AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅವತ್ತು ಹೋಗಿ ಮೋದಿಗೆ ಹೇಳು ಅಂದ್ರಲ್ಲ, ಅದ್ರ ರಿಸಲ್ಟ್‌ ಈಗ ಸಿಕ್ತಲ್ವಾ; ವೈರಲ್‌ ಪೋಸ್ಟ್‌ ಇಲ್ಲಿದೆ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮೂಲಕ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ರಾತ್ರೋರಾತ್ರಿ ಕ್ಷಿಪಣಿ ದಾಳಿ ನಡೆಸಿದೆ. ಕೊನೆಗೂ ಉಗ್ರರ ದಾಳಿಗೆ ಪ್ರತಿಕಾರ ತೀಸಿಕೊಂಡದ್ದಕ್ಕೆ ಇಡೀ ಭಾರತವೇ ಸಂಭ್ರಮಿಸುತ್ತಿದ್ದು, ಈ ಕುರಿತ ಮೀಮ್ಸ್‌ಗಳು ಕೂಡಾ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಕೆಲವರು ಪಾಕಿಸ್ತಾದಲ್ಲಿ ದೀಪಾವಳಿ ಸಂಭ್ರಮಾಚರಣೆ ನಡಿತಿದೆ ಎಂದು ಟ್ರೋಲ್‌ ಮಾಡಿದ್ರೆ, ಇನ್ನೂ ಕೆಲವರು ಮೋದಿಗೆ ಹೋಗಿ ಅಂದ್ರಲ್ಲ ಅವತ್ತು, ಅದ್ರ ರಿಸಲ್ಟ್‌ ಈಗ ನಿಮ್ಗೆ ಸಿಕ್ತಲ್ವಾ ಎಂದು ಹೇಳಿ ಮೀಮ್ಸ್‌ಗಳನ್ನು ಹರಿಬಿಡುತ್ತಿದ್ದಾರೆ.

Viral: ಅವತ್ತು ಹೋಗಿ ಮೋದಿಗೆ ಹೇಳು ಅಂದ್ರಲ್ಲ, ಅದ್ರ ರಿಸಲ್ಟ್‌ ಈಗ ಸಿಕ್ತಲ್ವಾ; ವೈರಲ್‌ ಪೋಸ್ಟ್‌ ಇಲ್ಲಿದೆ
ವೈರಲ್‌ ಪೋಸ್ಟ್Image Credit source: Instagram
Follow us
ಮಾಲಾಶ್ರೀ ಅಂಚನ್​
|

Updated on: May 07, 2025 | 12:51 PM

ಏಪ್ರಿಲ್‌ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಭೀಕರ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಅದೆಷ್ಟೋ ಅಮಾಯಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಈ ಉಗ್ರರ ದಾಳಿಗೆ ಪ್ರತಿಕಾರ ತೆಗೆದುಕೊಳ್ಳುವುದಾಗಿ ಹೇಳಿತ್ತು. ಹೇಳಿದ ಮಾತಿನಂತೆ, ಭಾರತೀಯ ಸೇನೆ  (Indian Army) ಆಪರೇಷನ್‌ ಸಿಂಧೂರ್‌ (operation sindoor) ಕಾರ್ಯಾಚರಣೆಯ ಮೂಲಕ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ರಾತ್ರೋ ರಾತ್ರಿ ಕ್ಷಿಪಣಿ ದಾಳಿ ನಡೆಸಿದೆ. ಈ ಮೂಲಕ ಪ್ರೀತಿಪಾತ್ರರನ್ನು ಕಳೆದುಕೊಂಡ ಭಾರತೀಯರ ಕಣ್ಣೀರಿಗೆ ನ್ಯಾಯ ಸಿಕ್ಕಿದ್ದು, ಈ ಪ್ರತಿಕಾರಕ್ಕೆ ಇಡೀ ಭಾರತವೇ ಸಂಭ್ರಮಾಚರಣೆ ನಡೆಸಿದೆ. ಕೆಲ ಟ್ರೋಲ್‌ ಪೇಜ್‌ಗಳಂತೂ ಪಾಕಿಸ್ತಾನಕ್ಕೆ ನಡುರಾತ್ರಿ ಸೂರ್ಯದರ್ಶನ ಮಾಡಿಸಿದ ಭಾರತ, ಪಾಕಿಸ್ತಾನದಲ್ಲಿ ದೀಪಾವಳಿ ಸಂಭ್ರಮಾಚರಣೆ ಅಂತೆಲ್ಲಾ ಮೀಮ್ಸ್‌ (memes)ಶೇರ್‌ ಮಾಡುತ್ತಿದೆ. ಈ ಮೀಮ್ಸ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿವೆ.

ಹೋಗಿ ಮೋದಿಗೆ ಹೇಳು ಅಂದವರಿಗೆ ಪ್ರಧಾನಿ ಮೋದಿ ಕೊಟ್ಟ ಟಾಂಗ್ ಹೇಗಿದೆ‌ ನೋಡಿ:

ಏಪ್ರಿಲ್‌ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಭೀಕರ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಕನ್ನಡಿಗ ಮಂಜುನಾಥ್‌ ತಮ್ಮ ಪತ್ನಿ ಪಲ್ಲವಿಯ ಕಣ್ಣೆದುರೇ ಉಗ್ರರ ಗುಂಡಿನೇಟಿಗೆ ಬಲಿಯಾದರು. ಇನ್ನೂ ಉಗ್ರನೊಬ್ಬ ಮೋದಿಗೆ ಹೋಗಿ ಹೇಳು ಎಂದು ಪಲ್ಲವಿಯವರ ಬಳಿ ಹೇಳಿದ್ದನಂತೆ. ಇದೀಗ ಪ್ರಧಾನಿ ಮೋದಿ ʼಹೋಗಿ ಮೋದಿಗೆ ಹೇಳು ಎಂದಿದ್ದವರಿಗೆ ಪ್ರತ್ಯುತ್ತರ ನೀಡಿದ್ದು, ಈ ಕುರಿತ ಮೀಮ್ಸ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌  ವೈರಲ್‌ ಆಗುತ್ತಿವೆ. uttarkarnakatamandi, mememandir ಇನ್‌ಸ್ಟಾಗ್ರಾಮ್‌ ಪೇಜ್‌,  BJP4Karnataka ಎಕ್ಸ್‌ ಖಾತೆ ಸೇರಿದಂತೆ ಸೋಷಿಯಲ್‌ ಮೀಡಿಯಾದಲ್ಲಿ ಹಲವಾರು ಪೇಜ್‌ಗಳಲ್ಲಿ ಇಂತಹ ಮೀಮ್ಸ್‌ಗಳು ವೈರಲ್‌ ಆಗ್ತಿವೆ.

ಇದನ್ನೂ ಓದಿ
Image
ಫ್ಯಾನ್ ಮೇಲೆ ಗೂಡು ಕಟ್ಟಿಕೊಂಡಿದ್ದ ಜೇನು ನೊಣಗಳಿಗೆ ತೊಂದರೆ ಕೊಟ್ಟ ಯುವಕ
Image
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
Image
ರೈಲಿನ ಎಸಿ ಕೋಚ್​​ ಟಾಯ್ಲೆಟ್​​ನಲ್ಲಿ ಹಾವು ಪತ್ತೆ; ಆಮೇಲೇನಾಯ್ತು?

ವೈರಲ್‌ ಮೀಮ್ಸ್ ಇಲ್ಲಿವೆ ನೋಡಿ:

ಮೋದಿಗೆ ಹೋಗಿ ಹೇಳು ಅಂದ್ರಲ್ಲ, ಈಗ ಮೋದಿ ಕೊಟ್ಟ ರಿವೇಂಜ್‌ ಅಷ್ಟೇ ಚೆನ್ನಾಗಿದೆ ಅಲ್ವಾ ಅಂತೆಲ್ಲಾ ಜನ ಮೀಮ್ಸ್‌ಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರಂತೂ ಭಾರತೀಯ ಸೇನೆಯ ಕ್ಷಿಪಣಿ ದಾಳಿಯ ವಿಡಿಯೋವನ್ನು ಶೇರ್‌ ಮಾಡಿಕೊಂಡು ಪಾಕಿಸ್ತಾನದಲ್ಲಿ ದೀಪಾವಳಿ ಹಬ್ಬ ನಡಿತಿದೆ ಅಂತೆಲ್ಲಾ ಮೀಮ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದಾರೆ.

View this post on Instagram

A post shared by mememandir (@mememandir)

ಒಟ್ಟಾರೆಯಾಗಿ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮೂಲಕ ಭಾರತೀಯ ಸೇನೆ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ರಾತ್ರೋ ರಾತ್ರಿ ಕ್ಷಿಪಣಿ ದಾಳಿ ನಡೆಸುವ ಮೂಲಕ ಪ್ರೀತಿಪಾತ್ರರನ್ನು ಕಳೆದುಕೊಂಡ ಭಾರತೀಯರ ಕಣ್ಣೀರಿಗೆ ನ್ಯಾಯ ದೊರಕಿಸಿಕೊಟ್ಟಿದೆ. ಈ ಪ್ರತಿಕಾರಕ್ಕೆ ಇಡೀ ಭಾರತವೇ ಸಂಭ್ರಮಾಚರಣೆ ನಡೆಸುತ್ತಿದೆ.

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್