AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಗೆ ಲಗ್ನಪತ್ರಿಕೆ ಕಳಿಸಿದ ಕೇರಳದ ವಧುವರರು; ಸೇನೆಯಿಂದ ಶುಭಹಾರೈಕೆ

Indian Army : ‘ನಿಮ್ಮ ದೇಶಸೇವೆಗೆ ಋಣಿಯಾಗಿದ್ದೇವೆ. ನಿಮ್ಮ ಶ್ರಮದಿಂದಾಗಿ ನಾವು ಪ್ರತೀ ದಿನ ನೆಮ್ಮದಿಯಿಂದ ಮಲಗುತ್ತೇವೆ.  ನಮ್ಮ ಪ್ರೀತಿಪಾತ್ರರೊಂದಿಗೆ ಸಂತೋಷದಿಂದ ದಿನ ಕಳೆಯುತ್ತೇವೆ. ದಯವಿಟ್ಟು ನಮ್ಮ ಮದುವೆಗೆ ಬನ್ನಿ’

ಭಾರತೀಯ ಸೇನೆಗೆ ಲಗ್ನಪತ್ರಿಕೆ ಕಳಿಸಿದ ಕೇರಳದ ವಧುವರರು; ಸೇನೆಯಿಂದ ಶುಭಹಾರೈಕೆ
Indian army invited by Kerala couple for their wedding and they received a cute reply
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 19, 2022 | 2:06 PM

Viral Video : ನೀವು ಮದುವೆಗೆ ಯಾರನ್ನೆಲ್ಲ ಆಹ್ವಾನಿಸುತ್ತೀರಿ? ಬಂಧು, ಬಳಗ, ಸ್ನೇಹಿತರು, ಊರವರು. ಆದರೆ ಇದೀಗ ವೈರಲ್ ಆಗಿರುವ ಈ ಆಮಂತ್ರಣ ಪತ್ರಿಕೆಯನ್ನು ಗಮನಿಸಿ. ಕೇರಳದ ವಧುವರರು ತಮ್ಮ ಮದುವೆಗೆ ಭಾರತೀಯ ಸೇನೆಯನ್ನು ಆಹ್ವಾನಿಸಿದ್ದರು. ಈ ಆಹ್ವಾನಕ್ಕೆ ಪ್ರತಿಯಾಗಿ ಕೈಬರಹದಲ್ಲಿ ಸೇನೆಯು ನವದಂಪತಿಗೆ ಶಭಕೋರಿ ಹಾರೈಸಿದೆ. ನೆಟ್ಟಿಗರು ಇದನ್ನು ಬಹುವಾಗಿ ಮೆಚ್ಚುತ್ತಿದ್ದಾರೆ. ವಿಭಿನ್ನ ಮತ್ತು ಅರ್ಥಪೂರ್ಣವಾದುದು ಎಂದಿಗೂ ಜನಮನವನ್ನು ಗೆಲ್ಲುತ್ತದೆ ಎನ್ನುವುದಕ್ಕೆ ಈ ಲಗ್ನಪತ್ರಿಕೆ ಸಾಕ್ಷಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Indian Army (@indianarmy.adgpi)

ಹೊಸ ಅಡಿ ಇಡುವಾಗ ಹಾರೈಕೆಗಳು ಬಹಳೇ ಮುಖ್ಯ. ಅವು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ. ಮನಸ್ಸನ್ನು ಉಲ್ಲಾಸಗೊಳಿಸುತ್ತವೆ. ಹೊಸ ಹುರುಪು ಚೈತನ್ಯ ತುಂಬುತ್ತವೆ. ಕೇರಳದ ಈ ವಧುವರರಿಗೆ, ದೇಶಕ್ಕಾಗಿ ತಮ್ಮ ಜೀವವನ್ನೇ ಮುಡಿಪಾಗಿಡುವ ಭಾರತೀಯ ಸೇನೆಯನ್ನು ಮದುವೆಗೆ ಆಹ್ವಾನಿಸಿದರೆ ಹೇಗೆ ಎಂಬ ಆಲೋಚನೆ ಬಂದಿದೆ. ಆ ಪ್ರಕಾರ ಅವರು ಸೇನೆಗೆ ಆಹ್ವಾನ ಪತ್ರಿಕೆ ಕಳಿಸಿದ್ದಾರೆ.

ನಿಮ್ಮ ದೇಶಸೇವೆಗೆ ಋಣಿಯಾಗಿದ್ದೇವೆ. ನಿಮ್ಮ ಶ್ರಮದಿಂದಾಗಿ ನಾವು ಪ್ರತೀ ದಿನ ನೆಮ್ಮದಿಯಿಂದ ಮಲಗುತ್ತೇವೆ.  ನಮ್ಮ ಪ್ರೀತಿಪಾತ್ರರೊಂದಿಗೆ ಸಂತೋಷದಿಂದ ದಿನ ಕಳೆಯುತ್ತೇವೆ. ನಿಮ್ಮನ್ನು ನಮ್ಮ ಮದುವೆಗೆ ಆಹ್ವಾನಿಸಲು ಖುಷಿಯಾಗುತ್ತಿದೆ. ದಯವಿಟ್ಟು ಆ ದಿನ ಬಂದು ಆಶೀರ್ವದಿಸಬೇಕಾಗಿ ವಿನಂತಿ- ಹೀಗೆಂದು ನವೆಂಬರ್ 10ಕ್ಕೆ ಇದ್ದ ಮದುವೆಗೆ ಆಹ್ವಾನಿಸಲಾಗಿತ್ತು.

ಈ ಲಗ್ನಪತ್ರಿಕೆಯನ್ನು ಭಾರತೀಯ ಸೇನೆಯು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಇದನ್ನು ಹಂಚಿಕೊಂಡಿದೆ. ಜೊತೆಗೆ ನವದಂಪತಿಗೆ ಶುಭವನ್ನೂ ಹಾರೈಸಿದೆ, ‘ರಾಹುಲ್ ಮತ್ತು ಕಾರ್ತಿಕಾ ನೀವು ನಮ್ಮನ್ನು ಆಹ್ವಾನಿಸಿದ್ದಕ್ಕೆ ಧನ್ಯವಾದ. ನಿಮ್ಮ ದಾಂಪತ್ಯ ಸಂತೋಷದಿಂದ ಕೂಡಿರಲಿ’.

ಈಗಾಗಲೇ ಈ ಪೋಸ್ಟ್​ 85,000 ಜನರ ಮೆಚ್ಚುಗೆ ಗಳಿಸಿದೆ. ನೆಟ್ಟಿಗರು ದಂಪತಿಯ ಈ ನಡೆಯನ್ನು ಶ್ಲಾಘಿಸಿದ್ದಾರೆ. ಇದು ಬಹಳ ಅದ್ಭುತವಾದ ಆಲೋಚನೆ. ನಮ್ಮ ದೇಶಸೇವೆ ಮಾಡುತ್ತಿರುವ ಹೀರೋಗಳಿಗೆ ಪ್ರೀತಿಯನ್ನು ವ್ಯಕ್ತಪಡಿಸಿದ ಈ ರೀತಿ ಬಹಳ ಚೆನ್ನಾಗಿದೆ ಎನ್ನುತ್ತಿದ್ದಾರೆ ಹಲವರು.

ಈ ಆಲೋಚನೆಯ ಬಗಗೆ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:55 pm, Sat, 19 November 22

ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ