AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 8 ತಿಂಗಳ ಮಗುವಿನ ಗಂಟಲಲ್ಲಿ ಸಿಲುಕಿತ್ತು ತೆಂಗಿನ ಕಾಯಿ ತುಂಡು!

ಮಗುವಿನ ಶ್ವಾಸನಾಳದ ಬಳಿ ತೆಂಗಿನ ಕಾಯಿ ತುಂಡು ಸಿಕ್ಕಿಹಾಕಿಕೊಂಡಿತ್ತು. ವೈದ್ಯರ ತಂಡ ಎಚ್ಚರಿಕೆಯಿಂದ ಕಾಯಿಯ ತುಂಡನ್ನು ಹೊರತೆಗೆದಿದ್ದಾರೆ. ಈ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

Viral News: 8 ತಿಂಗಳ ಮಗುವಿನ ಗಂಟಲಲ್ಲಿ ಸಿಲುಕಿತ್ತು ತೆಂಗಿನ ಕಾಯಿ ತುಂಡು!
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 03, 2024 | 10:55 AM

Share

ಛತ್ತೀಸ್‌ಗಢ (ಸುರ್ಗುಜಾ): ಮಗು ರಚ್ಚೆ ಹಿಡಿದು ಅಳಲು ಪ್ರಾರಂಭಿಸಿದೆ. ಅಳು ವಿಪರೀತವಾಗುತ್ತಿದ್ದಂತೆ ಪೋಷಕರಲ್ಲಿ ಸಹಜವಾಗಿ ಗೊಂದಲ,ಭಯ ಉಂಟಾಗಿದ್ದು, ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎರಡು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ. ಕೊನೆಗೆ  ಅಂಬಿಕಾಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಮಗುವಿನ ಸ್ಥಿತಿಯನ್ನು ಪರೀಕ್ಷಿಸಲು ಎಕ್ಸ್-ರೇ ಮಾಡಿಸಿದ್ದು, ಮಗುವಿನ ಗಂಟಲಿನಲ್ಲಿ ಏನೋ ಸಿಲುಕಿರುವುದು ಕಂಡುಬಂದಿದೆ. ಆದ್ದರಿಂದ ಉಸಿರಾಟದ ತೊಂದರೆಯುಂಟಾಗಿ ಮಗು ಅಳುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದ್ಯರು ಸುಮಾರು ಎರಡೂವರೆ ಗಂಟೆಗಳ ಕಾಲ ಶ್ರಮಿಸಿ ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ತೆಂಗಿನ ಕಾಯಿ ತುಂಡನ್ನು ಹೊರತೆಗೆದಿದ್ದಾರೆ. ಮಗುವಿನ ಶ್ವಾಸನಾಳದ ಬಳಿ ತೆಂಗಿನ ಕಾಯಿ ತುಂಡು ಸಿಕ್ಕಿಹಾಕಿಕೊಂಡಿತ್ತು. ವೈದ್ಯರ ತಂಡ ಎಚ್ಚರಿಕೆಯಿಂದ ಕಾಯಿಯನ್ನು ಹೊರತೆಗೆದಿದ್ದಾರೆ. ಈ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯವರು ಎಂದು ಹೇಳಲಾಗಿದೆ. ಮಗುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸ್ವಲ್ಪ ವಿಳಂಬ ಮಾಡಿದ್ದರೆ ಮಗು ಪ್ರಾಣಕ್ಕೆ ಕಂಟಕವಾಗುತ್ತಿತ್ತು ಎಂದು ಎನ್ನುತ್ತಾರೆ ವೈದ್ಯರು. ಆಸ್ಪತ್ರೆ ಅಧೀಕ್ಷಕ ಡಾ.ಜೆ.ಕೆ.ರೈಲ್ವಾನಿ ಮಾತನಾಡಿ, ಡಿ.29ರಂದು ಬೆಳಗ್ಗೆ ಜಯನಗರ ಪಟ್ಟಣದ ನಿವಾಸಿ ರಾಮದೇವ್ ಅವರ 8 ತಿಂಗಳ ಮಗ ಆದಿತ್ಯನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಮಗುವಿನ ಸ್ಥಿತಿಯನ್ನು ಪರೀಕ್ಷಿಸಲು ಎಕ್ಸ್-ರೇ ಮಾಡಿಸಿದಾಗ ಮಗುವಿನ ಗಂಟಲಲ್ಲಿ ಏನೋ ಸಿಲುಕಿಕೊಂಡಿರುವುದು ತಿಳಿದುಬಂದಿದೆ. ಬಳಿಕ ಆಪರೇಷನ್‌ಗೆ ಸಿದ್ಧತೆ ನಡೆಸಿದ್ದು, ಮಗುವಿನ ಜೀವ ಉಳಿಸುವ ಜವಾಬ್ದಾರಿಯನ್ನು ಡಾ.ಉಷಾ, ಡಾ.ಅನುಪಮ್ ಮಿಂಜ್, ಡಾ.ಪ್ರಿನ್ಸಿ, ಅನಸ್ತೇಶಿಯಾ ವಿಭಾಗದ ಡಾ.ಶಿವಾಂಗಿ ಹಾಗೂ ಶಸ್ತ್ರ ಚಿಕಿತ್ಸಾ ವಿಭಾಗದ ವೈದ್ಯರಿಗೆ ವಹಿಸಲಾಯಿತು. ಆದರೆ ಆಪರೇಷನ್ ವೇಳೆ ಅರಿವಳಿಕೆ ನೀಡುವುದು ಸವಾಲಾಗಿ ಪರಿಣಮಿಸಿದೆ.8 ತಿಂಗಳ ಮಗು ಆದಿತ್ಯನನ್ನು ಪ್ರಜ್ಞೆಗೆ ತರಲು ವೈದ್ಯರು ಹರಸಾಹಸ ಪಡಬೇಕಾಯಿತು. ಕೊನೆಗೂ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ