ಗಗನಯಾನಿ ವಧು; ಕಲಾವಿದರ ಕಲ್ಪನೆಗೆ ಒತ್ತಾಸೆ ನೀಡಿದ ಎಐ ತಂತ್ರಜ್ಞಾನ

Artificial Intelligence : ಅದ್ಭುತವಾದ ಪರಿಕಲ್ಪನೆ ಇದು ಎಂದು ಕಲಾವಿದ ಜಯೇಶ್​ ಸಚದೇವ ಅವರನ್ನು ಶ್ಲಾಘಿಸುತ್ತಿದ್ದಾರೆ ನೆಟ್ಟಿಗರು. ಸ್ಟಾರ್ ಪ್ಲಸ್ ಬಹೂ ಇನ್ ನಾಸಾ? ಎಂದು ತಮಾಷೆ ಮಾಡಿದ್ದಾರೆ ಕೆಲವರು.

ಗಗನಯಾನಿ ವಧು; ಕಲಾವಿದರ ಕಲ್ಪನೆಗೆ ಒತ್ತಾಸೆ ನೀಡಿದ ಎಐ ತಂತ್ರಜ್ಞಾನ
ಜಯೇಶ್​ ಸಚದೇವರ ಗಗನಯಾತ್ರಿ ವಧು
Follow us
| Updated By: ಶ್ರೀದೇವಿ ಕಳಸದ

Updated on:Jan 21, 2023 | 1:03 PM

Viral News : ಕಲಾವಿದರ ಕಲ್ಪನೆಗೆ ಎಣೆಯುಂಟೆ? ತಮ್ಮ ಕಲ್ಪನಾಲೋಕದೊಂದಿಗೆ ವಾಸ್ತವವನ್ನು ಸಂಧಿಸುತ್ತ ಜನರನ್ನು ಮಂತ್ರಮುಗ್ಧರನ್ನಾಗಿಸುವ ಪ್ರತಿಭೆಯೇ ಅವರ ಶಕ್ತಿ. ಇವರ ಕಲ್ಪನೆಗೆ ಒತ್ತಾಸೆ ನೀಡುತ್ತಿರುವ ಕೃತಕ ಬುದ್ಧಿಮತ್ತೆಯಂತೂ (Artificial Intelligence) ಮಾಂತ್ರಿಕಲೋಕವನ್ನೇ ಸೃಷ್ಟಿಸುತ್ತಿದೆ. ಇದೀಗ ವೈರಲ್ ಆಗಿರುತವ ಈ ಫೋಟೋಗಳನ್ನು ನೋಡಿ. ಗಗನಯಾತ್ರಿಗಳನ್ನು ಕಲಾವಿದರೊಬ್ಬರು AI ತಂತ್ರಜ್ಞಾನದ ಮೂಲಕ ವಧುವಿನಂತೆ ಸೃಷ್ಟಿಸಿದ್ಧಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Quirk Box by Jayesh Sachdev (@thequirkbox)

ಜಯೇಶ್ ಸಚದೇವ್ ಎಂಬ ವಿಶುವಲ್ ಆರ್ಟಿಸ್ಟ್​ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಇವರ ಖಾತೆಯಲ್ಲಿ ನಿಮ್ಮನ್ನು ಆಲೋಚನೆಗೆ ಹಚ್ಚುವ ಸಾಕಷ್ಟು ಚಿತ್ರಗಳನ್ನು ನೋಡಬಹುದಾಗಿದೆ. ಪ್ರಸ್ತುತ ಪೋಸ್ಟ್​ ಮೂರು ದಿನಗಳ ಹಿಂದೆ ಪೋಸ್ಟ್ ಮಾಡಲಾಗಿದೆ. ಸುಮಾರು 8,000 ಜನರು ಇದನ್ನು ಇಷ್ಟಪಟ್ಟಿದ್ದಾರೆ. ಅನೇಕರು ತಮ್ಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : 1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್

ಇದು ತುಂಬಾ ಚೆನ್ನಾಗಿದೆ. ನಿಮ್ಮ ಕಲ್ಪನೆ ಮತ್ತು ಈ ಕಲೆಯಲ್ಲಿ ವ್ಯಕ್ತಗೊಂಡ ತಾಂತ್ರಿಕ ಪರಿಪೂರ್ಣತೆ ಅದ್ಭುತ ಎಂದಿದ್ದಾರೆ ಒಬ್ಬರು. ಸ್ಟಾರ್​ ಪ್ಲಸ್​ ಬಹೂ ಇನ್​ ನಾಸಾ! ಎಂದು ತಮಾಷೆ ಮಾಡಿದ್ದಾರೆ. ಈ ಕಲ್ಪನೆ ಬಹಳ ಆಸಕ್ತಿರಕವಾಗಿದೆ. ಭವಿಷ್ಯದಲ್ಲಿ ಗಗನಯಾತ್ರಿ ಆಗಲು ಬಯಸುತ್ತಿರುವ ನನಗೆ ಇದು ಸ್ಫೂರ್ತಿಯುತವಾಗಿದೆ ಎಂದಿದ್ಧಾರೆ ಮತ್ತೊಬ್ಬರು. ಈ ಪರಿಕಲ್ಪನೆ ಬಹಳ ವಿಶೇಷವಾಗಿದೆ ಎಂದಿದ್ಧಾರೆ ಮಗದೊಬ್ಬರು.

ಹೇಗಿದೆ ಕಲಾವಿದರ ಕಲ್ಪನೆ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:01 pm, Sat, 21 January 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ