AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ದಿನವೇ ವಧು ನಾಪತ್ತೆ; ಮಂಟಪದಲ್ಲೇ 13 ದಿನ ಕಾದು ಕುಳಿತ ವರ

ಮದುವೆಯ ದಿನ ವಧು ನಾಪತ್ತೆಯಾಗಿದ್ದಾಳೆ. ಆಕೆಯ ಬರುವಿಕೆಗಾಗಿ ವರ ಮಂಟಪದಲ್ಲೇ 13 ದಿನಗಳ ವರೆಗೆ ಕಾದು ಕುಳಿತ್ತಿದ್ದಾನೆ. ಮುಂದೇನಾಯಿತು? ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

ಮದುವೆಯ ದಿನವೇ ವಧು ನಾಪತ್ತೆ; ಮಂಟಪದಲ್ಲೇ 13 ದಿನ ಕಾದು ಕುಳಿತ ವರ
ಮದುವೆಯ ದಿನವೇ ವಧು ನಾಪತ್ತೆ
ಅಕ್ಷತಾ ವರ್ಕಾಡಿ
|

Updated on:May 30, 2023 | 10:57 AM

Share

ರಾಜಸ್ಥಾನ: ಸೈನಾ ಗ್ರಾಮದ ಮದುವೆಯ ವಿಚಾರವೊಂದು ಎಲ್ಲೆಡೆ ಭಾರೀ ವೈರಲ್​​​ ಆಗಿದೆ. ವರ ತನ್ನ ವಧುವಿನ ಬರುವಿಕೆಗಾಗಿ 13 ದಿನಗಳ ವರೆಗೆ ಮಂಟಪದಲ್ಲೇ ಕಾದು ಕುಳಿತ್ತಿದ್ದಾನೆ. ಮೇ 3ರಂದು ನಡೆಯಬೇಕಿದ್ದ ಮದುವೆ ಕಡೆಗೂ ಮೇ 15ರಂದು ನಡೆದಿದೆ. ಅಷ್ಟಕ್ಕೂ ಈ ಮದುವೆ ಇಷ್ಟೆಲ್ಲಾ ಗೊಂದಲವನ್ನು ಸೃಷ್ಟಿಸಲು ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ವಿವರ.

ಏನಿದು ಘಟನೆ?

ಮೇ 03ರಂದು ಗುರು ಹಿರಿಯರ ಸಮ್ಮುಖದಲ್ಲಿ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು. ಆದರಂತೆ ಆ ದಿನವೇ ವಧು ಹಾಗು ವರ ಅವರ ಕುಟುಂಬದವರು ಮದುವೆ ಮಂಟಪಕ್ಕೆ ತಲುಪಿದ್ದಾರೆ. ಮದುವೆ ಶಾಸ್ತ್ರಗಳು ನಡೆಯುತ್ತಿದ್ದಂತೆ ವಧು ಹೊಟ್ಟೆ ನೋವು, ವಾಕರಿಕೆ ಬರುವುದಾಗಿ ವಾಶ್​​​ ರೂಮಿಗೆ ಹೋಗಿದ್ದಾಳೆ. ಆದರೆ ಆದರೆ ಎಷ್ಟೇ ಹೊತ್ತಾದರೂ ವಧುವಿನ ಪತ್ತೆಯೇ ಇಲ್ಲ. ಅನುಮಾನಗೊಂಡು ಆಕೆಯ ಪೋಷಕರು ಹುಡುಕಾಡ ತೊಡಗಿದ್ದಾರೆ. ಆದರೆ ಕೆಲವೇ ಹೊತ್ತಿಗೆ ಆಕೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿರುವುದಾಗಿ ತಿಳಿದುಬಂದಿದೆ. ಆದರೆ ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು 13 ದಿನಗಳ ವರೆಗೆ ಮದುವೆ ಮಂಟಪದಲ್ಲೇ ಕುಳಿತ್ತಿದ್ದಾನೆ.

ಇದನ್ನೂ ಓದಿ: ಈ ಪ್ರೀತಿಯ ವರ್ಣಿಸಲು ಪದಗಳಿಲ್ಲ, ಪತ್ನಿ ಇಲ್ಲದಿದ್ದರೂ ಸದಾ ನೆನಪಿಸಿಕೊಳ್ಳುವ ಹೃದಯ, ಮೃತ ಪತ್ನಿಯ ಫೋಟೋಗೆ ಜ್ಯೂಸ್​ ಕುಡಿಸುತ್ತಿರುವ ವೃದ್ಧ

ವಧುವನ್ನು ಮತ್ತೇ ಕರೆತಂದು ಮದುವೆ;

ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು ಕುಳಿತಿರುವುದನ್ನು ಕಂಡು ವಧುವಿನ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದ್ದಾರೆ. ಜೊತೆಗೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪರಿಣಾಮವಾಗಿ, ಪೋಲೀಸರ ಮಧ್ಯಪ್ರವೇಶದ ನಂತರ, ಮೇ 15 ರಂದು ಮಹಿಳೆಯನ್ನು ಪತ್ತೆಹಚ್ಚಲಾಗಿದ್ದು, ಆಕೆಯ ಮನೆಗೆ ಒಪ್ಪಿಸಲಾಗಿದೆ. ಬಳಿಕ ಮಂಟಪದಲ್ಲೇ ಕಾದು ಕುಳಿತಿದ್ದ ವರನೊಂದಿಗೆ ಎಲ್ಲಾ ವಿಧಿವಿಧಾನಗಳೊಂದಿಗೆ ವಿವಾಹ ನೆರವೇರಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 10:57 am, Tue, 30 May 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್