AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಬೈಕ್​ಗಳಲ್ಲಿ ಪ್ರಯಾಣಿಸಿದ 14 ಯುವಕರು, ಮುಂದೇನಾಯಿತು?

Bike Stunt : ಉತ್ತರ ಪ್ರದೇಶದ ಈ ಯುವಕರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕಣ್ಣಿಟ್ಟು ಇವರನ್ನು ಹುಡುಕಿದ್ಧಾರೆ. ಮೂರೂ ಬೈಕ್​ಗಳನ್ನು ವಶಪಡಿಸಿಕೊಂಡಿದ್ದಾರೆ.

3 ಬೈಕ್​ಗಳಲ್ಲಿ ಪ್ರಯಾಣಿಸಿದ 14 ಯುವಕರು, ಮುಂದೇನಾಯಿತು?
ಬೈಕ್​ ಸ್ಟಂಟ್​ನಲ್ಲಿರುವ ಯುವಕರು
TV9 Web
| Updated By: ಶ್ರೀದೇವಿ ಕಳಸದ|

Updated on:Jan 11, 2023 | 10:53 AM

Share

Viral News : ಈ ವಯಸ್ಸೇ ಅಂಥದ್ದು, ಸಾಹಸವೇ ತನ್ನ ಅಸ್ತಿತ್ವ ಎನ್ನುವಷ್ಟು ಮೈಮರೆತು ನುಗ್ಗುವಂಥದ್ದು. ನಿಯಮಗಳೇ ಇರುವುದು ಮುರಿಯುವುದಕ್ಕೆ ಎಂಬ ಹುಂಬತನದಲ್ಲಿ ಸಾಗುವಂಥದ್ದು. ಇದೀಗ ವೈರಲ್ ಆಗಿರುವ ಈ ಫೋಟೋಗಳನ್ನು ನೋಡಿ. ಮೂರು ಬೈಕ್​ಗಳಲ್ಲಿ ಒಟ್ಟು ಹದಿನಾಲ್ಕು ಜನರು ಚಲಿಸುತ್ತಿದ್ದಾರೆ. ಒಂದು ಬೈಕ್​ನಲ್ಲಿ ಆರು ಜನರು. ಇನ್ನೊಂದೆರಡು ಬೈಕ್​ ನಾಲ್ಕುನಾಲ್ಕು ಜನರು. ಈ ಚಳಿಯಲ್ಲಿ ಬೈಕ್​ನಲ್ಲಿ ಹೋಗಲು ಯಾರಿಗೂ ಥ್ರಿಲ್​ ಉಂಟಾಗದೇ ಇರದು. ಆದರೆ ಹೀಗೆ ಅಪಾಯಕಾರಿ ಸ್ಥಿತಿಯಲ್ಲಿ ಥ್ರಿಲ್​ ಅನುಭವಿಸುವುದು ಎಷ್ಟು ಸರಿ?

ಈ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ಧಾರೆ. ಅಂತೂ ಇವರನ್ನು ಇವರುಗಳ ಬೈಕುಗಳನ್ನ ಪತ್ತೆ ಹಚ್ಚಿ ಬೈಕುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ‘ಮಾಹಿತಿ ತಿಳಿಯುತ್ತಿದ್ದಂತೆ ಈ ಯುವಕರ ಬೈಕ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಈ ಯುವಕರ ಕುರಿತು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಬರೇಲಿಯ ಹಿರಿಯ ಪೊಲೀಸ್​ ಅಧಿಕಾರಿ ಅಖಿಲೇಶ್​ ಕುಮಾರ್ ಚೌರಾಸಿಯಾ ಎಎನ್​ಐ ಸುದ್ದಿ ಸಂಸ್ಥೆಗೆ ತಿಳಿಸಿದ್ಧಾರೆ.

ಕ್ಷಣದ ಥ್ರಿಲ್​ಗಾಗಿ ಜೀವವನ್ನೇ ಕಳೆದುಕೊಳ್ಳಬೇಕೇ? ಎನ್ನುವುದನ್ನು ಈಗಿನ ಯುವಪೀಳಿಗೆಯು ಯೋಚಿಸಬೇಕು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:53 am, Wed, 11 January 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!