AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ದಿನವೇ ವಧು ನಾಪತ್ತೆ; ಮಂಟಪದಲ್ಲೇ 13 ದಿನ ಕಾದು ಕುಳಿತ ವರ

ಮದುವೆಯ ದಿನ ವಧು ನಾಪತ್ತೆಯಾಗಿದ್ದಾಳೆ. ಆಕೆಯ ಬರುವಿಕೆಗಾಗಿ ವರ ಮಂಟಪದಲ್ಲೇ 13 ದಿನಗಳ ವರೆಗೆ ಕಾದು ಕುಳಿತ್ತಿದ್ದಾನೆ. ಮುಂದೇನಾಯಿತು? ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

ಮದುವೆಯ ದಿನವೇ ವಧು ನಾಪತ್ತೆ; ಮಂಟಪದಲ್ಲೇ 13 ದಿನ ಕಾದು ಕುಳಿತ ವರ
ಮದುವೆಯ ದಿನವೇ ವಧು ನಾಪತ್ತೆ
ಅಕ್ಷತಾ ವರ್ಕಾಡಿ
|

Updated on:May 30, 2023 | 10:57 AM

Share

ರಾಜಸ್ಥಾನ: ಸೈನಾ ಗ್ರಾಮದ ಮದುವೆಯ ವಿಚಾರವೊಂದು ಎಲ್ಲೆಡೆ ಭಾರೀ ವೈರಲ್​​​ ಆಗಿದೆ. ವರ ತನ್ನ ವಧುವಿನ ಬರುವಿಕೆಗಾಗಿ 13 ದಿನಗಳ ವರೆಗೆ ಮಂಟಪದಲ್ಲೇ ಕಾದು ಕುಳಿತ್ತಿದ್ದಾನೆ. ಮೇ 3ರಂದು ನಡೆಯಬೇಕಿದ್ದ ಮದುವೆ ಕಡೆಗೂ ಮೇ 15ರಂದು ನಡೆದಿದೆ. ಅಷ್ಟಕ್ಕೂ ಈ ಮದುವೆ ಇಷ್ಟೆಲ್ಲಾ ಗೊಂದಲವನ್ನು ಸೃಷ್ಟಿಸಲು ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ವಿವರ.

ಏನಿದು ಘಟನೆ?

ಮೇ 03ರಂದು ಗುರು ಹಿರಿಯರ ಸಮ್ಮುಖದಲ್ಲಿ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು. ಆದರಂತೆ ಆ ದಿನವೇ ವಧು ಹಾಗು ವರ ಅವರ ಕುಟುಂಬದವರು ಮದುವೆ ಮಂಟಪಕ್ಕೆ ತಲುಪಿದ್ದಾರೆ. ಮದುವೆ ಶಾಸ್ತ್ರಗಳು ನಡೆಯುತ್ತಿದ್ದಂತೆ ವಧು ಹೊಟ್ಟೆ ನೋವು, ವಾಕರಿಕೆ ಬರುವುದಾಗಿ ವಾಶ್​​​ ರೂಮಿಗೆ ಹೋಗಿದ್ದಾಳೆ. ಆದರೆ ಆದರೆ ಎಷ್ಟೇ ಹೊತ್ತಾದರೂ ವಧುವಿನ ಪತ್ತೆಯೇ ಇಲ್ಲ. ಅನುಮಾನಗೊಂಡು ಆಕೆಯ ಪೋಷಕರು ಹುಡುಕಾಡ ತೊಡಗಿದ್ದಾರೆ. ಆದರೆ ಕೆಲವೇ ಹೊತ್ತಿಗೆ ಆಕೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿರುವುದಾಗಿ ತಿಳಿದುಬಂದಿದೆ. ಆದರೆ ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು 13 ದಿನಗಳ ವರೆಗೆ ಮದುವೆ ಮಂಟಪದಲ್ಲೇ ಕುಳಿತ್ತಿದ್ದಾನೆ.

ಇದನ್ನೂ ಓದಿ: ಈ ಪ್ರೀತಿಯ ವರ್ಣಿಸಲು ಪದಗಳಿಲ್ಲ, ಪತ್ನಿ ಇಲ್ಲದಿದ್ದರೂ ಸದಾ ನೆನಪಿಸಿಕೊಳ್ಳುವ ಹೃದಯ, ಮೃತ ಪತ್ನಿಯ ಫೋಟೋಗೆ ಜ್ಯೂಸ್​ ಕುಡಿಸುತ್ತಿರುವ ವೃದ್ಧ

ವಧುವನ್ನು ಮತ್ತೇ ಕರೆತಂದು ಮದುವೆ;

ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು ಕುಳಿತಿರುವುದನ್ನು ಕಂಡು ವಧುವಿನ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದ್ದಾರೆ. ಜೊತೆಗೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪರಿಣಾಮವಾಗಿ, ಪೋಲೀಸರ ಮಧ್ಯಪ್ರವೇಶದ ನಂತರ, ಮೇ 15 ರಂದು ಮಹಿಳೆಯನ್ನು ಪತ್ತೆಹಚ್ಚಲಾಗಿದ್ದು, ಆಕೆಯ ಮನೆಗೆ ಒಪ್ಪಿಸಲಾಗಿದೆ. ಬಳಿಕ ಮಂಟಪದಲ್ಲೇ ಕಾದು ಕುಳಿತಿದ್ದ ವರನೊಂದಿಗೆ ಎಲ್ಲಾ ವಿಧಿವಿಧಾನಗಳೊಂದಿಗೆ ವಿವಾಹ ನೆರವೇರಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 10:57 am, Tue, 30 May 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!