AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ‘ದಯವಿಟ್ಟು ಅಂತರ ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ’, ಕಾರಿನ ಹಿಂಬದಿ ಬರಹ ವೈರಲ್

ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ "ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ" ಎಂದು ಬರೆದಿರುವ ಸಾಲುಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. @HasnaMatBhai ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಈ ಫೋಟೋ ಮೂರು ದಿನಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

Viral Post: 'ದಯವಿಟ್ಟು ಅಂತರ ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ', ಕಾರಿನ ಹಿಂಬದಿ ಬರಹ ವೈರಲ್
Viral Car Message
ಅಕ್ಷತಾ ವರ್ಕಾಡಿ
|

Updated on:Nov 07, 2024 | 2:59 PM

Share

ಆಟೋ ರಿಕ್ಷಾ, ಕಾರು ಹಾಗೂ ವಿವಿಧ ವಾಹನಗಳ ಹಿಂಬದಿಯಲ್ಲಿ ಬರೆದಿರುವ ಸಾಲುಗಳು ಸಾಕಷ್ಟು ವೈರಲ್​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಮತ್ತೊಂದು ಸಾಲು ನೆಟ್ಟಿಗರ ಗಮನ ಸೆಳೆದಿದೆ. “ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ” ಎಂದು ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ ಬರೆಯಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

@HasnaMatBhai ಎಂಬ ಟ್ವಿಟರ್​ ಖಾತೆಯಲ್ಲಿ ಈ ಕಾರಿನ ಫೋಟೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ನವೆಂಬರ್​ 04ರಂದು ಹಂಚಿಕೊಂಡಿರುವ ಪೋಸ್ಟ್​​ ಕೇವಲ ಮೂರು ದಿನದಲ್ಲಿ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಅಮ್ಮನ ಜೊತೆ ಸ್ಕೂಲ್‌ಗೆ ಹೋಗುವಾಗ ಸ್ಕೂಟಿಯಲ್ಲೇ ಕುಳಿತು ಹೋಮ್‌ವರ್ಕ್‌ ಮಾಡಿದ ಬಾಲಕ; ವಿಡಿಯೋ ವೈರಲ್‌

ಕಾರಿನ ಹಿಂಭಾಗದಲ್ಲಿ ‘Keep Distance EMI is pending!’ ಎಂದು ಬರೆದಿರುವುದನ್ನು ಕಾಣಬಹುದು. ಸದ್ಯ ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. ನನ್ನ ಕಾರು ಇಎಂಐನಲ್ಲಿ ಓಡುತ್ತಿದೆ ಎಂದು ಬಹಿರಂಗವಾಗಿ ಮಾಲೀಕ ಹೇಳುತ್ತಿರುವುದು ಖಚಿತವಾಗಿದೆ. “ಕಾರಿಗೆ ವಿಮೆ ಮಾಡಿಸಿ, ಯಾವುದೇ ಟೆನ್ಷನ್ ಇರುವುದಿಲ್ಲ” ಎಂದು ಸಾಕಷ್ಟು ನೆಟ್ಟಿಗರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:58 pm, Thu, 7 November 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ