AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ದಿನವೇ ವಧು ನಾಪತ್ತೆ; ಮಂಟಪದಲ್ಲೇ 13 ದಿನ ಕಾದು ಕುಳಿತ ವರ

ಮದುವೆಯ ದಿನ ವಧು ನಾಪತ್ತೆಯಾಗಿದ್ದಾಳೆ. ಆಕೆಯ ಬರುವಿಕೆಗಾಗಿ ವರ ಮಂಟಪದಲ್ಲೇ 13 ದಿನಗಳ ವರೆಗೆ ಕಾದು ಕುಳಿತ್ತಿದ್ದಾನೆ. ಮುಂದೇನಾಯಿತು? ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

ಮದುವೆಯ ದಿನವೇ ವಧು ನಾಪತ್ತೆ; ಮಂಟಪದಲ್ಲೇ 13 ದಿನ ಕಾದು ಕುಳಿತ ವರ
ಮದುವೆಯ ದಿನವೇ ವಧು ನಾಪತ್ತೆ
ಅಕ್ಷತಾ ವರ್ಕಾಡಿ
|

Updated on:May 30, 2023 | 10:57 AM

Share

ರಾಜಸ್ಥಾನ: ಸೈನಾ ಗ್ರಾಮದ ಮದುವೆಯ ವಿಚಾರವೊಂದು ಎಲ್ಲೆಡೆ ಭಾರೀ ವೈರಲ್​​​ ಆಗಿದೆ. ವರ ತನ್ನ ವಧುವಿನ ಬರುವಿಕೆಗಾಗಿ 13 ದಿನಗಳ ವರೆಗೆ ಮಂಟಪದಲ್ಲೇ ಕಾದು ಕುಳಿತ್ತಿದ್ದಾನೆ. ಮೇ 3ರಂದು ನಡೆಯಬೇಕಿದ್ದ ಮದುವೆ ಕಡೆಗೂ ಮೇ 15ರಂದು ನಡೆದಿದೆ. ಅಷ್ಟಕ್ಕೂ ಈ ಮದುವೆ ಇಷ್ಟೆಲ್ಲಾ ಗೊಂದಲವನ್ನು ಸೃಷ್ಟಿಸಲು ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ವಿವರ.

ಏನಿದು ಘಟನೆ?

ಮೇ 03ರಂದು ಗುರು ಹಿರಿಯರ ಸಮ್ಮುಖದಲ್ಲಿ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು. ಆದರಂತೆ ಆ ದಿನವೇ ವಧು ಹಾಗು ವರ ಅವರ ಕುಟುಂಬದವರು ಮದುವೆ ಮಂಟಪಕ್ಕೆ ತಲುಪಿದ್ದಾರೆ. ಮದುವೆ ಶಾಸ್ತ್ರಗಳು ನಡೆಯುತ್ತಿದ್ದಂತೆ ವಧು ಹೊಟ್ಟೆ ನೋವು, ವಾಕರಿಕೆ ಬರುವುದಾಗಿ ವಾಶ್​​​ ರೂಮಿಗೆ ಹೋಗಿದ್ದಾಳೆ. ಆದರೆ ಆದರೆ ಎಷ್ಟೇ ಹೊತ್ತಾದರೂ ವಧುವಿನ ಪತ್ತೆಯೇ ಇಲ್ಲ. ಅನುಮಾನಗೊಂಡು ಆಕೆಯ ಪೋಷಕರು ಹುಡುಕಾಡ ತೊಡಗಿದ್ದಾರೆ. ಆದರೆ ಕೆಲವೇ ಹೊತ್ತಿಗೆ ಆಕೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿರುವುದಾಗಿ ತಿಳಿದುಬಂದಿದೆ. ಆದರೆ ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು 13 ದಿನಗಳ ವರೆಗೆ ಮದುವೆ ಮಂಟಪದಲ್ಲೇ ಕುಳಿತ್ತಿದ್ದಾನೆ.

ಇದನ್ನೂ ಓದಿ: ಈ ಪ್ರೀತಿಯ ವರ್ಣಿಸಲು ಪದಗಳಿಲ್ಲ, ಪತ್ನಿ ಇಲ್ಲದಿದ್ದರೂ ಸದಾ ನೆನಪಿಸಿಕೊಳ್ಳುವ ಹೃದಯ, ಮೃತ ಪತ್ನಿಯ ಫೋಟೋಗೆ ಜ್ಯೂಸ್​ ಕುಡಿಸುತ್ತಿರುವ ವೃದ್ಧ

ವಧುವನ್ನು ಮತ್ತೇ ಕರೆತಂದು ಮದುವೆ;

ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು ಕುಳಿತಿರುವುದನ್ನು ಕಂಡು ವಧುವಿನ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದ್ದಾರೆ. ಜೊತೆಗೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪರಿಣಾಮವಾಗಿ, ಪೋಲೀಸರ ಮಧ್ಯಪ್ರವೇಶದ ನಂತರ, ಮೇ 15 ರಂದು ಮಹಿಳೆಯನ್ನು ಪತ್ತೆಹಚ್ಚಲಾಗಿದ್ದು, ಆಕೆಯ ಮನೆಗೆ ಒಪ್ಪಿಸಲಾಗಿದೆ. ಬಳಿಕ ಮಂಟಪದಲ್ಲೇ ಕಾದು ಕುಳಿತಿದ್ದ ವರನೊಂದಿಗೆ ಎಲ್ಲಾ ವಿಧಿವಿಧಾನಗಳೊಂದಿಗೆ ವಿವಾಹ ನೆರವೇರಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 10:57 am, Tue, 30 May 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ