AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 8 ತಿಂಗಳ ಮಗುವಿನ ಗಂಟಲಲ್ಲಿ ಸಿಲುಕಿತ್ತು ತೆಂಗಿನ ಕಾಯಿ ತುಂಡು!

ಮಗುವಿನ ಶ್ವಾಸನಾಳದ ಬಳಿ ತೆಂಗಿನ ಕಾಯಿ ತುಂಡು ಸಿಕ್ಕಿಹಾಕಿಕೊಂಡಿತ್ತು. ವೈದ್ಯರ ತಂಡ ಎಚ್ಚರಿಕೆಯಿಂದ ಕಾಯಿಯ ತುಂಡನ್ನು ಹೊರತೆಗೆದಿದ್ದಾರೆ. ಈ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

Viral News: 8 ತಿಂಗಳ ಮಗುವಿನ ಗಂಟಲಲ್ಲಿ ಸಿಲುಕಿತ್ತು ತೆಂಗಿನ ಕಾಯಿ ತುಂಡು!
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 03, 2024 | 10:55 AM

Share

ಛತ್ತೀಸ್‌ಗಢ (ಸುರ್ಗುಜಾ): ಮಗು ರಚ್ಚೆ ಹಿಡಿದು ಅಳಲು ಪ್ರಾರಂಭಿಸಿದೆ. ಅಳು ವಿಪರೀತವಾಗುತ್ತಿದ್ದಂತೆ ಪೋಷಕರಲ್ಲಿ ಸಹಜವಾಗಿ ಗೊಂದಲ,ಭಯ ಉಂಟಾಗಿದ್ದು, ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎರಡು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ. ಕೊನೆಗೆ  ಅಂಬಿಕಾಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಮಗುವಿನ ಸ್ಥಿತಿಯನ್ನು ಪರೀಕ್ಷಿಸಲು ಎಕ್ಸ್-ರೇ ಮಾಡಿಸಿದ್ದು, ಮಗುವಿನ ಗಂಟಲಿನಲ್ಲಿ ಏನೋ ಸಿಲುಕಿರುವುದು ಕಂಡುಬಂದಿದೆ. ಆದ್ದರಿಂದ ಉಸಿರಾಟದ ತೊಂದರೆಯುಂಟಾಗಿ ಮಗು ಅಳುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದ್ಯರು ಸುಮಾರು ಎರಡೂವರೆ ಗಂಟೆಗಳ ಕಾಲ ಶ್ರಮಿಸಿ ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ತೆಂಗಿನ ಕಾಯಿ ತುಂಡನ್ನು ಹೊರತೆಗೆದಿದ್ದಾರೆ. ಮಗುವಿನ ಶ್ವಾಸನಾಳದ ಬಳಿ ತೆಂಗಿನ ಕಾಯಿ ತುಂಡು ಸಿಕ್ಕಿಹಾಕಿಕೊಂಡಿತ್ತು. ವೈದ್ಯರ ತಂಡ ಎಚ್ಚರಿಕೆಯಿಂದ ಕಾಯಿಯನ್ನು ಹೊರತೆಗೆದಿದ್ದಾರೆ. ಈ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯವರು ಎಂದು ಹೇಳಲಾಗಿದೆ. ಮಗುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸ್ವಲ್ಪ ವಿಳಂಬ ಮಾಡಿದ್ದರೆ ಮಗು ಪ್ರಾಣಕ್ಕೆ ಕಂಟಕವಾಗುತ್ತಿತ್ತು ಎಂದು ಎನ್ನುತ್ತಾರೆ ವೈದ್ಯರು. ಆಸ್ಪತ್ರೆ ಅಧೀಕ್ಷಕ ಡಾ.ಜೆ.ಕೆ.ರೈಲ್ವಾನಿ ಮಾತನಾಡಿ, ಡಿ.29ರಂದು ಬೆಳಗ್ಗೆ ಜಯನಗರ ಪಟ್ಟಣದ ನಿವಾಸಿ ರಾಮದೇವ್ ಅವರ 8 ತಿಂಗಳ ಮಗ ಆದಿತ್ಯನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಮಗುವಿನ ಸ್ಥಿತಿಯನ್ನು ಪರೀಕ್ಷಿಸಲು ಎಕ್ಸ್-ರೇ ಮಾಡಿಸಿದಾಗ ಮಗುವಿನ ಗಂಟಲಲ್ಲಿ ಏನೋ ಸಿಲುಕಿಕೊಂಡಿರುವುದು ತಿಳಿದುಬಂದಿದೆ. ಬಳಿಕ ಆಪರೇಷನ್‌ಗೆ ಸಿದ್ಧತೆ ನಡೆಸಿದ್ದು, ಮಗುವಿನ ಜೀವ ಉಳಿಸುವ ಜವಾಬ್ದಾರಿಯನ್ನು ಡಾ.ಉಷಾ, ಡಾ.ಅನುಪಮ್ ಮಿಂಜ್, ಡಾ.ಪ್ರಿನ್ಸಿ, ಅನಸ್ತೇಶಿಯಾ ವಿಭಾಗದ ಡಾ.ಶಿವಾಂಗಿ ಹಾಗೂ ಶಸ್ತ್ರ ಚಿಕಿತ್ಸಾ ವಿಭಾಗದ ವೈದ್ಯರಿಗೆ ವಹಿಸಲಾಯಿತು. ಆದರೆ ಆಪರೇಷನ್ ವೇಳೆ ಅರಿವಳಿಕೆ ನೀಡುವುದು ಸವಾಲಾಗಿ ಪರಿಣಮಿಸಿದೆ.8 ತಿಂಗಳ ಮಗು ಆದಿತ್ಯನನ್ನು ಪ್ರಜ್ಞೆಗೆ ತರಲು ವೈದ್ಯರು ಹರಸಾಹಸ ಪಡಬೇಕಾಯಿತು. ಕೊನೆಗೂ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್