AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 8 ತಿಂಗಳ ಮಗುವಿನ ಗಂಟಲಲ್ಲಿ ಸಿಲುಕಿತ್ತು ತೆಂಗಿನ ಕಾಯಿ ತುಂಡು!

ಮಗುವಿನ ಶ್ವಾಸನಾಳದ ಬಳಿ ತೆಂಗಿನ ಕಾಯಿ ತುಂಡು ಸಿಕ್ಕಿಹಾಕಿಕೊಂಡಿತ್ತು. ವೈದ್ಯರ ತಂಡ ಎಚ್ಚರಿಕೆಯಿಂದ ಕಾಯಿಯ ತುಂಡನ್ನು ಹೊರತೆಗೆದಿದ್ದಾರೆ. ಈ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

Viral News: 8 ತಿಂಗಳ ಮಗುವಿನ ಗಂಟಲಲ್ಲಿ ಸಿಲುಕಿತ್ತು ತೆಂಗಿನ ಕಾಯಿ ತುಂಡು!
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 03, 2024 | 10:55 AM

Share

ಛತ್ತೀಸ್‌ಗಢ (ಸುರ್ಗುಜಾ): ಮಗು ರಚ್ಚೆ ಹಿಡಿದು ಅಳಲು ಪ್ರಾರಂಭಿಸಿದೆ. ಅಳು ವಿಪರೀತವಾಗುತ್ತಿದ್ದಂತೆ ಪೋಷಕರಲ್ಲಿ ಸಹಜವಾಗಿ ಗೊಂದಲ,ಭಯ ಉಂಟಾಗಿದ್ದು, ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎರಡು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ. ಕೊನೆಗೆ  ಅಂಬಿಕಾಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಮಗುವಿನ ಸ್ಥಿತಿಯನ್ನು ಪರೀಕ್ಷಿಸಲು ಎಕ್ಸ್-ರೇ ಮಾಡಿಸಿದ್ದು, ಮಗುವಿನ ಗಂಟಲಿನಲ್ಲಿ ಏನೋ ಸಿಲುಕಿರುವುದು ಕಂಡುಬಂದಿದೆ. ಆದ್ದರಿಂದ ಉಸಿರಾಟದ ತೊಂದರೆಯುಂಟಾಗಿ ಮಗು ಅಳುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದ್ಯರು ಸುಮಾರು ಎರಡೂವರೆ ಗಂಟೆಗಳ ಕಾಲ ಶ್ರಮಿಸಿ ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ತೆಂಗಿನ ಕಾಯಿ ತುಂಡನ್ನು ಹೊರತೆಗೆದಿದ್ದಾರೆ. ಮಗುವಿನ ಶ್ವಾಸನಾಳದ ಬಳಿ ತೆಂಗಿನ ಕಾಯಿ ತುಂಡು ಸಿಕ್ಕಿಹಾಕಿಕೊಂಡಿತ್ತು. ವೈದ್ಯರ ತಂಡ ಎಚ್ಚರಿಕೆಯಿಂದ ಕಾಯಿಯನ್ನು ಹೊರತೆಗೆದಿದ್ದಾರೆ. ಈ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯವರು ಎಂದು ಹೇಳಲಾಗಿದೆ. ಮಗುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸ್ವಲ್ಪ ವಿಳಂಬ ಮಾಡಿದ್ದರೆ ಮಗು ಪ್ರಾಣಕ್ಕೆ ಕಂಟಕವಾಗುತ್ತಿತ್ತು ಎಂದು ಎನ್ನುತ್ತಾರೆ ವೈದ್ಯರು. ಆಸ್ಪತ್ರೆ ಅಧೀಕ್ಷಕ ಡಾ.ಜೆ.ಕೆ.ರೈಲ್ವಾನಿ ಮಾತನಾಡಿ, ಡಿ.29ರಂದು ಬೆಳಗ್ಗೆ ಜಯನಗರ ಪಟ್ಟಣದ ನಿವಾಸಿ ರಾಮದೇವ್ ಅವರ 8 ತಿಂಗಳ ಮಗ ಆದಿತ್ಯನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಮಗುವಿನ ಸ್ಥಿತಿಯನ್ನು ಪರೀಕ್ಷಿಸಲು ಎಕ್ಸ್-ರೇ ಮಾಡಿಸಿದಾಗ ಮಗುವಿನ ಗಂಟಲಲ್ಲಿ ಏನೋ ಸಿಲುಕಿಕೊಂಡಿರುವುದು ತಿಳಿದುಬಂದಿದೆ. ಬಳಿಕ ಆಪರೇಷನ್‌ಗೆ ಸಿದ್ಧತೆ ನಡೆಸಿದ್ದು, ಮಗುವಿನ ಜೀವ ಉಳಿಸುವ ಜವಾಬ್ದಾರಿಯನ್ನು ಡಾ.ಉಷಾ, ಡಾ.ಅನುಪಮ್ ಮಿಂಜ್, ಡಾ.ಪ್ರಿನ್ಸಿ, ಅನಸ್ತೇಶಿಯಾ ವಿಭಾಗದ ಡಾ.ಶಿವಾಂಗಿ ಹಾಗೂ ಶಸ್ತ್ರ ಚಿಕಿತ್ಸಾ ವಿಭಾಗದ ವೈದ್ಯರಿಗೆ ವಹಿಸಲಾಯಿತು. ಆದರೆ ಆಪರೇಷನ್ ವೇಳೆ ಅರಿವಳಿಕೆ ನೀಡುವುದು ಸವಾಲಾಗಿ ಪರಿಣಮಿಸಿದೆ.8 ತಿಂಗಳ ಮಗು ಆದಿತ್ಯನನ್ನು ಪ್ರಜ್ಞೆಗೆ ತರಲು ವೈದ್ಯರು ಹರಸಾಹಸ ಪಡಬೇಕಾಯಿತು. ಕೊನೆಗೂ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​