AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹಲ್ಲುಜ್ಜುತ್ತಿರುವಾಗ ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?

ಗಂಟಲಲ್ಲಿ ಏನೋ ಆಹಾರ ಸಿಕ್ಕಿಕೊಂಡಿದೆ ಎಂದು ಯುವತಿಯೊಬ್ಬಳು ಹಲ್ಲುಜ್ಜುತ್ತಿರುವಾಗ ಬ್ರಷ್​​ನ ಸಹಾಯದಿಂದ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ ಹಲ್ಲುಜ್ಜುವ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಮುಂದೇನಾಯಿತು ಗೊತ್ತಾ?

Viral: ಹಲ್ಲುಜ್ಜುತ್ತಿರುವಾಗ ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Dec 06, 2023 | 11:18 AM

Share

ಸ್ಪೇನ್‌ನ ಗಾಲ್ಡಕಾವೊದ 21 ವರ್ಷದ ಯುವತಿಯೊಬ್ಬಳ ಗಂಟಲಿನಲ್ಲಿ ರಾತ್ರಿ ತಿಂದ ಆಹಾರ ಸಿಕ್ಕಿಕೊಂಡಿದೆ. ಗಂಟಲು ನೋವಿನಿಂದಾಗಿ ಬೆಳಿಗ್ಗೆ ಹಲ್ಲುಜ್ಜುವ ಸಮಯದಲ್ಲಿ ಬ್ರಷ್​​​ ಸಹಾಯದಿಂದ ಸಿಕ್ಕಿಕೊಂಡಿರುವ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ ಹಲ್ಲುಜ್ಜುವ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಈ ಸಮಯದಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು,ತಕ್ಷಣ ಆಕೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು ಮೂರ್ನಾಲ್ಕು ಗಂಟೆಗಳ ವೈದ್ಯರ ಹರಸಾಹಸದ ನಂತರ ಬ್ರಷ್​​ ಹೊರಕ್ಕೆ ತೆಗೆಯಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಗಂಟಲಲ್ಲಿ ಸಿಲುಕಿಕೊಂಡ 8 ಇಂಚಿನ ಬ್ರಷ್:

ವರದಿಗಳ ಪ್ರಕಾರ ನವೆಂಬರ್ 29 ರಂದು ಈ ಘಟನೆ ನಡೆದಿದೆ. ಯುವತಿ ರಾತ್ರಿ ಊಟದ ವೇಳೆ ಮಾಂಸವನ್ನು ತಿಂದಿದ್ದಳು. ಆದರೆ ಮಾಂಸದ ಮೂಳೆ ಗಂಟಲಿಗೆ ಸಿಲುಕಿಕೊಂಡಿದ್ದು,ಉಸಿರಾಡಲು ಕಷ್ಟ ಪಡುವಂತಾಗಿದೆ. ಆದರೆ ಬೆಳಿಗ್ಗೆ ಹಲ್ಲುಜ್ಜುವ ಸಮಯದಲ್ಲಿ ಬ್ರಷ್​​​​ ಬಳಸಿ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ 8 ಇಂಚಿನ ಟೂತ್ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಆಕೆಯ ಒದ್ದಾಟ ಕಂಡು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ವೈದ್ಯರು ಕೂಡ ಅವರ ಸ್ಥಿತಿಯನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ.

ಇದನ್ನೂ ಓದಿ: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ

ಅಂತಿಮವಾಗಿ, ಮೂರು ಗಂಟೆಗಳ ಪರೀಕ್ಷೆ ಮತ್ತು 40 ನಿಮಿಷಗಳ ಪ್ರಯತ್ನದ ನಂತರ, ವೈದ್ಯರು ಆಕೆಯ ಗಂಟಲಲ್ಲಿ ಸಿಲುಕಿಕೊಂಡಿದ್ದ ಬ್ರಷ್ ಅನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಗಂಟಲಿನ ಶಸ್ತ್ರಚಿಕಿತ್ಸೆಗೆ ಇಲ್ಲದೆ ಶಸ್ತ್ರಚಿಕಿತ್ಸಾ ಉಪಕರಣದ ಸಹಾಯದಿಂದ ವೈದ್ಯರು ಬ್ರಷ್ ಅನ್ನು ಹೊರತೆಗೆದರು. ಕೆಲ ಹೊತ್ತಿನ ಬಳಿಕ ಮಹಿಳೆಗೆ ಪ್ರಜ್ಞೆ ಬಂದಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು