AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರೂ ರೂ. ಪಾವತಿಸಿ ಐಷಾರಾಮಿ ಹೋಟೆಲ್‌ ರೂಮ್​​​ನಲ್ಲಿ ಮಲಗಿದ್ದ ಮಹಿಳೆಗೆ ಒಂದೇ ರಾತ್ರಿ 200ರಕ್ಕೂ ಹೆಚ್ಚು ತಿಗಣೆ ಕಡಿತ

ಆದರೆ ಒಂದೇ ರಾತ್ರಿಯಲ್ಲಿ ಭಯಾನಕ ಅನುಭವವಾಗಿದ್ದು, ದುಡ್ಡಿಗಿಂತಲೂ ಆರೋಗ್ಯ ಮುಖ್ಯ ಎಂದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಅಷ್ಟಕ್ಕೂ ಆ ಮಹಿಳೆಗೆ ಯಾವುದೋ ದೈವ,ಭೂತ ಅಥವಾ ಮನುಷ್ಯರ ಕಾಟವಲ್ಲ, ಇದಕ್ಕಿಂತಲೂ ಮಿಗಿಲಾಗಿ ಒಂದೇ ರಾತ್ರಿಯಲ್ಲಿ 200ರಕ್ಕೂ ಹೆಚ್ಚು ತಿಗಣೆಗಳು ಮಹಿಳೆಯ ರಕ್ತ ಹೀರಿದೆ.

ಸಾವಿರಾರೂ ರೂ. ಪಾವತಿಸಿ ಐಷಾರಾಮಿ ಹೋಟೆಲ್‌ ರೂಮ್​​​ನಲ್ಲಿ ಮಲಗಿದ್ದ ಮಹಿಳೆಗೆ ಒಂದೇ ರಾತ್ರಿ 200ರಕ್ಕೂ ಹೆಚ್ಚು ತಿಗಣೆ ಕಡಿತ
ಅಕ್ಷತಾ ವರ್ಕಾಡಿ
|

Updated on: Jun 09, 2024 | 4:00 PM

Share

ದೂರ ಪ್ರಯಾಣ ಮಾಡುವಾಗ ಉಳಿದುಕೊಳ್ಳಲು ಒಂದು ಒಳ್ಳೆ ರೂಮ್​​​ ಬೇಕು, ಜಾಗ ಬದಲಾದರೂ ಕೂಡ ನಿದ್ದೆ ಚೆನ್ನಾಗಿ ಬರಬೇಕು ಎಂಬುದು ಪ್ರಯಾಣ ಬೆಳೆಸುವ ಮುನ್ನವೇ ಯೋಚನೆ ಮಾಡುವುದು ಸಹಜ. ಅದರಂತೆಯೇ ಎಂದೆರಡು ದಿನಕ್ಕೆ ಬಾಡಿಗೆ ಜಾಸ್ತಿ ಕೇಳಿದರೂ ಕೂಡ ಯೋಚನೆ ಮಾಡದೇ ಹಣ ಪಾವತಿ ಮಾಡಿ ಬಿಡುತ್ತೇವೆ. ಐಷಾರಾಮಿ ಹೋಟೆಲ್​ ಎಂದರೆ ಸೌಲಭ್ಯಗಳಿಗೆ ಏನೂ ಕೊರತೆ ಇರಲ್ಲ ಬಿಡಿ. ಅಂದರಂತೆಯೇ ಇಲ್ಲೊಬ್ಬರು ಮಹಿಳೆ ಹೋಟೆಲ್‌ ರೂಮ್​​ ಒಂದರಲ್ಲಿ ಎರಡು ದಿನಗಳ ಕಾಲ ವಾಸ್ತವ್ಯ ಹೂಡಲು ಬರೋಬ್ಬರಿ 17000 ರೂ. ಪಾವತಿ ಮಾಡಿದ್ದಾರೆ. ಆದರೆ ಒಂದೇ ರಾತ್ರಿಯಲ್ಲಿ ಭಯಾನಕ ಅನುಭವವಾಗಿದ್ದು, ದುಡ್ಡಿಗಿಂತಲೂ ಆರೋಗ್ಯ ಮುಖ್ಯ ಎಂದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಅಷ್ಟಕ್ಕೂ ಆ ಮಹಿಳೆಗೆ ಯಾವುದೋ ದೈವ,ಭೂತ ಅಥವಾ ಮನುಷ್ಯರ ಕಾಟವಲ್ಲ, ಇದಕ್ಕಿಂತಲೂ ಮಿಗಿಲಾಗಿ ಒಂದೇ ರಾತ್ರಿಯಲ್ಲಿ 200ರಕ್ಕೂ ಹೆಚ್ಚು ತಿಗಣೆಗಳು ಮಹಿಳೆಯ ರಕ್ತ ಹೀರಿದೆ.

ಯುನೈಟೆಡ್ ಕಿಂಗ್‌ಡಂನ ಬ್ಲ್ಯಾಕ್‌ಪೂಲ್‌ನಲ್ಲಿರುವ ಕ್ಯಾಲಿಪ್ಸೊ ಎಂಬ ಹೋಟೆಲ್​​​ನಲ್ಲಿ ಶರೋನ್ ಹಸ್ಲಾಮ್(65) ತನ್ನ ಸ್ನೇಹಿತೆ ಮರಿಯನ್ ಪಿಯರ್ಸನ್ ಅವರ ಬರ್ತ್​ ಡೇ ಪಾರ್ಟಿಯ ಸಲುವಾಗಿ ಹೋಟೆಲ್‌ನಲ್ಲಿ ಕೊಠಡಿಯನ್ನು ಎರಡು ದಿನಕ್ಕೆ 17,000 ರೂ ಕೊಟ್ಟು ಕಾಯ್ದಿರಿಸಿದ್ದರು. ಕೋಣೆಗೆ ಪ್ರವೇಶಿಸಿದಾಗ ಹಾಸಿಗೆಯು ಸ್ವಚ್ಛವಾಗಿತ್ತು ಮತ್ತು ಎಲ್ಲಾ ಸೌಲಭ್ಯಗಳು ಚೆನ್ನಾಗಿಯೇ ಇತ್ತು ಎಂದು ಹಸ್ಲಾಮ್ ಹೇಳಿದ್ದಾರೆ.

ಇದನ್ನೂ ಓದಿ: 5 ಕೋಟಿ ರೂ ಬೆಲೆಯ ವಿಶ್ವದ ಅತ್ಯಂತ ದುಬಾರಿ ಹಾಸಿಗೆ; ಇದರ ವಿಶೇಷತೆ ಏನು ಗೊತ್ತಾ?

ಹಸ್ಲಾಮ್ಗೆ ಪಾರ್ಟಿ ಮಾಡಿ ಸಾಕಷ್ಟು ಸುಸ್ತಾಗಿದ್ದರಿಂದ ಒಳ್ಳೆ ನಿದ್ದೆ ಬಂದಿದೆ. ಆದರೆ ಬೆಳಗ್ಗೆ ಏಳುವ ಹೊತ್ತಿಗೆ ಮೈಯೆಲ್ಲಾ ತುರಿಕೆ ಮತ್ತು ದದ್ದು ಕಾಣಿಸಿಕೊಂಡಿದೆ. ಇದಲ್ಲದೇ ಹಾಸಿಗೆಯ ಮೇಲೆ ಅಲ್ಲಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದೆ. ಆದರೆ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಹಸ್ಲಾಮ್ ಹತ್ತು ನಿಮಿಷ ತೆಗೆದುಕೊಂಡಿದ್ದಾರೆ. ತೆವಳುತ್ತಿರುವ ಜೀವಂತ ತಿಗಣೆಯನ್ನು ಹಾಸಿಗೆ ಮೇಲೆ ನೋಡಿದ್ದಾರೆ. ಬಳಿಕ ಹೋಟೆಲ್​​ ಅವರ ನಿರ್ಲಕ್ಷ್ಯದ ವಿರುದ್ದ ದೂರು ನೀಡಿದ್ದು, ಸಂಪೂರ್ಣ ಹಣವನ್ನು ಹೋಟೆಲ್​​​​​ ಮರುಪಾವತಿ ಮಾಡುವುದರ ಜೊತೆಗೆ 8,787 ರೂ ಹಣವನ್ನು ಪರಿಹಾರದ ರೂಪದಲ್ಲಿ ನೀಡಿದೆ ಎಂದು ವೇಲ್ಸನ್‌ಲೈನ್ ವರದಿಯಿಂದ ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?