AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹೊಟ್ಟೆನೋವಿನಿಂದ ನರಳುತ್ತಿದ್ದ ಮಹಿಳೆಗೆ ವಿಮಾನದಲ್ಲೇ ಹೆರಿಗೆ ಮಾಡಿಸಿದ ಸಿಬ್ಬಂದಿ

ಫೇಸ್‌ಬುಕ್‌ನಲ್ಲಿ ಫ್ರಾಂಟಿಯರ್ ಏರ್‌ಲೈನ್ಸ್ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಒರ್ಲ್ಯಾಂಡೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದ ವಿಮಾನದಲ್ಲಿ ಪ್ರಯಾಣಿಕಳಿಗೆ ಅನಿರೀಕ್ಷಿತವಾಗಿ ಹೆರಿಗೆ ನೋವು ಕಾಣಿಸಿಕೊಂಡಿತ್ತು.

Viral News: ಹೊಟ್ಟೆನೋವಿನಿಂದ ನರಳುತ್ತಿದ್ದ ಮಹಿಳೆಗೆ ವಿಮಾನದಲ್ಲೇ ಹೆರಿಗೆ ಮಾಡಿಸಿದ ಸಿಬ್ಬಂದಿ
ಫ್ಲೋರಿಡಾದ ವಿಮಾನದಲ್ಲಿ ಜನಿಸಿದ ಮಗು
TV9 Web
| Edited By: |

Updated on: May 19, 2022 | 5:33 PM

Share

ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯರೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಗ ಆ ವಿಮಾನದ ಸಿಬ್ಬಂದಿಯೇ ಸೇರಿ ಆಕೆಗೆ ಹೆರಿಗೆ ಮಾಡಿಸಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಇಲ್ಲಿನ ಫ್ರಾಂಟಿಯರ್ ಏರ್‌ಲೈನ್ಸ್ ಫ್ಲೈಟ್ ಅಟೆಂಡೆಂಟ್ ಕೊಲೊರಾಡೋದಿಂದ ಫ್ಲೋರಿಡಾಕ್ಕೆ ಸಾಗುತ್ತಿದ್ದ ವಿಮಾನದಲ್ಲಿದ್ದ ಮಗುವನ್ನು ಹೆರಿಗೆ ಮಾಡಿಸಲು ಸಹಾಯ ಮಾಡಿದ ಕಾರಣ ಆ ಸಿಬ್ಬಂದಿಯನ್ನು “ಹೀರೋ” ಎಂದು ಎಲ್ಲರೂ ಕೊಂಡಾಡುತ್ತಿದ್ದಾರೆ.

ಫೇಸ್‌ಬುಕ್‌ನಲ್ಲಿ ಫ್ರಾಂಟಿಯರ್ ಏರ್‌ಲೈನ್ಸ್ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಒರ್ಲ್ಯಾಂಡೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದ ವಿಮಾನದಲ್ಲಿ ಪ್ರಯಾಣಿಕಳಿಗೆ ಅನಿರೀಕ್ಷಿತವಾಗಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಸಮಯದಲ್ಲಿ ಫ್ಲೈಟ್ ಅಟೆಂಡೆಂಟ್ ಡಯಾನಾ ಗಿರಾಲ್ಡೊ ಗರ್ಭಿಣಿ ಮಹಿಳೆಗೆ ಸಹಾಯ ಮಾಡಿ, ಸುರಕ್ಷಿತವಾಗಿ ಮಗುವನ್ನು ಹೊರತೆಗೆದರು. ಬಳಿಕ ವಿಮಾನವನ್ನು ಲ್ಯಾಂಡ್​ ಮಾಡಿದ ನಂತರ ಆ ಮಹಿಳೆ ಮತ್ತು ನವಜಾತ ಶಿಶುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಇದನ್ನೂ ಓದಿ: Viral News: ರಸ್ತೆ ಮಧ್ಯೆ ಅಡ್ಡ ನಿಂತ ಆನೆ; ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ!

ಸಾಮಾಜಿಕ ಮಾಧ್ಯಮ ಬಳಕೆದಾರರು ಹೊಸ ತಾಯಿಯನ್ನು ಅಭಿನಂದಿಸಿದ್ದಾರೆ. ಹಾಗೇ, ಈ ಉತ್ತಮ ಕೆಲಸ ಮಾಡಿದ ಫ್ರಾಂಟಿಯರ್ ಏರ್‌ಲೈನ್ಸ್ ಸಿಬ್ಬಂದಿಯನ್ನು ಶ್ಲಾಘಿಸಿದ್ದಾರೆ. “ಇದು ಬಹಳ ಉತ್ತಮ ಕೆಲಸವಾಗಿದೆ” ಎಂದು ಕ್ಯಾಪ್ಟನ್ ನೈ ಹೇಳಿದ್ದಾರೆ. ವಿಮಾನದಲ್ಲಿ ನವಜಾತ ಶಿಶುವನ್ನು ಯಶಸ್ವಿಯಾಗಿ ಹೆರಿಗೆ ಮಾಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡುವುದನ್ನು ನೋಡಲು ಸಂತೋಷವಾಗಿದೆ ಎಂದು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ