AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮುರ್ಷಿದಾಬಾದ್​; ಮಟಮಟ ಮಧ್ಯಾಹ್ನ ನಡುರಸ್ತೆಯಲ್ಲಿ 18 ಲಕ್ಷ ನಗದು ದೋಚಿದ ಕಳ್ಳರು

Crime: ಮುರ್ಷಿದಾಬಾದ್​ನ ವಿರಾಜ ಜಂಕ್ಷನ್​ ಬಳಿ ವ್ಯಕ್ತಿಯೊಬ್ಬರು ಬಸ್ಸಿನಿಂದ ಇಳಿಯುತ್ತಿದ್ದ ಸಂದರ್ಭದಲ್ಲಿ ಬೈಕ್​ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪಿಸ್ತೂಲ್​ ತೋರಿಸಿ ಹೆದರಿಸಿದ್ದಾರೆ. ಆ ನಂತರ ಪಾಯಿಂಟ್ ಬ್ಲಾಂಕ್ ರೇಂಜ್​ನಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಆ ವ್ಯಕ್ತಿಯಿಂದ 18 ಲಕ್ಷ ರೂಪಾಯಿ ನಗದು ತುಂಬಿದ್ದ ಬ್ಯಾಗ್ ಅನ್ನು ಕದ್ದು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. 

Viral: ಮುರ್ಷಿದಾಬಾದ್​; ಮಟಮಟ ಮಧ್ಯಾಹ್ನ ನಡುರಸ್ತೆಯಲ್ಲಿ 18 ಲಕ್ಷ ನಗದು ದೋಚಿದ ಕಳ್ಳರು
ಸೌಜನ್ಯ : ಬಾಂಗ್ಲಾ ಟಿವಿ9
Follow us
ಶ್ರೀದೇವಿ ಕಳಸದ
|

Updated on:Oct 31, 2023 | 3:21 PM

Murshidabad : ಮುರ್ಷಿದಾಬಾದ್‌ನ ಬಹರಂಪುರ ಪೊಲೀಸ್ ಠಾಣೆ (Police Station) ವ್ಯಾಪ್ತಿಯ ಘುರ್ನಿಯಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಸಾಲ ಮರುಪಾವತಿಸಲು ಹಾಗೂ ಉಳಿತಾಯ ಖಾತೆಗೆ ಹಣ ಜಮಾ ಮಾಡಲು ಬ್ಯಾಂಕ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಇದು ನಡೆದಿದೆ. ಸರ್ಕಲ್​ನಲ್ಲಿ ವ್ಯಕ್ತಿಯೊಬ್ಬರು ಬಸ್‌ನಿಂದ ಇಳಿದ ತಕ್ಷಣ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ನಿಂತಿದ್ದಾರೆ. ಪಿಸ್ತೂಲ್ ಎತ್ತಿ ವ್ಯಕ್ತಿಯನ್ನು ಹೆದರಿಸಿದ್ದಾರೆ. ಪಾಯಿಂಟ್ ಬ್ಲಾಂಕ್ ರೇಂಜ್ ನಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಆ ವ್ಯಕ್ತಿಯಿಂದ ರೂ. 18 ಲಕ್ಷ ನಗದು ತುಂಬಿದ್ದ ಬ್ಯಾಗ್ ಅನ್ನು ಅಪಹರಿಸಿಕೊಂಡು ಬೈಕ್​ನಲ್ಲಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: Viral Video: ಬ್ಯಾಂಗ್​ ಬ್ಯಾಂಗ್​​​; ಪ್ರೀ ವೆಡ್ಡಿಂಗ್ ಸಾಂಗ್​​ಗೆ ಪ್ರತಿಕ್ರಿಯಿಸಿದ ಹೃತಿಕ್ ರೋಷನ್

ಪೂಜನ್ ಸಹಾ ಎಂಬಾತ ಇಸ್ಲಾಂಪುರದ ಗೋವಾಸ್ ಪ್ರದೇಶದಿಂದ ಬ್ಯಾಂಕ್‌ಗೆ ಹಣ ಜಮೆ ಮಾಡಲು ಬರುತ್ತಿದ್ದ. ಬಹರಂಪುರದ ಬಳಿ ಬಸ್​ ಇಳಿದು ಬ್ಯಾಂಕ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಂತೆ ಎದುರಿಗೆ ಮೂವರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದರು. ಜನಸಂಚಾರ ಕಡಿಮೆ ಇದ್ದ ಆ ರಸ್ತೆಯಲ್ಲಿ ವ್ಯಕ್ತಿಯನ್ನು ಪೂಜನ್​ನನ್ನು ಸಮೀಪಿಸಿ ಪಾಯಿಂಟ್ ಬ್ಲಾಂಕ್ ರೇಂಜ್ ನಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಭಾರೀ ಮೊತ್ತದ ಬ್ಯಾಗ್​ ಅನ್ನು ದೋಚಿಕೊಂಡು ಹೋದರು. ಗುಂಡಿನ  ಸದ್ದು ಕೇಳಿ ಸುತ್ತಮುತ್ತಲಿನವರು ಸ್ಥಳಕ್ಕೆ ಓಡಿ ಬಂದರು. ಆದರೆ ಆ ವೇಳೆಗಾಗಲೇ ದರೋಡೆಕೋರರ ಗುಂಪು ಬೈಕ್‌ನಲ್ಲಿ 18 ಲಕ್ಷ ಹಣದೊಂದಿಗೆ ಪರಾರಿಯಾಗಿತ್ತು.

ಇದನ್ನೂ ಓದಿ : Viral: ಪನೀರ್​ ಪ್ರಿಯರಿಗಾಗಿ ಇಲ್ಲಿದೆ ವಿಶೇಷ ಫೋಟೊ; ಇದನ್ನು ನೋಡಿದ ಮೇಲೆ ನೀವು ಏನು ಹೇಳುತ್ತೀರಿ?

ಏತನ್ಮಧ್ಯೆ, ಸೋಮವಾರ ಮಧ್ಯಾಹ್ನ ನಡೆದ ಈ ದರೋಡೆಯ ಘಟನೆ ಈಗಾಗಲೇ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಲನ ಮೂಡಿಸಿದೆ. ಬಹರಂಪುರ ಪೊಲೀಸರು ಈ ದರೋಡೆ ಪ್ರಕರಣದ ಕುರಿತು ತನಿಖೆ ನಡೆಸಲು ಆರಂಭಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅವರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಸಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:19 pm, Tue, 31 October 23

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್