AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಬೈಕ್​ಗಳಲ್ಲಿ ಪ್ರಯಾಣಿಸಿದ 14 ಯುವಕರು, ಮುಂದೇನಾಯಿತು?

Bike Stunt : ಉತ್ತರ ಪ್ರದೇಶದ ಈ ಯುವಕರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕಣ್ಣಿಟ್ಟು ಇವರನ್ನು ಹುಡುಕಿದ್ಧಾರೆ. ಮೂರೂ ಬೈಕ್​ಗಳನ್ನು ವಶಪಡಿಸಿಕೊಂಡಿದ್ದಾರೆ.

3 ಬೈಕ್​ಗಳಲ್ಲಿ ಪ್ರಯಾಣಿಸಿದ 14 ಯುವಕರು, ಮುಂದೇನಾಯಿತು?
ಬೈಕ್​ ಸ್ಟಂಟ್​ನಲ್ಲಿರುವ ಯುವಕರು
TV9 Web
| Edited By: |

Updated on:Jan 11, 2023 | 10:53 AM

Share

Viral News : ಈ ವಯಸ್ಸೇ ಅಂಥದ್ದು, ಸಾಹಸವೇ ತನ್ನ ಅಸ್ತಿತ್ವ ಎನ್ನುವಷ್ಟು ಮೈಮರೆತು ನುಗ್ಗುವಂಥದ್ದು. ನಿಯಮಗಳೇ ಇರುವುದು ಮುರಿಯುವುದಕ್ಕೆ ಎಂಬ ಹುಂಬತನದಲ್ಲಿ ಸಾಗುವಂಥದ್ದು. ಇದೀಗ ವೈರಲ್ ಆಗಿರುವ ಈ ಫೋಟೋಗಳನ್ನು ನೋಡಿ. ಮೂರು ಬೈಕ್​ಗಳಲ್ಲಿ ಒಟ್ಟು ಹದಿನಾಲ್ಕು ಜನರು ಚಲಿಸುತ್ತಿದ್ದಾರೆ. ಒಂದು ಬೈಕ್​ನಲ್ಲಿ ಆರು ಜನರು. ಇನ್ನೊಂದೆರಡು ಬೈಕ್​ ನಾಲ್ಕುನಾಲ್ಕು ಜನರು. ಈ ಚಳಿಯಲ್ಲಿ ಬೈಕ್​ನಲ್ಲಿ ಹೋಗಲು ಯಾರಿಗೂ ಥ್ರಿಲ್​ ಉಂಟಾಗದೇ ಇರದು. ಆದರೆ ಹೀಗೆ ಅಪಾಯಕಾರಿ ಸ್ಥಿತಿಯಲ್ಲಿ ಥ್ರಿಲ್​ ಅನುಭವಿಸುವುದು ಎಷ್ಟು ಸರಿ?

ಈ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ಧಾರೆ. ಅಂತೂ ಇವರನ್ನು ಇವರುಗಳ ಬೈಕುಗಳನ್ನ ಪತ್ತೆ ಹಚ್ಚಿ ಬೈಕುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ‘ಮಾಹಿತಿ ತಿಳಿಯುತ್ತಿದ್ದಂತೆ ಈ ಯುವಕರ ಬೈಕ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಈ ಯುವಕರ ಕುರಿತು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಬರೇಲಿಯ ಹಿರಿಯ ಪೊಲೀಸ್​ ಅಧಿಕಾರಿ ಅಖಿಲೇಶ್​ ಕುಮಾರ್ ಚೌರಾಸಿಯಾ ಎಎನ್​ಐ ಸುದ್ದಿ ಸಂಸ್ಥೆಗೆ ತಿಳಿಸಿದ್ಧಾರೆ.

ಕ್ಷಣದ ಥ್ರಿಲ್​ಗಾಗಿ ಜೀವವನ್ನೇ ಕಳೆದುಕೊಳ್ಳಬೇಕೇ? ಎನ್ನುವುದನ್ನು ಈಗಿನ ಯುವಪೀಳಿಗೆಯು ಯೋಚಿಸಬೇಕು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:53 am, Wed, 11 January 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್