AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶದಲ್ಲಿ ಕನ್ಯಾದಾನದ ಬದಲಿಗೆ ಪಿಂಡದಾನ !; ಏನಿದು ವಿಚಿತ್ರ ವಿವಾಹ ಅಂತೀರಾ? ಇಲ್ಲಿದೆ ಮಾಹಿತಿ

22 ವರ್ಷದ ಅನಾಮಿಕಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾದ ಹಿನ್ನೆಲೆಯಲ್ಲಿ ಆಕೆಯ ಕುಟುಂಬ ಆಕೆಯ ಹೆಸರಿನಲ್ಲಿ ಪಿಂಡದಾನ ಮಾಡಿದೆ. ಈ ಘಟನೆ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಮಧ್ಯ ಪ್ರದೇಶದಲ್ಲಿ ಕನ್ಯಾದಾನದ ಬದಲಿಗೆ ಪಿಂಡದಾನ !; ಏನಿದು ವಿಚಿತ್ರ ವಿವಾಹ ಅಂತೀರಾ? ಇಲ್ಲಿದೆ ಮಾಹಿತಿ
ಮದುವೆ
ಶ್ರೀದೇವಿ ಕಳಸದ
| Edited By: |

Updated on:Jun 13, 2023 | 3:07 PM

Share

ಅಯಾಝ್ ಎಂಬಾತನನ್ನು ಮದುವೆಯಾದ ತಮ್ಮ ಮಗಳು ಅನಾಮಿಕಾ, ಫಾತೀಮಾ ಎಂದು ತನ್ನ ಹೆಸರನ್ನು ಬದಲಾಯಿಸಿಕೊಂಡು ಮನೆತನದ ಗೌರವಕ್ಕೆ ಧಕ್ಕೆ ಮಾಡಿದ್ದಾಳೆ. ಹಾಗಾಗಿ ತಮ್ಮ ಮಗಳು ತಮ್ಮ ಪಾಲಿಗೆ ತೀರಿಹೋಗಿದ್ದಾಳೆ ಎಂದು ಘೋಷಿಸಲು ಆಕೆಯ ಕುಟುಂಬ ಹಿಂದೂ ಸಂಪ್ರದಾಯದಡಿ ಅಧಿಕೃತ ಕಾರ್ಯಕ್ರಮವನ್ನು ಆಯೋಜಿಸಿತ್ತು‌.

ಕನ್ಯಾದಾನದ ಕನಸು ಹೊಂದಿದ್ದ ನಾವು ಪಿಂಡದಾನ ಮಾಡಲು ಮನೆಯವರಿಗೆ ಒತ್ತಾಯಿಸಿದೆವು ಎಂದು ಆಕೆಯ ಸೋದರ ತಿಳಿಸಿದ್ದಾನೆ. ಜೊತೆಗೆ ತಮ್ಮ ಮಗಳು ಲವ್ ಜಿಹಾದ್ ಗೆ ಬಲಿಯಾಗಿ ನಮ್ಮ ಮಾನಹಾನಿ ಮಾಡಿದ್ದಾಳೆಂದು ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ

ಹುಡುಗಿಯ ತಂದೆ ಛಾಪಿಸಿದ ಶೋಕ ಸಂದೇಶ ವೈರಲ್ ಆಗುತ್ತಿದೆ. ನಮ್ಮ ಮಗಳು ಏ.2 ರಂದು ಕೊನೆಯುಸಿರೆಳೆದಿದ್ದಾಳೆ. ಆಕೆ ಕುಪುತ್ರಿ, ಅವಳಿಗೆ ನರಕದಲ್ಲಿ ಸ್ಥಾನ ಸಿಗಲಿ ಎಂದು ಆಕೆಯ ತಂದೆ ಮತ್ತು ಕುಟುಂಬ ಸದಸ್ಯರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಸ್ವಯಂವಿವಾಹಿತೆ ಕ್ಷಮಾ ಬಿಂದು ಮೊದಲ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ

ಜೂನ್ ನಲ್ಲಿ ಉಜ್ಮಾ ಫಾತಿಮಾ ಅಲಿಯಾಸ್ ಅನಾಮಿಕಾಳ ಮದುವೆಯ ಕರೆಯೋಲೆ ಅಯಾಝ್ ನೊಂದಿಗೆ ವೈರಲ್ ಆಗಿತ್ತು. ಆನಂತರ ಆಕೆಯ ತಾಯಿಯೇ ಇದನ್ನು ಲವ್ ಜಿಹಾದ್ ಎಂದು ಕರೆದು ತಮ್ಮ ಮಗಳನ್ನು ಮರಳಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದರು. ಆದರೆ, ಮಧ್ಯಪ್ರದೇಶ ಪೊಲೀಸರು ತಾಯಿಯ ಆರೋಪವನ್ನು ತಳ್ಳಿಹಾಕಿದ್ದರು. ಅಲ್ಲದೇ ಇದು ಎರಡು ಕುಟುಂಬಗಳ ನಡುವಿನ ಒಮ್ಮತದ ಸಂಬಂಧ ಎಂದು ಹೇಳಿದ್ದರು

ಮತ್ತಷ್ಟು ವೈರಲ್​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Tue, 13 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್