AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸಾವನ್ನಪ್ಪಿದ ಮುದ್ದಿನ ನಾಯಿಯ ಕಂಚಿನ ಪ್ರತಿಮೆ ನಿರ್ಮಿಸಿದ ಮಾಲೀಕ

ತಮ್ಮ ಮುದ್ದಿನ ನಾಯಿಯ 5ನೇ ಪುಣ್ಯತಿಥಿಯಂದು ಈ ಕಂಚಿನ ಪುತ್ಥಳಿಯನ್ನು ಮಾಲೀಕರು ಉದ್ಘಾಟನೆ ಮಾಡಿದ್ದಾರೆ.

Viral News: ಸಾವನ್ನಪ್ಪಿದ ಮುದ್ದಿನ ನಾಯಿಯ ಕಂಚಿನ ಪ್ರತಿಮೆ ನಿರ್ಮಿಸಿದ ಮಾಲೀಕ
ನಾಯಿಯ ಕಂಚಿನ ಪುತ್ಥಳಿ
TV9 Web
| Edited By: |

Updated on:Jul 23, 2021 | 8:04 PM

Share

ನಾಯಿ, ಬೆಕ್ಕುಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಯಿಂದ ಸಾಕುವವರು ಸಾಕಷ್ಟು ಜನರಿದ್ದಾರೆ. ನಿಯತ್ತಿಗೆ ಮತ್ತೊಂದು ಹೆಸರಾಗಿರುವ ನಾಯಿಗೂ ಹೆಸರಿಟ್ಟು, ಬೇಕಾದ ಬಟ್ಟೆಗಳನ್ನೆಲ್ಲ ತೊಡಿಸಿ, ಸಂಭ್ರಮಿಸುವ ಶ್ವಾನಪ್ರಿಯರ ಸಂಖ್ಯೆಯೇನೂ ಕಡಿಮೆಯಿಲ್ಲ. ಅದೇರೀತಿ ಆಂಧ್ರಪ್ರದೇಶದ ಕುಟುಂಬವೊಂದು ಬಹಳ ಪ್ರೀತಿಯಿಂದ ನಾಯಿಮರಿಯನ್ನು ಸಾಕಿಕೊಂಡಿತ್ತು. ಆ ನಾಯಿಮರಿ ದೊಡ್ಡದಾಗಿ ಮನೆಯವರಲ್ಲಿ ಒಂದಾಗಿ ಬದುಕುತ್ತಿತ್ತು. ಆದರೆ, 5 ವರ್ಷಗಳ ಹಿಂದೆ ಆ ನಾಯಿ ಸಾವನ್ನಪ್ಪಿತ್ತು. ಆ ದುಃಖದಿಂದ ಹೊರಬರಲು ಇನ್ನೂ ಪ್ರಯತ್ನಿಸುತ್ತಲೇ ಇರುವ ಆ ಕುಟುಂಬಸ್ಥರು ತಮ್ಮ ಮುದ್ದಿನ ನಾಯಿಯ ನೆನಪಿಗಾಗಿ ಮನೆಯ ಪಕ್ಕದಲ್ಲಿ ಆ ನಾಯಿಯ ಕಂಚಿನ ಪ್ರತಿಮೆಯನ್ನು ನಿರ್ಮಿಸಿದ್ದಾರೆ.

ಮುದ್ದಿನ ನಾಯಿಯ 5ನೇ ಪುಣ್ಯತಿಥಿಯಂದು ಈ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಾಗಿದೆ. ಜ್ಞಾನಪ್ರಕಾಶ್ ರಾವ್ ಎಂಬ ವ್ಯಕ್ತಿ ತಮ್ಮ ಮುದ್ದಿನ ನಾಯಿಯ ನೆನಪಿನಲ್ಲಿ ಕಂಚಿನ ಪುತ್ಥಳಿಯನ್ನು ನಿರ್ಮಿಸಿದ್ದಾರೆ. ಆ ನಾಯಿ ಸಾವನ್ನಪ್ಪಿದ ದಿನ ಎಲ್ಲ ರೀತಿಯ ಶಾಸ್ತ್ರಗಳನ್ನೂ ನೆರವೇರಿಸಿದ್ದಾರೆ. 9 ವರ್ಷ ಸಾಕಿದ್ದ ನಾಯಿಯ ನೆನಪನ್ನು ಪುತ್ಥಳಿಯ ಮೂಲಕ ಗಟ್ಟಿಯಾಗಿಸಿಕೊಂಡಿದ್ದಾರೆ ಆ ನಾಯಿಯ ಒಡೆಯ.

ಹೊಸದಾಗಿ ನಿರ್ಮಿಸಲಾದ ನಾಯಿಯ ಪ್ರತಿಮೆಗೆ ಪೂಜೆಯನ್ನೂ ಸಲ್ಲಿಸಿದ್ದಾರೆ. ಆ ಪ್ರತಿಮೆಗೆ ಕಲಶಾಭಿಷೇಕ ಮಾಡಿ ಕಾರ್ಯಕ್ರಮಕ್ಕೆ ಬಂದವರಿಗೆ ಸಿಹಿಯೂಟ ಹಾಕಿಸಿದ್ದಾರೆ.

dog statue

ನಾಯಿಯ ಕಂಚಿನ ಪುತ್ಥಳಿ

ಇದನ್ನೂ ಓದಿ: Viral News | ಬರೋಬ್ಬರಿ 1 ಕೋಟಿಗೆ ಹರಾಜಾಯ್ತು ವಿಸ್ಕಿ ಬಾಟಲ್; ಇದರ ವಿಶೇಷತೆ ಕೇಳಿದರೆ ಕಿಕ್ ಏರುತ್ತೆ!

Shocking News: ಮನುಷ್ಯರ ಮೂತ್ರದಿಂದ ತಯಾರಾದ ಬಿಯರ್​ಗೆ ಭಾರೀ ಬೇಡಿಕೆ; ಏನಿದು ವಿಚಿತ್ರ ಸುದ್ದಿ?

(Andhra Pradesh Man Erects Bronze Statue of His Late Pet Dog on 5th Death Anniversary)

Published On - 8:03 pm, Fri, 23 July 21

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು