AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ವರ್ಷಗಳ ನಂತರ ಲಂಡನ್​ ವಿಳಾಸಕ್ಕೆ ತಲುಪಿದ ಈ ಪತ್ರ

Letter : ಮೊದಲನೇ ವಿಶ್ವಯುದ್ಧದ ಸಂದರ್ಭದಲ್ಲಿ ಈ ಪತ್ರವನ್ನು ರವಾನಿಸಲಾಗಿದೆ. ಆದರೆ ಇದು ತಲುಪಿದ್ದು ಮಾತ್ರ ನೂರು ವರ್ಷಗಳ ನಂತರ ಎನ್ನುವುದು ಅಚ್ಚರಿ ಮತ್ತು ವಿಸ್ಮಯ. ಆಗ ಕಿಂಗ್​ ಜಾರ್ಜ್​ v ಆಡಳಿತವಿತ್ತು.

100 ವರ್ಷಗಳ ನಂತರ ಲಂಡನ್​ ವಿಳಾಸಕ್ಕೆ ತಲುಪಿದ ಈ ಪತ್ರ
ನೂರು ವರ್ಷಗಳ ನಂತರ ಲಂಡನ್​ನ ವಿಳಾಸಕ್ಕೆ ಬಂದು ತಲುಪಿದ ಪತ್ರ. ಇದು ಬಾತ್​ ಪೋಸ್ಟ್ ಮಾರ್ಕ್​ ಮತ್ತು ಕಿಂಗ್ ಜಾರ್ಜ್​ ಸ್ಟ್ಯಾಂಪ್​ ಹೊಂದಿದೆ
ಶ್ರೀದೇವಿ ಕಳಸದ
| Edited By: |

Updated on:Feb 17, 2023 | 2:54 PM

Share

Viral News : ಇಮೇಲ್​ಗಳ ಈ ಜಮಾನಾದಲ್ಲಿ ಪತ್ರಗಳ ಲೋಕವನ್ನು ಮರೆತೇ ಬಿಟ್ಟಿದ್ದೇವೆ. ಪುಟ್ಟ ಕೆಂಪುಡಬ್ಬಿಯೊಳಗಿನ ಒಂದು ಹಾಳೆಯೊಳಗೆ ಅದೆಷ್ಟು ಅಗಾಧ ವಿಸ್ಮಯ, ಖುಷಿ, ಕುತೂಹಲ ತುಂಬಿಕೊಂಡಿರುತ್ತಿತ್ತು. ನಮ್ಮ ಜೀವಂತಿಕೆಗೆ ಸಾಕ್ಷಿ ಎಂಬಂತೆ ಆ ಪತ್ರಪ್ರಪಂಚ. ಇದೀಗ ಇದೇ ಲೋಕಕ್ಕೆ ಸಂಬಂಧಿಸಿದ ಒಂದು ಅಚ್ಚರಿಯ ಸುದ್ದಿ ನಿಮಗಾಗಿ. ಇಲ್ಲಿರುವ ಈ ಪತ್ರವೊಂದನ್ನು 1916ರಲ್ಲಿ ಇಂಗ್ಲೆಂಡ್​ನ ಬಾತ್​ನಿಂದ ಪೋಸ್ಟ್ ಮಾಡಲಾಗಿದೆ. ಈ ಪತ್ರದ ಮೇಲೆ ಕಿಂಗ್ ಜಾರ್ಜ್ v​ ಸ್ಟ್ಯಾಂಪ್​ ಇದೆ. ಆದರೆ ಈ ಪತ್ರ ತಲುಪಬೇಕಾದ ವಿಳಾಸವನ್ನು ತಲುಪಿದ್ದು 100 ವರ್ಷಗಳ ಬಳಿಕ!

2021ರಲ್ಲಿ ದಕ್ಷಿಣ ಲಂಡನ್​ನಲ್ಲಿರುವ ಗ್ಲೆನ್​ ಮತ್ತು ಆತನ ಗೆಳತಿ ವಾಸವಾಗಿದ್ದ ಫ್ಲ್ಯಾಟ್​ಗೆ ಇದು ತಲುಪಿದೆ. ಈ ಪತ್ರ ಇವರಿಬ್ಬರಲ್ಲಿ ಅಚ್ಚರಿ ತಂದಿದೆ. ಗ್ಲೆನ್​, ಈ ಪತ್ರವನ್ನು ಸ್ಥಳೀಯ ಐತಿಹಾಸಿಕ ಸಂಶೋಧನಾ ಕೇಂದ್ರಕ್ಕೆ ಈ ಪತ್ರವನ್ನು ತಲುಪಿಸಿದ್ದಾರೆ.

ಇದನ್ನೂ ಓದಿ : 67 ವರ್ಷದ ಅಜ್ಜಿ ಸೀರೆಯುಟ್ಟು ರೋಪ್​ ಸೈಕ್ಲಿಂಗ್ ಮಾಡುತ್ತಿರುವ ವಿಡಿಯೋ ವೈರಲ್

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸಂಶೋಧನೆಯ ಮೂಲಕ ತಿಳಿದು ಬಂದಿರುವುದೇನೆಂದರೆ, ಮೊದಲನೇ ವಿಶ್ವಯುದ್ಧದ ಸಂದರ್ಭದಲ್ಲಿ ಕಟೀ ಮಾರ್ಶ್​ ಎನ್ನುವವರು ಬಾತ್​​ನಲ್ಲಿ ರಜಾದಿನಗಳನ್ನು ಕಳೆಯುತ್ತಿದ್ದ ಕ್ರಿಸ್ಟಾಬೆಲ್​ ಮೆನ್ನೆಲ್ ಎನ್ನುವವರಿಗೆ ಬರೆದ ಪತ್ರವು ಇದಾಗಿದೆ. ಇವರಿಬ್ಬರೂ ಸ್ನೇಹಿತೆಯರಾಗಿದ್ದರು.

ಇದನ್ನೂ ಓದಿ : ‘ಎಂಬಿಎ ಚಾಯ್​ವಾಲಾ’ ರೂ. 90 ಲಕ್ಷದ ಮರ್ಸಿಡೀಝ್​ ಕಾರು ಖರೀದಿಸಿದ ವಿಡಿಯೋ ವೈರಲ್

ಮೊದಲನೇ ವಿಶ್ವಯುದ್ಧದ ಸಂದರ್ಭದಲ್ಲಿ ಈ ಪತ್ರವನ್ನು ರವಾನಿಸಲಾಗಿದೆ. ಆ ಸಂದರ್ಭದಲ್ಲಿ ಕಿಂಗ್​ ಜಾರ್ಜ್​ v ಆಡಳಿತವಿತ್ತು. ಆದರೆ ಇದು ತಲುಪಿದ್ದು ಮಾತ್ರ ನೂರು ವರ್ಷಗಳ ನಂತರ ಎನ್ನುವುದು ಅಚ್ಚರಿ ಮತ್ತು ವಿಸ್ಮಯ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 12:54 pm, Fri, 17 February 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!