Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಜೇಬಿನಲ್ಲಿ ಲಕ್ಷ ಲಕ್ಷ ದುಡ್ಡಿಟ್ಟುಕೊಂಡಿದ್ದರೂ, ಹಸಿವಿನಿಂದ ಸಾವನ್ನಪಿದ್ದ ಭಿಕ್ಷುಕ

ಈತ ಯಾರೆಂದು ಜಗತ್ತಿಗೆ ತಿಳಿದಿಲ್ಲ, ಆದರೆ ಈತನ ಸಾವು ಪೊಲೀಸರಿಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. 50 ವರ್ಷದ ಭಿಕ್ಷುಕನ ಬಳಿ ಲಕ್ಷಗಟ್ಟಲೆ ಹಣ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇಷ್ಟು ಹಣವಿದ್ದರೂ ಹಸಿವಿನಿಂದ ಸಾಯಲು ಕಾರಣವೇನು? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

Viral: ಜೇಬಿನಲ್ಲಿ ಲಕ್ಷ ಲಕ್ಷ ದುಡ್ಡಿಟ್ಟುಕೊಂಡಿದ್ದರೂ, ಹಸಿವಿನಿಂದ ಸಾವನ್ನಪಿದ್ದ ಭಿಕ್ಷುಕ
Viral NewsImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Dec 06, 2023 | 5:14 PM

ಸೂರತ್, ಡಿಸೆಂಬರ್ 5: ಕಳೆದ ಎರಡು ದಿನಗಳಿಂದ ಗಾಂಧಿ ಗ್ರಂಥಾಲಯದ ಬಳಿ ಭಿಕ್ಷುಕನೊಬ್ಬ ರಸ್ತೆಬದಿ ಬಿದ್ದಿರುವುದನ್ನು ಅಂಗಡಿ ಮಾಲೀಕರು ಗಮನಿಸಿ, 108ಕ್ಕೆ ಕರೆ ಮಾಡಿ ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಿಕ್ಷುಕ ಸಾವನ್ನಪ್ಪಿದ್ದಾನೆ. ಕಳೆದ ಎರಡು ದಿನಗಳಿಂದ ಏನನ್ನೂ ತಿನ್ನದೇ ಹಸಿವಿನಿಂದ ಸಾವನ್ನಪ್ಪಿರುವುದಾಗಿ ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಈತನ ಸಾವು ಪೊಲೀಸರಿಗೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತನಿಖೆಯ ವೇಳೆ ಮೃತ ಭಿಕ್ಷುಕನ ಜೇಬಿನಲ್ಲಿ ಲಕ್ಷಗಟ್ಟಲೆ ಹಣ ಪತ್ತೆಯಾಗಿದ್ದು, ಇಷ್ಟು ಹಣವಿದ್ದರೂ ಹಸಿವಿನಿಂದ ಸಾಯಲು ಕಾರಣವೇನು? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ತುರ್ತು ವೈದ್ಯಕೀಯ ವಿಭಾಗದ ಡಾ.ಭಾವೇಶ್ ಪಟೇಲ್ ಅವರು ಹೇಳುವಂತೆ ‘ ಮೃತ ಭಿಕ್ಷುಕ ಗುಜರಾತಿ ಮಾತನಾಡುತ್ತಿದ್ದರು, ಕಳೆದ ಎರಡು ದಿನಗಳಿಂದ ಯಾವುದೇ ಚಲನವಲನ ಇಲ್ಲದ ಕಾರಣ ಪಕ್ಕದ ಅಂಗಡಿಯವರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಭಿಕ್ಷುಕ ಮೃತಪಟ್ಟಿದ್ದಾನೆ. ಪ್ರಾಥಮಿಕ ಪರೀಕ್ಷೆಯ ನಂತರ ಅವರನ್ನು ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ಸಿವಿಲ್ ಆಸ್ಪತ್ರೆಗೆ ಕರೆದೊಯ್ದಾಗ ಭಿಕ್ಷುಕನ ಬಳಿ ರೂ.1.14 ಲಕ್ಷ ನಗದು ಪತ್ತೆಯಾಗಿದೆ. 10- 20ರೂಪಾಯಿಯಿಂದ ಹಿಡಿದು ಸಾಕಷ್ಟು ನೋಟುಗಳನ್ನು ಸಣ್ಣ ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ ಪ್ಯಾಂಟ್ ಜೇಬಿನಲ್ಲಿ ಇರಿಸಲಾಗಿತ್ತು. ಈ ಹಣವನ್ನು ವಲ್ಸಾದ್ ಪಟ್ಟಣದ ಪೊಲೀಸರಿಗೆ ಹಸ್ತಾಂತರಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಲ್ಲುಜ್ಜುತ್ತಿರುವಾಗ ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?

ವರದಿಗಳ ಪ್ರಕಾರ,ವೃದ್ಧನನ್ನು ಆಸ್ಪತ್ರೆಗೆ ಕರೆತಂದಾಗ ಚಹಾ ಕೊಡಿ ಎಂದು ಕೇಳಿದರು. ಆತ ಹಸಿದ್ದಿದ್ದ ಮತ್ತು ಅವನ ರಕ್ತದಲ್ಲಿನ ಸಕ್ಕರೆ ಮಟ್ಟವು ಕಡಿಮೆಯಾಗಿತ್ತು.ಆದರೆ ಒಂದು ಗಂಟೆಯ ನಂತರ ಭಿಕ್ಷುಕ ಸಾವನ್ನಪ್ಪಿದ್ದಾನೆ. ಕಳೆದ ಎರಡು ದಿನಗಳಿಂದ ಏನನ್ನೂ ತಿನ್ನದೇ ಹಸಿವಿನಿಂದ ಸಾವನ್ನಪ್ಪಿರುವುದಾಗಿ ಎಂದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಭಿಕ್ಷುಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆತನ ಫೋಟೋ ತೆಗೆದು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ  ಇಲ್ಲಿ ಕ್ಲಿಕ್​ ಮಾಡಿ: 

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ