಮಾನವು ಅಟ್ಲಾಂಟಾಗೆ ಹಿಂದಿರುಗಿದ ನಂತರ ಎಲ್ಲ ಪ್ರಯಾಣಿಕರನ್ನು ಮತ್ತೊಂದು ವಿಮಾನದ ಮೂಲಕ ಬಾರ್ಸಿಲೋನಾಗೆ ತಲುಪಿಸಲಾಯಿತು. ಅವರೆಲ್ಲರೂ ಸುಮಾರು ಎಂಟು ಗಂಟೆ ತಡವಾಗಿ ಬಾರ್ಸಿಲೋನಾ ತಲುಪಿದರು. ತುರ್ತು ವೈದ್ಯಕೀಯ ಕಾರಣಗಳಿಗಾಗಿ ಈ ತೀರ್ಮಾನ ಕೈಗೊಳ್ಳಬೇಕಾಯಿತೆಂದು ಏರ್​​ಲೈನ್ಸ್​ನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಂತರ ವಿಮಾನವನ್ನು ಶುಚಿಗೊಳಿಸಲಾಗಿದೆ. ಆದರೆ, ಅತಿಸಾರದಿಂದ ಬಳಲುತ್ತಿದ್ದ ಪ್ರಯಾಣಿಕರ ವಿವರವನ್ನು ಅವರು ಗೌಪ್ಯವಾಗಿರಿಸಿದ್ದಾರೆ. ಉಳಿದ ಪ್ರಯಾಣಿಕರಿಗೆ ಉಂಟಾದ ತೊಂದರೆಗಾಗಿ ಕ್ಷಮೆ ಕೇಳಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:17 pm, Tue, 5 September 23

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ