AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡ ಬದಿಗಿಟ್ಟು ಯುವಕರೊಂದಿಗೆ ಕ್ರಿಕೆಟ್ ಆಡಿದ ಡೆಲಿವರಿ ಬಾಯ್ಸ್

ಡೆಲಿವರಿ ಹುಡುಗರೊಂದಿಗೆ ಯುವಕರ ತಂಡ ಕ್ರಿಕೆಟ್ ಆಡಿದ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಕೆಲಸದ ಒತ್ತಡದಿಂದ ವಿರಾಮ ಸಿಕ್ಕಿದ ಡೆಲಿವರಿ ಬಾಯ್ಸ್ ಖುಷಿಯಿಂದ ಆಟದಲ್ಲಿ ಪಾಲ್ಗೊಂಡರು. ಯುವಕರ ಈ ಹೃದಯಸ್ಪರ್ಶಿ ನಡೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಟದ ಕೊನೆಯಲ್ಲಿ ವಿಜೇತ ಪದಕ ಪಡೆದು ಡೆಲಿವರಿ ಬಾಯ್ಸ್ ಸಂತೋಷಪಟ್ಟರು.

ಒತ್ತಡ ಬದಿಗಿಟ್ಟು ಯುವಕರೊಂದಿಗೆ ಕ್ರಿಕೆಟ್ ಆಡಿದ ಡೆಲಿವರಿ ಬಾಯ್ಸ್
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Nov 17, 2025 | 3:10 PM

Share

ಡೆಲಿವರಿ ಬಾಯ್ಸ್​​​​​​ ಜತೆಗೆ ಯುವಕರ ತಂಡವೊಂದು ಕ್ರಿಕೆಟ್​​ ಆಡಿರುವ (viral cricket video) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ಕ್ರಿಕೆಟ್​​ ಪಂದ್ಯಕ್ಕೆ ಡೆಲಿವರಿ ಹುಡುಗರನ್ನು ಯುವಕರ ತಂಡ ಆಹ್ವಾನಿಸುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ನೆಟ್ಟಿಗರು ಕೂಡ ಈ ವಿಡಿಯೋವನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ. ಡೆಲಿವರಿ ಬಾಯ್ಸ್​​​ ದಿನನಿತ್ಯದ ಕೆಲಸದ ಒತ್ತಡದ ನಡುವೆ, ಇದೊಂದು ಒಳ್ಳೆಯ ಬದಲಾವಣೆಯನ್ನು ತಂದಿದೆ ಎಂದು ಈ ವಿಡಿಯೋದಲ್ಲಿ ಹೇಳಿಕೊಳ್ಳಲಾಗಿದೆ. ಡೆಲಿವರಿ ಹುಡುಗರ ಮುಖದಲ್ಲಿ ಖುಷಿಗೆ ತಂದ ಯುವಕರಿಗೆ ನೆಟ್ಟಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋವನ್ನು ಮಯೂರೇಶ್ ಗುಜಾರ್ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಡೆಲಿವರಿ ಬಾಯ್ಸ್ ತಮ್ಮ ಆರ್ಡರ್​​ಗಳನ್ನು ಕೊಡಲು ಬರುತ್ತಿದ್ದ ವೇಳೆ, ಪ್ಲಾಟ್​​​ನ ಕೆಳಗೆ ಆಡುತ್ತಿದ್ದ ಯುವಕರನ್ನು ನೋಡಿಕೊಂಡು ಬರುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋದಲ್ಲಿ ಯುವಕರ ತಂಡದಲ್ಲಿದ್ದ ಒಬ್ಬರು ಬಂದು ನಮ್ಮ ಜತೆಗೆ ಆಟಕ್ಕೆ ಸೇರಿಕೊಳ್ಳಿ ಎಂದು ಹೇಳುತ್ತಿರುವುದನ್ನು ನೋಡಬಹುದು. ಏನಾದರೂ ಆಗಲಿ, ಒಂದು ಕೈ ನೋಡಿಯೇ ಬಿಡೋಣ ಎಂದು ಡೆಲಿವರಿ ಬಾಯ್ಸ್ ಕೂಡ ಆಟಕ್ಕೆ ಇಳಿಯುತ್ತಾರೆ. ತುಂಬಾ ಖುಷಿಯಲ್ಲಿ ಎಲ್ಲರೂ ಪಂದ್ಯ ಆಡುತ್ತಾರೆ. ಎಲ್ಲ ಒತ್ತಡಗಳನ್ನು ಮರೆತು ಯುವಕರ ಜತೆಗೆ, ಈ ಡೆಲಿವರಿ ಬಾಯ್ಸ್ ಆಡಿರುವುದು ನೆಟ್ಟಿಗರಿಗೂ ಸಂತೋಷ ತಂದಿದೆ. ಇನ್ನು ಪಂದ್ಯದಲ್ಲಿ ಭಾಗವಹಿಸಿದ ಡೆಲಿವರಿ ಬಾಯ್ಸ್​​​ಗೆ ವಿಜೇತ ಪದಕವನ್ನು ಕೂಡ ನೀಡುತ್ತಾರೆ.

ಇದನ್ನೂ ಓದಿ: ಪ್ರಯಾಣಿಕ ಮರೆತುಹೋದ ಹಣದ ಬ್ಯಾಗ್​​​ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬೆಂಗಳೂರಿನ ಆಟೋ ಚಾಲಕ

ಇಲ್ಲಿದೆ ನೋಡಿ ವಿಡಿಯೋ:

ಸೋಶಿಯಲ್​​​ ಮೀಡಿಯಾದಲ್ಲಿ ಮೆಚ್ಚುಗೆ ಪಡೆದ ಯುವಕರ ತಂಡ

ಇಂದೊಂದು ಆರೋಗ್ಯಕರ ಕ್ಷಣ ಎಂದು ಕೆಲವು ನೆಟ್ಟಿಗರು ಹೇಳಿದ್ದಾರೆ. ಅಪರೂಪಕ್ಕೆ ಸಿಗುವ ಈ ಡೆಲಿವರಿ ಬಾಯ್ಸ್​​​ಗೂ ಒಂದು ಅವಕಾಶ ನೀಡಿದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ. ಯಾವುದೇ ಲಾಭ ಇಲ್ಲದೆ ಅವರನ್ನು ಖುಷಿಪಡಿಸಿದ ನೀವು ನಮ್ಮ ಮನಸ್ಸು ಗೆದ್ದಿದ್ದೀರಿ ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ಅವರು ಮಕ್ಕಳಂತೆ ನಗುತ್ತಿದ್ದಾರೆ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್