AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಪ್ರೀತಿಯ ನಾಯಿಯ ನೆನಪಿನಲ್ಲಿ ಅಮೃತಶಿಲೆಯಿಂದ ದೇವಸ್ಥಾನ ಕಟ್ಟಿದ ವೃದ್ಧ!

ತಮಿಳುನಾಡಿನ ಶಿವಗಂಗೆಯ ಮುತ್ತು ಎಂಬ 82 ವರ್ಷದ ನಿವೃತ್ತ ಸರ್ಕಾರಿ ನೌಕರ ತನ್ನ ಅತ್ಯಂತ ಪ್ರೀತಿಯ ನಾಯಿ ಸಾವನ್ನಪ್ಪಿದ ಬಳಿಕ ಅಮೃತಶಿಲೆಯಲ್ಲಿ ನಾಯಿಯ ಪ್ರತಿಮೆಯನ್ನು ನಿರ್ಮಿಸಿದ್ದಾರೆ.

Viral News: ಪ್ರೀತಿಯ ನಾಯಿಯ ನೆನಪಿನಲ್ಲಿ ಅಮೃತಶಿಲೆಯಿಂದ ದೇವಸ್ಥಾನ ಕಟ್ಟಿದ ವೃದ್ಧ!
ನಾಯಿಯ ದೇವಾಲಯ
TV9 Web
| Edited By: |

Updated on:Mar 30, 2022 | 7:54 PM

Share

ಚೆನ್ನೈ: ಅನೇಕ ಜನರು ಸಾಕುಪ್ರಾಣಿಗಳ ಜೊತೆ ಬಹಳಷ್ಟು ಭಾವನಾತ್ಮಕ ಸಂಬಂಧವನ್ನು ಹೊಂದಿರುತ್ತಾರೆ. ಅವರ ಪ್ರೀತಿಯ ಸಾಕುಪ್ರಾಣಿಗಳು ಸತ್ತರೆ ಅದನ್ನು ತಡೆದುಕೊಳ್ಳುವುದು ಅವರಿಗೆ ಸುಲಭವಲ್ಲ. ಕೆಲವರು ತಮ್ಮ ಪ್ರೀತಿಯ ನಾಯಿ (Dog), ಬೆಕ್ಕಿನ (Cat) ಸಾವಿನ ದುಃಖದಲ್ಲಿಯೇ ವರ್ಷಾನುಗಟ್ಟಲೆ ದಿನಗಳನ್ನು ಕಳೆಯುತ್ತಾರೆ. ಆದರೆ, ಸಾವನ್ನಪ್ಪಿದ ತಮ್ಮ ಪ್ರೀತಿಯ ನಾಯಿಯ ನೆನಪಿಗಾಗಿ ದೇವಸ್ಥಾನವನ್ನು (Temple) ಕಟ್ಟಿಸಿರುವ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ಅಂತಹ ಒಂದು ರೋಮಾಂಚನಕಾರಿ ಕಥೆ ಇಲ್ಲಿದೆ.

ತಮಿಳುನಾಡಿನ ಶಿವಗಂಗೆಯ 82 ವರ್ಷದ ನಿವೃತ್ತ ಸರ್ಕಾರಿ ನೌಕರ ತನ್ನ ಅತ್ಯಂತ ಪ್ರೀತಿಯ ಮತ್ತು ನಿಷ್ಠಾವಂತ ಒಡನಾಡಿಯಾದ ನಾಯಿಗೆ ಸೂಕ್ತವಾದ ಗೌರವವನ್ನು ನೀಡಲು ನಿರ್ಧರಿಸಿದರು. ಮುತ್ತು ಎಂಬ ವೃದ್ಧ ತನ್ನ ಸಾವನ್ನಪ್ಪಿದ ಟಾಮ್ ಎಂಬ ಲ್ಯಾಬ್ರಡಾರ್ ನಾಯಿಯ ನೆನಪಿಗಾಗಿ ತನ್ನ ಕೃಷಿ ಭೂಮಿಯಲ್ಲಿ ದೇವಾಲಯವನ್ನು ನಿರ್ಮಿಸಿದ್ದಾರೆ. 2021ರ ಜನವರಿಯಲ್ಲಿ ಆರೋಗ್ಯ ಸಮಸ್ಯೆಗಳಿಂದ ನಾಯಿ ಸಾವನ್ನಪ್ಪಿತ್ತು.  ಆ ನಾಯಿಯ ಸಾವಿನ ಬಳಿಕ ಅಮೃತಶಿಲೆಯಲ್ಲಿ ನಾಯಿಯ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಸಾಯುವವರೆಗೂ ಅವರು ಟಾಮ್‌ನೊಂದಿಗೆ ಸುಮಾರು 11 ವರ್ಷಗಳ ಕಾಲ ಜೀವನ ಕಳೆದಿದ್ದರು.

ಟಾಮ್‌ನನ್ನು ನನ್ನ ಸಹೋದರ ಅರುಣ್ ಕುಮಾರ್ 11 ವರ್ಷಗಳ ಹಿಂದೆ ಖರೀದಿಸಿದನು, ಆದರೆ ಅದನ್ನು ನಮ್ಮೊಂದಿಗೆ ಇಟ್ಟುಕೊಳ್ಳಲು ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಅವನನ್ನು 6 ತಿಂಗಳ ನಂತರ ನಮ್ಮ ಚಿಕ್ಕಪ್ಪನಿಗೆ ಒಪ್ಪಿಸಿದೆವು. ಟಾಮ್ ಎಂದೆಂದಿಗೂ ಅವರ ಒಡನಾಡಿಯಾಗಿದ್ದನು. ಅವರಿಬ್ಬರ ನಡುವೆ ಬಹಳ ಪ್ರೀತಿಯಿತ್ತು ಎಂದು ಮುತ್ತು ಅವರ ಸಂಬಂಧಿ ಮಾಹಿತಿ ನೀಡಿದ್ದಾರೆ.

1 ವರ್ಷದ ಹಿಂದೆ ಟಾಮ್​ಗೆ ಆರೋಗ್ಯ ಸಮಸ್ಯೆಗಳು ಎದುರಾಗಿತ್ತು. 2021ರ ಜನವರಿಯಲ್ಲಿ ಟಾಮ್ ಸಾವನ್ನಪ್ಪಿತ್ತು. ತನ್ನ ಪ್ರೀತಿಯ ನಾಯಿ ಟಾಮ್ ನೆನಪಿಗಾಗಿ ಮುತ್ತು 80,000 ರೂ.ಗಳನ್ನು ಖರ್ಚು ಮಾಡಿ ತನ್ನ ಒಡನಾಡಿಯಾದ ನಾಯಿಯ ಅಮೃತಶಿಲೆಯ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ನಂತರ ಶಿವಗಂಗಾ ಜಿಲ್ಲೆಯ ಮನಮದುರೈ ಬಳಿಯ ಬ್ರಾಹ್ಮಣಕುರಿಚಿಯಲ್ಲಿ ತಮ್ಮ ಕೃಷಿ ಭೂಮಿಯಲ್ಲಿ ದೇವಾಲಯವನ್ನು ನಿರ್ಮಿಸಿದ್ದಾರೆ.

ಸಾಕು ನಾಯಿ ಟಾಮ್​ನ ಪ್ರತಿಮೆಗೆ ಪ್ರತಿದಿನ ನೈವೇದ್ಯವನ್ನು ಸಲ್ಲಿಸಲಾಗುತ್ತದೆ. ಎಲ್ಲಾ ಶುಭ ದಿನಗಳಂದು ಆ ನಾಯಿಯ ಪ್ರತಿಮೆಗೆ ಹಾರವನ್ನು ಹಾಕಿ, ಟಾಮ್ ಅವರ ನೆಚ್ಚಿನ ಆಹಾರವನ್ನು ಆ ಪ್ರತಿಮೆಯ ಬಳಿ ಇಡಲಾಗುತ್ತದೆ. ಟಾಮ್‌ನ ಮರಣದ ಒಂದು ವರ್ಷದ ನಂತರ ಜನವರಿಯಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಯಿತು ಮತ್ತು ಜನರು ಬಂದು ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸಲು ದೇವಾಲಯವನ್ನು ತೆರೆಯಲಾಗಿದೆ.

ಇದನ್ನೂ ಓದಿ: Viral Video: ಕೊಳಕ್ಕೆ ಬೀಳುತ್ತಿದ್ದ ಮಗುವಿನ ಪ್ರಾಣ ಉಳಿಸಿದ ಶ್ವಾನ; ಸಾಕು ನಾಯಿಯ ಜಾಣತನಕ್ಕೆ ನೆಟ್ಟಿಗರು ಫಿದಾ

Shocking News: ನಾಯಿ ಬೊಗಳುತ್ತದೆ ಎಂದು ಚಾಕುವಿನಿಂದ ಇರಿದು ಕೊಲೆ!

Published On - 7:53 pm, Wed, 30 March 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ