AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಯ ದಿನ ನೆಂಟರಿಷ್ಟರನ್ನು ಬರೀ ನೀರು ಕುಡಿಸಿ ಉಪಚರಿಸಿದ ವಧು

ಹೌದು ಮದುವೆ ಏನಾದರೇನೇ ಹಾಗೇ ಸಾಕಷ್ಟು ಖರ್ಚು ವೆಚ್ಚಗಳಿರುತ್ತದೆ. ಆದರೆ ಇಲ್ಲೊಂದು ಮದುಮೆಯಲ್ಲಿ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಆಲ್ಕೋಹಾಲ್​​​, ಯಾವುದೇ ಪಾನೀಯಗಳ ಬದಲಾಗಿ ಬಂದ ಅತಿಥಿಗಳಿಗೆ ನೀರು ನೀಡಿ ಮದುವೆ ಕಾರ್ಯಕ್ರಮದಲ್ಲಿ ಉಪಚರಿಸಿದ್ದಾರೆ.

Viral News: ಮದುವೆಯ ದಿನ ನೆಂಟರಿಷ್ಟರನ್ನು ಬರೀ ನೀರು ಕುಡಿಸಿ ಉಪಚರಿಸಿದ ವಧು
ಅಕ್ಷತಾ ವರ್ಕಾಡಿ
|

Updated on:Mar 23, 2023 | 6:58 PM

Share

ಮದುವೆ ಪ್ರತಿಯೊಬ್ಬರ ಜೀವನದಲ್ಲಿಯೂ ಒಂದು ವಿಶೇಷ ದಿನ. ಈ ವಿಶೇಷ ದಿನದಂದು ವಧು ವರರ ಬಟ್ಟೆಯಿಂದ ಹಿಡಿದು ಊಟ ಉಪಚಾರಗಳೆಲ್ಲಾವೂ ಯಾವುದೇ ಕುಂದು ಕೊರತೆಗಳಿಲ್ಲದೇ ಅದ್ಧೂರಿಯಿಂದ ನಡೆಯಬೇಕು ಎಂಬುದು ಪ್ರತಿಯೊಬ್ಬರ ಕನಸು. ಜೊತೆಗೆ ಇದಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡುವುದುಂಟು. ಆದರೆ ಇಲ್ಲೊಂದು ಖರ್ಚು ಕಡಿಮೆ ಮಾಡಿ ಮದುವೆ ನಡೆಸುವ ಉದ್ದೇಶದಿಂದ ಒಂದು ಒಳ್ಳೆಯ ಪ್ಲಾನ್​ ಮಾಡಿದ್ದಾರೆ.

ಹೌದು ಮದುವೆ ಏನಾದರೇನೇ ಹಾಗೇ ಸಾಕಷ್ಟು ಖರ್ಚು ವೆಚ್ಚಗಳಿರುತ್ತದೆ. ಆದರೆ ಇಲ್ಲೊಂದು ಮದುಮೆಯಲ್ಲಿ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಆಲ್ಕೋಹಾಲ್​​​, ಯಾವುದೇ ಪಾನೀಯಗಳ ಬದಲಾಗಿ ಬಂದ ಅತಿಥಿಗಳಿಗೆ ನೀರು ನೀಡಿ ಮದುವೆ ಕಾರ್ಯಕ್ರಮದಲ್ಲಿ ಉಪಚರಿಸಿದ್ದಾರೆ. ಮದುವೆಗೆ ಬಂದ ಅತಿಥಿಗಳಿಗೆ ಬರೀ ನೀರು ನೀಡಿರುವುದು, ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಸಾಮಾನ್ಯವಾಗಿ ಮದುವೆ ಎಂದಾಕ್ಷಣ ಪಾರ್ಟಿಗಳಿರುತ್ತದೆ. ಈ ಸಂದರ್ಭದಲ್ಲಿ ದುಬಾರಿ ಬೆಲೆಯ ಸಾಕಷ್ಟು ಆಲ್ಕೋಹಾಲ್​​, ಪಾನೀಯಗಳನ್ನು ನೀಡಲಾಗುತ್ತದೆ. ಆದರೆ ಈ ಮದುವೆ ಕಾರ್ಯಕ್ರಮದಲ್ಲಿ ದುಬಾರಿ ಪಾನೀಯಗಳ ಬದಲಾಗಿ ಕಡಿಮೆ ವೆಚ್ಚ ಭರಿಸುವ ನೀರಿನ ಬಾಟಲಿಯನ್ನು ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಂಬದಿಯಿಂದ ಬಂದು ಪಾದಚಾರಿಗಳನ್ನು ಭಯಗೊಳಿಸುವ ಬೈಕ್ ಸವಾರರು! ಇಬ್ಬರು ಅರೆಸ್ಟ್

ನಮ್ಮ ಮದುವೆಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಿದ್ದೇವೆ. ಆದರೆ ಮದುವೆಯಲ್ಲೂ ಹಣವನ್ನು ಉಳಿಸಲು ಹಲವಾರು ಮಾರ್ಗಗಳಿವೆ. ಆದ್ದರಿಂದ ದುಬಾರಿ ಪಾನೀಯಗಳಿಗೆ ಹಣವನ್ನು ಖರ್ಚು ಮಾಡುವ ಬದಲಿಗೆ ನಾವು ನೀರನ್ನು ನೀಡಿ ಹಣ ಉಳಿಸಿದ್ದೇವೆ ಎಂದು ವಧು ಹೇಳಿರುವುದು ಬಾರೀ ಚರ್ಚೆಯಾಗುತ್ತಿದೆ. ನಾನು ಮತ್ತು ನನ್ನ ಸಂಗಾತಿ ಆಲ್ಕೋಹಾಲ್ ಕುಡಿಯುವುದಿಲ್ಲ. ಆದ್ದರಿಂದ ನಮ್ಮ ಮದುವೆಯಲ್ಲಿ ಯಾವುದೇ ರೀತಿಯ ಮದ್ಯ ಇರುವುದಿಲ್ಲ ಎಂದು ಮದುವೆಮನೆಯಲ್ಲಿ ವಧು ಬಹಿರಂಗವಾಗಿ ಹೇಳಿಕೊಂಡಿದ್ದು, ಟೈಮ್ಸ್​​ ನೌ ನ್ಯೂಸ್​​ನಲ್ಲಿ ವರದಿಯಾಗಿದೆ. ಆದರೆ ಈ ವಿವಾಹ ನಡೆದಿದ್ದು ಎಲ್ಲಿ ಎಂಬುದರ ಬಗ್ಗೆ ಸೂಕ್ತ ಮಾಹಿತಿ ಇಲ್ಲ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:58 pm, Thu, 23 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ