AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹಲ್ಲುಜ್ಜುತ್ತಿರುವಾಗ ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?

ಗಂಟಲಲ್ಲಿ ಏನೋ ಆಹಾರ ಸಿಕ್ಕಿಕೊಂಡಿದೆ ಎಂದು ಯುವತಿಯೊಬ್ಬಳು ಹಲ್ಲುಜ್ಜುತ್ತಿರುವಾಗ ಬ್ರಷ್​​ನ ಸಹಾಯದಿಂದ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ ಹಲ್ಲುಜ್ಜುವ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಮುಂದೇನಾಯಿತು ಗೊತ್ತಾ?

Viral: ಹಲ್ಲುಜ್ಜುತ್ತಿರುವಾಗ ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Dec 06, 2023 | 11:18 AM

Share

ಸ್ಪೇನ್‌ನ ಗಾಲ್ಡಕಾವೊದ 21 ವರ್ಷದ ಯುವತಿಯೊಬ್ಬಳ ಗಂಟಲಿನಲ್ಲಿ ರಾತ್ರಿ ತಿಂದ ಆಹಾರ ಸಿಕ್ಕಿಕೊಂಡಿದೆ. ಗಂಟಲು ನೋವಿನಿಂದಾಗಿ ಬೆಳಿಗ್ಗೆ ಹಲ್ಲುಜ್ಜುವ ಸಮಯದಲ್ಲಿ ಬ್ರಷ್​​​ ಸಹಾಯದಿಂದ ಸಿಕ್ಕಿಕೊಂಡಿರುವ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ ಹಲ್ಲುಜ್ಜುವ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಈ ಸಮಯದಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು,ತಕ್ಷಣ ಆಕೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು ಮೂರ್ನಾಲ್ಕು ಗಂಟೆಗಳ ವೈದ್ಯರ ಹರಸಾಹಸದ ನಂತರ ಬ್ರಷ್​​ ಹೊರಕ್ಕೆ ತೆಗೆಯಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಗಂಟಲಲ್ಲಿ ಸಿಲುಕಿಕೊಂಡ 8 ಇಂಚಿನ ಬ್ರಷ್:

ವರದಿಗಳ ಪ್ರಕಾರ ನವೆಂಬರ್ 29 ರಂದು ಈ ಘಟನೆ ನಡೆದಿದೆ. ಯುವತಿ ರಾತ್ರಿ ಊಟದ ವೇಳೆ ಮಾಂಸವನ್ನು ತಿಂದಿದ್ದಳು. ಆದರೆ ಮಾಂಸದ ಮೂಳೆ ಗಂಟಲಿಗೆ ಸಿಲುಕಿಕೊಂಡಿದ್ದು,ಉಸಿರಾಡಲು ಕಷ್ಟ ಪಡುವಂತಾಗಿದೆ. ಆದರೆ ಬೆಳಿಗ್ಗೆ ಹಲ್ಲುಜ್ಜುವ ಸಮಯದಲ್ಲಿ ಬ್ರಷ್​​​​ ಬಳಸಿ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ 8 ಇಂಚಿನ ಟೂತ್ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಆಕೆಯ ಒದ್ದಾಟ ಕಂಡು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ವೈದ್ಯರು ಕೂಡ ಅವರ ಸ್ಥಿತಿಯನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ.

ಇದನ್ನೂ ಓದಿ: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ

ಅಂತಿಮವಾಗಿ, ಮೂರು ಗಂಟೆಗಳ ಪರೀಕ್ಷೆ ಮತ್ತು 40 ನಿಮಿಷಗಳ ಪ್ರಯತ್ನದ ನಂತರ, ವೈದ್ಯರು ಆಕೆಯ ಗಂಟಲಲ್ಲಿ ಸಿಲುಕಿಕೊಂಡಿದ್ದ ಬ್ರಷ್ ಅನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಗಂಟಲಿನ ಶಸ್ತ್ರಚಿಕಿತ್ಸೆಗೆ ಇಲ್ಲದೆ ಶಸ್ತ್ರಚಿಕಿತ್ಸಾ ಉಪಕರಣದ ಸಹಾಯದಿಂದ ವೈದ್ಯರು ಬ್ರಷ್ ಅನ್ನು ಹೊರತೆಗೆದರು. ಕೆಲ ಹೊತ್ತಿನ ಬಳಿಕ ಮಹಿಳೆಗೆ ಪ್ರಜ್ಞೆ ಬಂದಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ