AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ದಿನವೇ ವಧು ನಾಪತ್ತೆ; ಮಂಟಪದಲ್ಲೇ 13 ದಿನ ಕಾದು ಕುಳಿತ ವರ

ಮದುವೆಯ ದಿನ ವಧು ನಾಪತ್ತೆಯಾಗಿದ್ದಾಳೆ. ಆಕೆಯ ಬರುವಿಕೆಗಾಗಿ ವರ ಮಂಟಪದಲ್ಲೇ 13 ದಿನಗಳ ವರೆಗೆ ಕಾದು ಕುಳಿತ್ತಿದ್ದಾನೆ. ಮುಂದೇನಾಯಿತು? ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

ಮದುವೆಯ ದಿನವೇ ವಧು ನಾಪತ್ತೆ; ಮಂಟಪದಲ್ಲೇ 13 ದಿನ ಕಾದು ಕುಳಿತ ವರ
ಮದುವೆಯ ದಿನವೇ ವಧು ನಾಪತ್ತೆ
ಅಕ್ಷತಾ ವರ್ಕಾಡಿ
|

Updated on:May 30, 2023 | 10:57 AM

Share

ರಾಜಸ್ಥಾನ: ಸೈನಾ ಗ್ರಾಮದ ಮದುವೆಯ ವಿಚಾರವೊಂದು ಎಲ್ಲೆಡೆ ಭಾರೀ ವೈರಲ್​​​ ಆಗಿದೆ. ವರ ತನ್ನ ವಧುವಿನ ಬರುವಿಕೆಗಾಗಿ 13 ದಿನಗಳ ವರೆಗೆ ಮಂಟಪದಲ್ಲೇ ಕಾದು ಕುಳಿತ್ತಿದ್ದಾನೆ. ಮೇ 3ರಂದು ನಡೆಯಬೇಕಿದ್ದ ಮದುವೆ ಕಡೆಗೂ ಮೇ 15ರಂದು ನಡೆದಿದೆ. ಅಷ್ಟಕ್ಕೂ ಈ ಮದುವೆ ಇಷ್ಟೆಲ್ಲಾ ಗೊಂದಲವನ್ನು ಸೃಷ್ಟಿಸಲು ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ವಿವರ.

ಏನಿದು ಘಟನೆ?

ಮೇ 03ರಂದು ಗುರು ಹಿರಿಯರ ಸಮ್ಮುಖದಲ್ಲಿ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು. ಆದರಂತೆ ಆ ದಿನವೇ ವಧು ಹಾಗು ವರ ಅವರ ಕುಟುಂಬದವರು ಮದುವೆ ಮಂಟಪಕ್ಕೆ ತಲುಪಿದ್ದಾರೆ. ಮದುವೆ ಶಾಸ್ತ್ರಗಳು ನಡೆಯುತ್ತಿದ್ದಂತೆ ವಧು ಹೊಟ್ಟೆ ನೋವು, ವಾಕರಿಕೆ ಬರುವುದಾಗಿ ವಾಶ್​​​ ರೂಮಿಗೆ ಹೋಗಿದ್ದಾಳೆ. ಆದರೆ ಆದರೆ ಎಷ್ಟೇ ಹೊತ್ತಾದರೂ ವಧುವಿನ ಪತ್ತೆಯೇ ಇಲ್ಲ. ಅನುಮಾನಗೊಂಡು ಆಕೆಯ ಪೋಷಕರು ಹುಡುಕಾಡ ತೊಡಗಿದ್ದಾರೆ. ಆದರೆ ಕೆಲವೇ ಹೊತ್ತಿಗೆ ಆಕೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿರುವುದಾಗಿ ತಿಳಿದುಬಂದಿದೆ. ಆದರೆ ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು 13 ದಿನಗಳ ವರೆಗೆ ಮದುವೆ ಮಂಟಪದಲ್ಲೇ ಕುಳಿತ್ತಿದ್ದಾನೆ.

ಇದನ್ನೂ ಓದಿ: ಈ ಪ್ರೀತಿಯ ವರ್ಣಿಸಲು ಪದಗಳಿಲ್ಲ, ಪತ್ನಿ ಇಲ್ಲದಿದ್ದರೂ ಸದಾ ನೆನಪಿಸಿಕೊಳ್ಳುವ ಹೃದಯ, ಮೃತ ಪತ್ನಿಯ ಫೋಟೋಗೆ ಜ್ಯೂಸ್​ ಕುಡಿಸುತ್ತಿರುವ ವೃದ್ಧ

ವಧುವನ್ನು ಮತ್ತೇ ಕರೆತಂದು ಮದುವೆ;

ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು ಕುಳಿತಿರುವುದನ್ನು ಕಂಡು ವಧುವಿನ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದ್ದಾರೆ. ಜೊತೆಗೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪರಿಣಾಮವಾಗಿ, ಪೋಲೀಸರ ಮಧ್ಯಪ್ರವೇಶದ ನಂತರ, ಮೇ 15 ರಂದು ಮಹಿಳೆಯನ್ನು ಪತ್ತೆಹಚ್ಚಲಾಗಿದ್ದು, ಆಕೆಯ ಮನೆಗೆ ಒಪ್ಪಿಸಲಾಗಿದೆ. ಬಳಿಕ ಮಂಟಪದಲ್ಲೇ ಕಾದು ಕುಳಿತಿದ್ದ ವರನೊಂದಿಗೆ ಎಲ್ಲಾ ವಿಧಿವಿಧಾನಗಳೊಂದಿಗೆ ವಿವಾಹ ನೆರವೇರಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 10:57 am, Tue, 30 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ