AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ವಾರಪೂರ್ತಿ ಕಣ್ಣೀರು ಸುರಿಸಿ ಗಿನ್ನಿಸ್​​ ದಾಖಲೆ ಮಾಡಲು ಹೋಗಿ ಕುರುಡನಾದ ಯುವಕ

ಗಿನ್ನಿಸ್​​ ದಾಖಲೆ ಮಾಡಬೇಕು ಎಂಬ ಹುಚ್ಚುತನದಿಂದ ಯುವಕನೊಬ್ಬ ಕುರುಡನಾಗಿರುವ ಘಟನೆ ನೈಜೀರಿಯಾದಲ್ಲಿ ನಡೆದಿದೆ.

Viral News: ವಾರಪೂರ್ತಿ ಕಣ್ಣೀರು ಸುರಿಸಿ ಗಿನ್ನಿಸ್​​ ದಾಖಲೆ ಮಾಡಲು ಹೋಗಿ ಕುರುಡನಾದ ಯುವಕ
ವೈರಲ್​​ ನ್ಯೂಸ್​​
ಅಕ್ಷಯ್​ ಪಲ್ಲಮಜಲು​​
|

Updated on:Jul 20, 2023 | 1:42 PM

Share

ಈ ಜಗತ್ತಿನಲ್ಲಿ ಜನಪ್ರಿಯತೆಯನ್ನು ಪಡೆಯಬೇಕು ಎಂದು ಈ ಜನ ಏನೆಲ್ಲ ಮಾಡುತ್ತಾರೆ ಎಂಬುದಕ್ಕೆ ಈ ವೈರಲ್​​ ವರದಿ ಸಾಕ್ಷಿ, ಗಿನ್ನಿಸ್​​ ದಾಖಲೆ ಮಾಡಬೇಕು ಎಂಬ ಹುಚ್ಚುತನದಿಂದ ಯುವಕನೊಬ್ಬ ಕುರುಡನಾಗಿರುವ ಘಟನೆ ನೈಜೀರಿಯಾದಲ್ಲಿ ನಡೆದಿದೆ. ನೈಜೀರಿಯಾದ ತೆಂಬು ಎಬೆರೆ ಎಂಬ ಯುವಕ ಏಳು ದಿನಗಳ ಕಾಲ ಕಣ್ಣೀರು ಹಾಕಲು ಪ್ರಯತ್ನ ಮಾಡಿದ್ದಾನೆ, ಇದರಿಂದ ಆತ ಈಗ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ.

ಬಿಬಿಸಿ ವರದಿ ಪ್ರಕಾರ ಈ ಯುವಕ ವಿಶ್ವ ದಾಖಲೆ ಮಾಡಲು ಇಡೀ ವಾರ ತಡೆರಹಿತವಾಗಿ ಕಣ್ಣೀರು ಸುರಿಸಲು ಪ್ರಯತ್ನಿಸಿದ್ದಾನೆ, ಇದರಿಂದ ಕಣ್ಣಿಗೆ ಒತ್ತಡ ಉಂಟಾಗಿ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿದ್ದಾನೆ. ದೃಷ್ಟಿ ಕಳೆದುಕೊಳ್ಳುವ ಮುನ್ನ ಆತನಲ್ಲಿ ಈ ಲಕ್ಷಣಗಳು ಕಂಡು ಬಂದಿದೆ. ಮೊದಲು ತಲೆನೋವು, ಊದಿಕೊಂಡ ಮುಖ ಮತ್ತು ಉಬ್ಬಿದ ಕಣ್ಣು, ತುಂಬಾ ನೋವು ಕೂಡ ಕಾಣಿಸಿಕೊಂಡಿದೆ.

ನಾನು ಮತ್ತೆ ಮೊದಲಿನಂತೆ ಆಗಬೇಕು, ತುಂಬಾ ಒತ್ತಡ ಹಾಕಿಕೊಂಡು ಕಣ್ಣೀರು ಹಾಕಬಾರದಿತ್ತು. ಆದರೆ ಗಿನ್ನಿಸ್​​ ದಾಖಲೆಯನ್ನು ಸಾಧಿಸಿಯೇ ಸಾಧಿಸುವೇ ಎಂದು ಹೇಳಿದ್ದಾನೆ, ಈ ಬಗ್ಗೆ GWR (guinness world record) ಗೆ ಅರ್ಜಿ ಸಲ್ಲಿಸಿದ್ದು, ಇದನ್ನೂ ಸಂಸ್ಥೆ ಪರಿಗಣಿಸಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಶಸ್ತ್ರಚಿಕಿತ್ಸೆ ಮೂಲಕ ಗುಪ್ತಾಂಗದಿಂದ ಬುಲೆಟ್ ತೆಗೆದು ಹಾಕಿದ ಮಹಿಳೆ!

ನೈಜೀರಿಯದಲ್ಲಿ ಇಂತಹದೇ ಮತ್ತೊಂದು ಘಟನೆ ನಡೆದಿದೆ. ಹಿಲ್ಡಾ ಬಾಸಿ ಎಂಬ ಬಾಣಸಿಗ 100 ಗಂಟೆಗಳ ಕಾಲ ನಿರಂತರವಾಗಿ ಅಡುಗೆ ಮಾಡಲು ಪ್ರಯತ್ನಿಸಿದ್ದಾನೆ. ಇದಕ್ಕೆ ಆ ದೇಶದ ಉಪಧ್ಯಾಕ್ಷರು, ಸೆಲೆಬ್ರಿಟಿಗಳು ಹುರಿದುಂಬಿಸಿದ್ದರು, ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಕೂಡ ಆಗಿತ್ತು. ಇಂತಹ ಅನೇಕ ಸಾಹಸಗಳು ನೈಜೀರಿಯದಲ್ಲಿ ನಡೆದಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:39 pm, Thu, 20 July 23

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ