ಸಾವಿರಾರೂ ರೂ. ಪಾವತಿಸಿ ಐಷಾರಾಮಿ ಹೋಟೆಲ್‌ ರೂಮ್​​​ನಲ್ಲಿ ಮಲಗಿದ್ದ ಮಹಿಳೆಗೆ ಒಂದೇ ರಾತ್ರಿ 200ರಕ್ಕೂ ಹೆಚ್ಚು ತಿಗಣೆ ಕಡಿತ

ಆದರೆ ಒಂದೇ ರಾತ್ರಿಯಲ್ಲಿ ಭಯಾನಕ ಅನುಭವವಾಗಿದ್ದು, ದುಡ್ಡಿಗಿಂತಲೂ ಆರೋಗ್ಯ ಮುಖ್ಯ ಎಂದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಅಷ್ಟಕ್ಕೂ ಆ ಮಹಿಳೆಗೆ ಯಾವುದೋ ದೈವ,ಭೂತ ಅಥವಾ ಮನುಷ್ಯರ ಕಾಟವಲ್ಲ, ಇದಕ್ಕಿಂತಲೂ ಮಿಗಿಲಾಗಿ ಒಂದೇ ರಾತ್ರಿಯಲ್ಲಿ 200ರಕ್ಕೂ ಹೆಚ್ಚು ತಿಗಣೆಗಳು ಮಹಿಳೆಯ ರಕ್ತ ಹೀರಿದೆ.

ಸಾವಿರಾರೂ ರೂ. ಪಾವತಿಸಿ ಐಷಾರಾಮಿ ಹೋಟೆಲ್‌ ರೂಮ್​​​ನಲ್ಲಿ ಮಲಗಿದ್ದ ಮಹಿಳೆಗೆ ಒಂದೇ ರಾತ್ರಿ 200ರಕ್ಕೂ ಹೆಚ್ಚು ತಿಗಣೆ ಕಡಿತ
Follow us
|

Updated on: Jun 09, 2024 | 4:00 PM

ದೂರ ಪ್ರಯಾಣ ಮಾಡುವಾಗ ಉಳಿದುಕೊಳ್ಳಲು ಒಂದು ಒಳ್ಳೆ ರೂಮ್​​​ ಬೇಕು, ಜಾಗ ಬದಲಾದರೂ ಕೂಡ ನಿದ್ದೆ ಚೆನ್ನಾಗಿ ಬರಬೇಕು ಎಂಬುದು ಪ್ರಯಾಣ ಬೆಳೆಸುವ ಮುನ್ನವೇ ಯೋಚನೆ ಮಾಡುವುದು ಸಹಜ. ಅದರಂತೆಯೇ ಎಂದೆರಡು ದಿನಕ್ಕೆ ಬಾಡಿಗೆ ಜಾಸ್ತಿ ಕೇಳಿದರೂ ಕೂಡ ಯೋಚನೆ ಮಾಡದೇ ಹಣ ಪಾವತಿ ಮಾಡಿ ಬಿಡುತ್ತೇವೆ. ಐಷಾರಾಮಿ ಹೋಟೆಲ್​ ಎಂದರೆ ಸೌಲಭ್ಯಗಳಿಗೆ ಏನೂ ಕೊರತೆ ಇರಲ್ಲ ಬಿಡಿ. ಅಂದರಂತೆಯೇ ಇಲ್ಲೊಬ್ಬರು ಮಹಿಳೆ ಹೋಟೆಲ್‌ ರೂಮ್​​ ಒಂದರಲ್ಲಿ ಎರಡು ದಿನಗಳ ಕಾಲ ವಾಸ್ತವ್ಯ ಹೂಡಲು ಬರೋಬ್ಬರಿ 17000 ರೂ. ಪಾವತಿ ಮಾಡಿದ್ದಾರೆ. ಆದರೆ ಒಂದೇ ರಾತ್ರಿಯಲ್ಲಿ ಭಯಾನಕ ಅನುಭವವಾಗಿದ್ದು, ದುಡ್ಡಿಗಿಂತಲೂ ಆರೋಗ್ಯ ಮುಖ್ಯ ಎಂದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಅಷ್ಟಕ್ಕೂ ಆ ಮಹಿಳೆಗೆ ಯಾವುದೋ ದೈವ,ಭೂತ ಅಥವಾ ಮನುಷ್ಯರ ಕಾಟವಲ್ಲ, ಇದಕ್ಕಿಂತಲೂ ಮಿಗಿಲಾಗಿ ಒಂದೇ ರಾತ್ರಿಯಲ್ಲಿ 200ರಕ್ಕೂ ಹೆಚ್ಚು ತಿಗಣೆಗಳು ಮಹಿಳೆಯ ರಕ್ತ ಹೀರಿದೆ.

ಯುನೈಟೆಡ್ ಕಿಂಗ್‌ಡಂನ ಬ್ಲ್ಯಾಕ್‌ಪೂಲ್‌ನಲ್ಲಿರುವ ಕ್ಯಾಲಿಪ್ಸೊ ಎಂಬ ಹೋಟೆಲ್​​​ನಲ್ಲಿ ಶರೋನ್ ಹಸ್ಲಾಮ್(65) ತನ್ನ ಸ್ನೇಹಿತೆ ಮರಿಯನ್ ಪಿಯರ್ಸನ್ ಅವರ ಬರ್ತ್​ ಡೇ ಪಾರ್ಟಿಯ ಸಲುವಾಗಿ ಹೋಟೆಲ್‌ನಲ್ಲಿ ಕೊಠಡಿಯನ್ನು ಎರಡು ದಿನಕ್ಕೆ 17,000 ರೂ ಕೊಟ್ಟು ಕಾಯ್ದಿರಿಸಿದ್ದರು. ಕೋಣೆಗೆ ಪ್ರವೇಶಿಸಿದಾಗ ಹಾಸಿಗೆಯು ಸ್ವಚ್ಛವಾಗಿತ್ತು ಮತ್ತು ಎಲ್ಲಾ ಸೌಲಭ್ಯಗಳು ಚೆನ್ನಾಗಿಯೇ ಇತ್ತು ಎಂದು ಹಸ್ಲಾಮ್ ಹೇಳಿದ್ದಾರೆ.

ಇದನ್ನೂ ಓದಿ: 5 ಕೋಟಿ ರೂ ಬೆಲೆಯ ವಿಶ್ವದ ಅತ್ಯಂತ ದುಬಾರಿ ಹಾಸಿಗೆ; ಇದರ ವಿಶೇಷತೆ ಏನು ಗೊತ್ತಾ?

ಹಸ್ಲಾಮ್ಗೆ ಪಾರ್ಟಿ ಮಾಡಿ ಸಾಕಷ್ಟು ಸುಸ್ತಾಗಿದ್ದರಿಂದ ಒಳ್ಳೆ ನಿದ್ದೆ ಬಂದಿದೆ. ಆದರೆ ಬೆಳಗ್ಗೆ ಏಳುವ ಹೊತ್ತಿಗೆ ಮೈಯೆಲ್ಲಾ ತುರಿಕೆ ಮತ್ತು ದದ್ದು ಕಾಣಿಸಿಕೊಂಡಿದೆ. ಇದಲ್ಲದೇ ಹಾಸಿಗೆಯ ಮೇಲೆ ಅಲ್ಲಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದೆ. ಆದರೆ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಹಸ್ಲಾಮ್ ಹತ್ತು ನಿಮಿಷ ತೆಗೆದುಕೊಂಡಿದ್ದಾರೆ. ತೆವಳುತ್ತಿರುವ ಜೀವಂತ ತಿಗಣೆಯನ್ನು ಹಾಸಿಗೆ ಮೇಲೆ ನೋಡಿದ್ದಾರೆ. ಬಳಿಕ ಹೋಟೆಲ್​​ ಅವರ ನಿರ್ಲಕ್ಷ್ಯದ ವಿರುದ್ದ ದೂರು ನೀಡಿದ್ದು, ಸಂಪೂರ್ಣ ಹಣವನ್ನು ಹೋಟೆಲ್​​​​​ ಮರುಪಾವತಿ ಮಾಡುವುದರ ಜೊತೆಗೆ 8,787 ರೂ ಹಣವನ್ನು ಪರಿಹಾರದ ರೂಪದಲ್ಲಿ ನೀಡಿದೆ ಎಂದು ವೇಲ್ಸನ್‌ಲೈನ್ ವರದಿಯಿಂದ ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ