Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ವರ್ಷಗಳ ನಂತರ ಲಂಡನ್​ ವಿಳಾಸಕ್ಕೆ ತಲುಪಿದ ಈ ಪತ್ರ

Letter : ಮೊದಲನೇ ವಿಶ್ವಯುದ್ಧದ ಸಂದರ್ಭದಲ್ಲಿ ಈ ಪತ್ರವನ್ನು ರವಾನಿಸಲಾಗಿದೆ. ಆದರೆ ಇದು ತಲುಪಿದ್ದು ಮಾತ್ರ ನೂರು ವರ್ಷಗಳ ನಂತರ ಎನ್ನುವುದು ಅಚ್ಚರಿ ಮತ್ತು ವಿಸ್ಮಯ. ಆಗ ಕಿಂಗ್​ ಜಾರ್ಜ್​ v ಆಡಳಿತವಿತ್ತು.

100 ವರ್ಷಗಳ ನಂತರ ಲಂಡನ್​ ವಿಳಾಸಕ್ಕೆ ತಲುಪಿದ ಈ ಪತ್ರ
ನೂರು ವರ್ಷಗಳ ನಂತರ ಲಂಡನ್​ನ ವಿಳಾಸಕ್ಕೆ ಬಂದು ತಲುಪಿದ ಪತ್ರ. ಇದು ಬಾತ್​ ಪೋಸ್ಟ್ ಮಾರ್ಕ್​ ಮತ್ತು ಕಿಂಗ್ ಜಾರ್ಜ್​ ಸ್ಟ್ಯಾಂಪ್​ ಹೊಂದಿದೆ
Follow us
ಶ್ರೀದೇವಿ ಕಳಸದ
| Updated By: Digi Tech Desk

Updated on:Feb 17, 2023 | 2:54 PM

Viral News : ಇಮೇಲ್​ಗಳ ಈ ಜಮಾನಾದಲ್ಲಿ ಪತ್ರಗಳ ಲೋಕವನ್ನು ಮರೆತೇ ಬಿಟ್ಟಿದ್ದೇವೆ. ಪುಟ್ಟ ಕೆಂಪುಡಬ್ಬಿಯೊಳಗಿನ ಒಂದು ಹಾಳೆಯೊಳಗೆ ಅದೆಷ್ಟು ಅಗಾಧ ವಿಸ್ಮಯ, ಖುಷಿ, ಕುತೂಹಲ ತುಂಬಿಕೊಂಡಿರುತ್ತಿತ್ತು. ನಮ್ಮ ಜೀವಂತಿಕೆಗೆ ಸಾಕ್ಷಿ ಎಂಬಂತೆ ಆ ಪತ್ರಪ್ರಪಂಚ. ಇದೀಗ ಇದೇ ಲೋಕಕ್ಕೆ ಸಂಬಂಧಿಸಿದ ಒಂದು ಅಚ್ಚರಿಯ ಸುದ್ದಿ ನಿಮಗಾಗಿ. ಇಲ್ಲಿರುವ ಈ ಪತ್ರವೊಂದನ್ನು 1916ರಲ್ಲಿ ಇಂಗ್ಲೆಂಡ್​ನ ಬಾತ್​ನಿಂದ ಪೋಸ್ಟ್ ಮಾಡಲಾಗಿದೆ. ಈ ಪತ್ರದ ಮೇಲೆ ಕಿಂಗ್ ಜಾರ್ಜ್ v​ ಸ್ಟ್ಯಾಂಪ್​ ಇದೆ. ಆದರೆ ಈ ಪತ್ರ ತಲುಪಬೇಕಾದ ವಿಳಾಸವನ್ನು ತಲುಪಿದ್ದು 100 ವರ್ಷಗಳ ಬಳಿಕ!

2021ರಲ್ಲಿ ದಕ್ಷಿಣ ಲಂಡನ್​ನಲ್ಲಿರುವ ಗ್ಲೆನ್​ ಮತ್ತು ಆತನ ಗೆಳತಿ ವಾಸವಾಗಿದ್ದ ಫ್ಲ್ಯಾಟ್​ಗೆ ಇದು ತಲುಪಿದೆ. ಈ ಪತ್ರ ಇವರಿಬ್ಬರಲ್ಲಿ ಅಚ್ಚರಿ ತಂದಿದೆ. ಗ್ಲೆನ್​, ಈ ಪತ್ರವನ್ನು ಸ್ಥಳೀಯ ಐತಿಹಾಸಿಕ ಸಂಶೋಧನಾ ಕೇಂದ್ರಕ್ಕೆ ಈ ಪತ್ರವನ್ನು ತಲುಪಿಸಿದ್ದಾರೆ.

ಇದನ್ನೂ ಓದಿ : 67 ವರ್ಷದ ಅಜ್ಜಿ ಸೀರೆಯುಟ್ಟು ರೋಪ್​ ಸೈಕ್ಲಿಂಗ್ ಮಾಡುತ್ತಿರುವ ವಿಡಿಯೋ ವೈರಲ್

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸಂಶೋಧನೆಯ ಮೂಲಕ ತಿಳಿದು ಬಂದಿರುವುದೇನೆಂದರೆ, ಮೊದಲನೇ ವಿಶ್ವಯುದ್ಧದ ಸಂದರ್ಭದಲ್ಲಿ ಕಟೀ ಮಾರ್ಶ್​ ಎನ್ನುವವರು ಬಾತ್​​ನಲ್ಲಿ ರಜಾದಿನಗಳನ್ನು ಕಳೆಯುತ್ತಿದ್ದ ಕ್ರಿಸ್ಟಾಬೆಲ್​ ಮೆನ್ನೆಲ್ ಎನ್ನುವವರಿಗೆ ಬರೆದ ಪತ್ರವು ಇದಾಗಿದೆ. ಇವರಿಬ್ಬರೂ ಸ್ನೇಹಿತೆಯರಾಗಿದ್ದರು.

ಇದನ್ನೂ ಓದಿ : ‘ಎಂಬಿಎ ಚಾಯ್​ವಾಲಾ’ ರೂ. 90 ಲಕ್ಷದ ಮರ್ಸಿಡೀಝ್​ ಕಾರು ಖರೀದಿಸಿದ ವಿಡಿಯೋ ವೈರಲ್

ಮೊದಲನೇ ವಿಶ್ವಯುದ್ಧದ ಸಂದರ್ಭದಲ್ಲಿ ಈ ಪತ್ರವನ್ನು ರವಾನಿಸಲಾಗಿದೆ. ಆ ಸಂದರ್ಭದಲ್ಲಿ ಕಿಂಗ್​ ಜಾರ್ಜ್​ v ಆಡಳಿತವಿತ್ತು. ಆದರೆ ಇದು ತಲುಪಿದ್ದು ಮಾತ್ರ ನೂರು ವರ್ಷಗಳ ನಂತರ ಎನ್ನುವುದು ಅಚ್ಚರಿ ಮತ್ತು ವಿಸ್ಮಯ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 12:54 pm, Fri, 17 February 23

ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ