AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ದಿನವೇ ವಧು ನಾಪತ್ತೆ; ಮಂಟಪದಲ್ಲೇ 13 ದಿನ ಕಾದು ಕುಳಿತ ವರ

ಮದುವೆಯ ದಿನ ವಧು ನಾಪತ್ತೆಯಾಗಿದ್ದಾಳೆ. ಆಕೆಯ ಬರುವಿಕೆಗಾಗಿ ವರ ಮಂಟಪದಲ್ಲೇ 13 ದಿನಗಳ ವರೆಗೆ ಕಾದು ಕುಳಿತ್ತಿದ್ದಾನೆ. ಮುಂದೇನಾಯಿತು? ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

ಮದುವೆಯ ದಿನವೇ ವಧು ನಾಪತ್ತೆ; ಮಂಟಪದಲ್ಲೇ 13 ದಿನ ಕಾದು ಕುಳಿತ ವರ
ಮದುವೆಯ ದಿನವೇ ವಧು ನಾಪತ್ತೆ
Follow us
ಅಕ್ಷತಾ ವರ್ಕಾಡಿ
|

Updated on:May 30, 2023 | 10:57 AM

ರಾಜಸ್ಥಾನ: ಸೈನಾ ಗ್ರಾಮದ ಮದುವೆಯ ವಿಚಾರವೊಂದು ಎಲ್ಲೆಡೆ ಭಾರೀ ವೈರಲ್​​​ ಆಗಿದೆ. ವರ ತನ್ನ ವಧುವಿನ ಬರುವಿಕೆಗಾಗಿ 13 ದಿನಗಳ ವರೆಗೆ ಮಂಟಪದಲ್ಲೇ ಕಾದು ಕುಳಿತ್ತಿದ್ದಾನೆ. ಮೇ 3ರಂದು ನಡೆಯಬೇಕಿದ್ದ ಮದುವೆ ಕಡೆಗೂ ಮೇ 15ರಂದು ನಡೆದಿದೆ. ಅಷ್ಟಕ್ಕೂ ಈ ಮದುವೆ ಇಷ್ಟೆಲ್ಲಾ ಗೊಂದಲವನ್ನು ಸೃಷ್ಟಿಸಲು ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ವಿವರ.

ಏನಿದು ಘಟನೆ?

ಮೇ 03ರಂದು ಗುರು ಹಿರಿಯರ ಸಮ್ಮುಖದಲ್ಲಿ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು. ಆದರಂತೆ ಆ ದಿನವೇ ವಧು ಹಾಗು ವರ ಅವರ ಕುಟುಂಬದವರು ಮದುವೆ ಮಂಟಪಕ್ಕೆ ತಲುಪಿದ್ದಾರೆ. ಮದುವೆ ಶಾಸ್ತ್ರಗಳು ನಡೆಯುತ್ತಿದ್ದಂತೆ ವಧು ಹೊಟ್ಟೆ ನೋವು, ವಾಕರಿಕೆ ಬರುವುದಾಗಿ ವಾಶ್​​​ ರೂಮಿಗೆ ಹೋಗಿದ್ದಾಳೆ. ಆದರೆ ಆದರೆ ಎಷ್ಟೇ ಹೊತ್ತಾದರೂ ವಧುವಿನ ಪತ್ತೆಯೇ ಇಲ್ಲ. ಅನುಮಾನಗೊಂಡು ಆಕೆಯ ಪೋಷಕರು ಹುಡುಕಾಡ ತೊಡಗಿದ್ದಾರೆ. ಆದರೆ ಕೆಲವೇ ಹೊತ್ತಿಗೆ ಆಕೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿರುವುದಾಗಿ ತಿಳಿದುಬಂದಿದೆ. ಆದರೆ ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು 13 ದಿನಗಳ ವರೆಗೆ ಮದುವೆ ಮಂಟಪದಲ್ಲೇ ಕುಳಿತ್ತಿದ್ದಾನೆ.

ಇದನ್ನೂ ಓದಿ: ಈ ಪ್ರೀತಿಯ ವರ್ಣಿಸಲು ಪದಗಳಿಲ್ಲ, ಪತ್ನಿ ಇಲ್ಲದಿದ್ದರೂ ಸದಾ ನೆನಪಿಸಿಕೊಳ್ಳುವ ಹೃದಯ, ಮೃತ ಪತ್ನಿಯ ಫೋಟೋಗೆ ಜ್ಯೂಸ್​ ಕುಡಿಸುತ್ತಿರುವ ವೃದ್ಧ

ವಧುವನ್ನು ಮತ್ತೇ ಕರೆತಂದು ಮದುವೆ;

ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು ಕುಳಿತಿರುವುದನ್ನು ಕಂಡು ವಧುವಿನ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದ್ದಾರೆ. ಜೊತೆಗೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪರಿಣಾಮವಾಗಿ, ಪೋಲೀಸರ ಮಧ್ಯಪ್ರವೇಶದ ನಂತರ, ಮೇ 15 ರಂದು ಮಹಿಳೆಯನ್ನು ಪತ್ತೆಹಚ್ಚಲಾಗಿದ್ದು, ಆಕೆಯ ಮನೆಗೆ ಒಪ್ಪಿಸಲಾಗಿದೆ. ಬಳಿಕ ಮಂಟಪದಲ್ಲೇ ಕಾದು ಕುಳಿತಿದ್ದ ವರನೊಂದಿಗೆ ಎಲ್ಲಾ ವಿಧಿವಿಧಾನಗಳೊಂದಿಗೆ ವಿವಾಹ ನೆರವೇರಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 10:57 am, Tue, 30 May 23

ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ