3 ಬೈಕ್​ಗಳಲ್ಲಿ ಪ್ರಯಾಣಿಸಿದ 14 ಯುವಕರು, ಮುಂದೇನಾಯಿತು?

Bike Stunt : ಉತ್ತರ ಪ್ರದೇಶದ ಈ ಯುವಕರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕಣ್ಣಿಟ್ಟು ಇವರನ್ನು ಹುಡುಕಿದ್ಧಾರೆ. ಮೂರೂ ಬೈಕ್​ಗಳನ್ನು ವಶಪಡಿಸಿಕೊಂಡಿದ್ದಾರೆ.

3 ಬೈಕ್​ಗಳಲ್ಲಿ ಪ್ರಯಾಣಿಸಿದ 14 ಯುವಕರು, ಮುಂದೇನಾಯಿತು?
ಬೈಕ್​ ಸ್ಟಂಟ್​ನಲ್ಲಿರುವ ಯುವಕರು
Follow us
| Updated By: ಶ್ರೀದೇವಿ ಕಳಸದ

Updated on:Jan 11, 2023 | 10:53 AM

Viral News : ಈ ವಯಸ್ಸೇ ಅಂಥದ್ದು, ಸಾಹಸವೇ ತನ್ನ ಅಸ್ತಿತ್ವ ಎನ್ನುವಷ್ಟು ಮೈಮರೆತು ನುಗ್ಗುವಂಥದ್ದು. ನಿಯಮಗಳೇ ಇರುವುದು ಮುರಿಯುವುದಕ್ಕೆ ಎಂಬ ಹುಂಬತನದಲ್ಲಿ ಸಾಗುವಂಥದ್ದು. ಇದೀಗ ವೈರಲ್ ಆಗಿರುವ ಈ ಫೋಟೋಗಳನ್ನು ನೋಡಿ. ಮೂರು ಬೈಕ್​ಗಳಲ್ಲಿ ಒಟ್ಟು ಹದಿನಾಲ್ಕು ಜನರು ಚಲಿಸುತ್ತಿದ್ದಾರೆ. ಒಂದು ಬೈಕ್​ನಲ್ಲಿ ಆರು ಜನರು. ಇನ್ನೊಂದೆರಡು ಬೈಕ್​ ನಾಲ್ಕುನಾಲ್ಕು ಜನರು. ಈ ಚಳಿಯಲ್ಲಿ ಬೈಕ್​ನಲ್ಲಿ ಹೋಗಲು ಯಾರಿಗೂ ಥ್ರಿಲ್​ ಉಂಟಾಗದೇ ಇರದು. ಆದರೆ ಹೀಗೆ ಅಪಾಯಕಾರಿ ಸ್ಥಿತಿಯಲ್ಲಿ ಥ್ರಿಲ್​ ಅನುಭವಿಸುವುದು ಎಷ್ಟು ಸರಿ?

ಈ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ಧಾರೆ. ಅಂತೂ ಇವರನ್ನು ಇವರುಗಳ ಬೈಕುಗಳನ್ನ ಪತ್ತೆ ಹಚ್ಚಿ ಬೈಕುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ‘ಮಾಹಿತಿ ತಿಳಿಯುತ್ತಿದ್ದಂತೆ ಈ ಯುವಕರ ಬೈಕ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಈ ಯುವಕರ ಕುರಿತು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಬರೇಲಿಯ ಹಿರಿಯ ಪೊಲೀಸ್​ ಅಧಿಕಾರಿ ಅಖಿಲೇಶ್​ ಕುಮಾರ್ ಚೌರಾಸಿಯಾ ಎಎನ್​ಐ ಸುದ್ದಿ ಸಂಸ್ಥೆಗೆ ತಿಳಿಸಿದ್ಧಾರೆ.

ಕ್ಷಣದ ಥ್ರಿಲ್​ಗಾಗಿ ಜೀವವನ್ನೇ ಕಳೆದುಕೊಳ್ಳಬೇಕೇ? ಎನ್ನುವುದನ್ನು ಈಗಿನ ಯುವಪೀಳಿಗೆಯು ಯೋಚಿಸಬೇಕು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:53 am, Wed, 11 January 23

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ