AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಯ ದಿನ ನೆಂಟರಿಷ್ಟರನ್ನು ಬರೀ ನೀರು ಕುಡಿಸಿ ಉಪಚರಿಸಿದ ವಧು

ಹೌದು ಮದುವೆ ಏನಾದರೇನೇ ಹಾಗೇ ಸಾಕಷ್ಟು ಖರ್ಚು ವೆಚ್ಚಗಳಿರುತ್ತದೆ. ಆದರೆ ಇಲ್ಲೊಂದು ಮದುಮೆಯಲ್ಲಿ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಆಲ್ಕೋಹಾಲ್​​​, ಯಾವುದೇ ಪಾನೀಯಗಳ ಬದಲಾಗಿ ಬಂದ ಅತಿಥಿಗಳಿಗೆ ನೀರು ನೀಡಿ ಮದುವೆ ಕಾರ್ಯಕ್ರಮದಲ್ಲಿ ಉಪಚರಿಸಿದ್ದಾರೆ.

Viral News: ಮದುವೆಯ ದಿನ ನೆಂಟರಿಷ್ಟರನ್ನು ಬರೀ ನೀರು ಕುಡಿಸಿ ಉಪಚರಿಸಿದ ವಧು
Follow us
ಅಕ್ಷತಾ ವರ್ಕಾಡಿ
|

Updated on:Mar 23, 2023 | 6:58 PM

ಮದುವೆ ಪ್ರತಿಯೊಬ್ಬರ ಜೀವನದಲ್ಲಿಯೂ ಒಂದು ವಿಶೇಷ ದಿನ. ಈ ವಿಶೇಷ ದಿನದಂದು ವಧು ವರರ ಬಟ್ಟೆಯಿಂದ ಹಿಡಿದು ಊಟ ಉಪಚಾರಗಳೆಲ್ಲಾವೂ ಯಾವುದೇ ಕುಂದು ಕೊರತೆಗಳಿಲ್ಲದೇ ಅದ್ಧೂರಿಯಿಂದ ನಡೆಯಬೇಕು ಎಂಬುದು ಪ್ರತಿಯೊಬ್ಬರ ಕನಸು. ಜೊತೆಗೆ ಇದಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡುವುದುಂಟು. ಆದರೆ ಇಲ್ಲೊಂದು ಖರ್ಚು ಕಡಿಮೆ ಮಾಡಿ ಮದುವೆ ನಡೆಸುವ ಉದ್ದೇಶದಿಂದ ಒಂದು ಒಳ್ಳೆಯ ಪ್ಲಾನ್​ ಮಾಡಿದ್ದಾರೆ.

ಹೌದು ಮದುವೆ ಏನಾದರೇನೇ ಹಾಗೇ ಸಾಕಷ್ಟು ಖರ್ಚು ವೆಚ್ಚಗಳಿರುತ್ತದೆ. ಆದರೆ ಇಲ್ಲೊಂದು ಮದುಮೆಯಲ್ಲಿ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಆಲ್ಕೋಹಾಲ್​​​, ಯಾವುದೇ ಪಾನೀಯಗಳ ಬದಲಾಗಿ ಬಂದ ಅತಿಥಿಗಳಿಗೆ ನೀರು ನೀಡಿ ಮದುವೆ ಕಾರ್ಯಕ್ರಮದಲ್ಲಿ ಉಪಚರಿಸಿದ್ದಾರೆ. ಮದುವೆಗೆ ಬಂದ ಅತಿಥಿಗಳಿಗೆ ಬರೀ ನೀರು ನೀಡಿರುವುದು, ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಸಾಮಾನ್ಯವಾಗಿ ಮದುವೆ ಎಂದಾಕ್ಷಣ ಪಾರ್ಟಿಗಳಿರುತ್ತದೆ. ಈ ಸಂದರ್ಭದಲ್ಲಿ ದುಬಾರಿ ಬೆಲೆಯ ಸಾಕಷ್ಟು ಆಲ್ಕೋಹಾಲ್​​, ಪಾನೀಯಗಳನ್ನು ನೀಡಲಾಗುತ್ತದೆ. ಆದರೆ ಈ ಮದುವೆ ಕಾರ್ಯಕ್ರಮದಲ್ಲಿ ದುಬಾರಿ ಪಾನೀಯಗಳ ಬದಲಾಗಿ ಕಡಿಮೆ ವೆಚ್ಚ ಭರಿಸುವ ನೀರಿನ ಬಾಟಲಿಯನ್ನು ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಂಬದಿಯಿಂದ ಬಂದು ಪಾದಚಾರಿಗಳನ್ನು ಭಯಗೊಳಿಸುವ ಬೈಕ್ ಸವಾರರು! ಇಬ್ಬರು ಅರೆಸ್ಟ್

ನಮ್ಮ ಮದುವೆಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಿದ್ದೇವೆ. ಆದರೆ ಮದುವೆಯಲ್ಲೂ ಹಣವನ್ನು ಉಳಿಸಲು ಹಲವಾರು ಮಾರ್ಗಗಳಿವೆ. ಆದ್ದರಿಂದ ದುಬಾರಿ ಪಾನೀಯಗಳಿಗೆ ಹಣವನ್ನು ಖರ್ಚು ಮಾಡುವ ಬದಲಿಗೆ ನಾವು ನೀರನ್ನು ನೀಡಿ ಹಣ ಉಳಿಸಿದ್ದೇವೆ ಎಂದು ವಧು ಹೇಳಿರುವುದು ಬಾರೀ ಚರ್ಚೆಯಾಗುತ್ತಿದೆ. ನಾನು ಮತ್ತು ನನ್ನ ಸಂಗಾತಿ ಆಲ್ಕೋಹಾಲ್ ಕುಡಿಯುವುದಿಲ್ಲ. ಆದ್ದರಿಂದ ನಮ್ಮ ಮದುವೆಯಲ್ಲಿ ಯಾವುದೇ ರೀತಿಯ ಮದ್ಯ ಇರುವುದಿಲ್ಲ ಎಂದು ಮದುವೆಮನೆಯಲ್ಲಿ ವಧು ಬಹಿರಂಗವಾಗಿ ಹೇಳಿಕೊಂಡಿದ್ದು, ಟೈಮ್ಸ್​​ ನೌ ನ್ಯೂಸ್​​ನಲ್ಲಿ ವರದಿಯಾಗಿದೆ. ಆದರೆ ಈ ವಿವಾಹ ನಡೆದಿದ್ದು ಎಲ್ಲಿ ಎಂಬುದರ ಬಗ್ಗೆ ಸೂಕ್ತ ಮಾಹಿತಿ ಇಲ್ಲ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:58 pm, Thu, 23 March 23

ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ