AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕಬೂಲ್ ನಹೀ ಹೇ; ವರನ ಆ ಒಂದು ಎಡವಟ್ಟಿಂದ ಮದುವೆಯಾಗಲ್ಲ ಎಂದ ವಧು!

Trending News: ಮಧ್ಯಪ್ರದೇಶದ ರಾಯಘಡದಲ್ಲಿ ನವೆಂಬರ್ 7ರಂದು ಮುಸ್ಲಿಂ ಸಮುದಾಯದ ಯುವಕ- ಯುವತಿಯ ಮದುವೆ ನಡೆಯುತ್ತಿತ್ತು. ಮದುವೆಗೆ ಸಾಂಪ್ರದಾಯಿಕ ಉಡುಗೆ ತೊಟ್ಟು ಸಿದ್ಧವಾಗಿದ್ದ ಯುವತಿ ಇನ್ನೇನು ತನ್ನ ವರನಿಗೆ ಕಬೂಲ್ ಎಂದು ಹೇಳಬೇಕಾಗಿತ್ತು.

Viral News: ಕಬೂಲ್ ನಹೀ ಹೇ; ವರನ ಆ ಒಂದು ಎಡವಟ್ಟಿಂದ ಮದುವೆಯಾಗಲ್ಲ ಎಂದ ವಧು!
ಮದುವೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 13, 2021 | 7:28 PM

Share

ಮದುವೆಯ ಬಗ್ಗೆ ಪ್ರತಿಯೊಬ್ಬರಿಗೂ ಏನೇನೋ ಕನಸುಗಳಿರುತ್ತವೆ. ಆದರೆ, ಭಾರತದ ಮದುವೆಗಳಲ್ಲಿ ಒಂದಲ್ಲ ಒಂದು ರೀತಿಯ ಹೈಡ್ರಾಮಾಗಳು ನಡೆಯುತ್ತಲೇ ಇರುತ್ತವೆ. ಮದುವೆ ಮಂಟಪದಲ್ಲೇ ವಧು-ವರರು ಬದಲಾದ ಅದೆಷ್ಟೋ ಪ್ರಕರಣಗಳು ನಡೆದಿವೆ. ಇನ್ನು ಕೆಲವೊಮ್ಮೆ ಮದುವೆ ಮಂಟಪದಿಂದ ಓಡಿ ಹೋದ ಹುಡುಗಿ ಇನ್ಯಾರನ್ನೋ ಮದುವೆಯಾದ ಘಟನೆಗಳೂ ನಡೆದಿವೆ. ಆದರೆ, ಮದುವೆಯಾಗಲು ಇನ್ನೇನು ಕೆಲವೇ ಕ್ಷಣಗಳಿವೆ ಎನ್ನುವಾಗ ವಧು ತನಗೆ ಈ ಹುಡುಗ ಬೇಡ ಎಂದು ವರನನ್ನು ತಿರಸ್ಕರಿಸಿರುವ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆ ವಧು ವರನನ್ನು ತಿರಸ್ಕರಿಸಲು ಕಾರಣವೇನೆಂದು ತಿಳಿದರೆ ನೀವು ಕೂಡ ಅಚ್ಚರಿ ಪಡುತ್ತೀರಿ.

ಮಧ್ಯಪ್ರದೇಶದ ರಾಯಘಡದಲ್ಲಿ ನವೆಂಬರ್ 7ರಂದು ಮುಸ್ಲಿಂ ಸಮುದಾಯದ ಯುವಕ- ಯುವತಿಯ ಮದುವೆ ನಡೆಯುತ್ತಿತ್ತು. ಮದುವೆಗೆ ಸಾಂಪ್ರದಾಯಿಕ ಉಡುಗೆ ತೊಟ್ಟು ಸಿದ್ಧವಾಗಿದ್ದ ಯುವತಿ ಇನ್ನೇನು ತನ್ನ ವರನಿಗೆ ಕಬೂಲ್ ಎಂದು ಹೇಳಬೇಕಾಗಿತ್ತು. ಆದರೆ, ವರ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದಂತೆ ಮದುವೆ ಮನೆಯ ಕಳೆಯೇ ಬದಲಾಯಿತು. ಆಕೆ ತನಗೆ ಈ ಮದುವೆ ಇಷ್ಟವಿಲ್ಲ ಎಂದು ಘೋಷಿಸಿಬಿಟ್ಟಳು.

ಮದುವೆಗೆ ಬಂದಿದ್ದ ತನ್ನ ಗೆಳೆಯರ ಜೊತೆ ಕುಳಿತು ವರನೂ ಮದ್ಯಪಾನ ಮಾಡಿದ್ದ. ಮದುವೆಗೂ ಮುನ್ನ ಏರ್ಪಡಿಸಿದ್ದ ಪಾರ್ಟಿಯಲ್ಲಿ ವಧು-ವರರ ಮನೆಯವರು ಕುಡಿದು ಎಂಜಾಯ್ ಮಾಡಿದ್ದರು. ಆದರೆ, ತನ್ನನ್ನು ಮದುವೆಯಾಗುವ ಹುಡುಗನೂ ಆಲ್ಕೋಹಾಲ್ ಕುಡಿಯುತ್ತಾನೆ ಎಂದು ವಧುವಿಗೆ ಗೊತ್ತಿರಲಿಲ್ಲ. ಗೆಳೆಯರೊಂದಿಗೆ ಆಲ್ಕೋಹಾಲ್ ಕುಡಿದು ಟೈಟ್ ಆಗಿದ್ದ ವರನಿಗೆ ಮದುವೆಯಲ್ಲಿ ವಧುವಿನ ಪಕ್ಕ ಗಟ್ಟಿಯಾಗಿ ನಿಲ್ಲಲೂ ಸಾಧ್ಯವಾಗುತ್ತಿರಲಿಲ್ಲ.

ಇದರಿಂದ ಕೋಪಗೊಂಡ ವಧು ತಾನು ಆ ಹುಡುಗನನ್ನು ಮದುವೆಯಾಗುವುದಿಲ್ಲ ಎಂದಿದ್ದಾಳೆ. ಈ ಮದುವೆಗೆ ಒಪ್ಪಿಗೆ ಇದೆಯೇ? ಎಂದು ಮುಸ್ಲಿಂ ಧರ್ಮಗುರುಗಳು ಕೇಳಿದಾಗ ನನಗೆ ಈ ಮದುವೆ ಇಷ್ಟವಿಲ್ಲ (ಕಬೂಲ್ ನಹೀ) ಎಂದು ಹೇಳಿದ್ದಾಳೆ.

ಮದ್ಯವ್ಯಸನಿಯಾದ ಹುಡುಗನನ್ನು ಮದುವೆಯಾಗಲು ನನಗೆ ಇಷ್ಟವಿಲ್ಲ ಎಂದು ಯುವತಿ ಹೇಳಿದ್ದರಿಂದ ಆಕೆಯ ಕುಟುಂಬಸ್ಥರು ಈ ಮದುವೆಯನ್ನು ರದ್ದುಗೊಳಿಸಿದ್ದಾರೆ. ಕಳೆದ ವರ್ಷ ಇದೇ ರೀತಿಯ ಹಲವು ಘಟನೆಗಳು ನಡೆದಿದ್ದವು. ಮಟನ್ ಊಟವಿಲ್ಲವೆಂದು, ವಧುವಿನ ಅಂಕಲ್ ಮೇಲೆ ಆರೋಪ ಮಾಡಿದ್ದಕ್ಕೆ ಮದುವೆ ರದ್ದಾದ ಪ್ರಕರಣಗಳು ಕೂಡ ನಡೆದಿದ್ದವು.

ಇದನ್ನೂ ಓದಿ: Viral News: ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ವಧು ಪರಾರಿ; ಶಾಕ್ ಆದ ಗಂಡನಿಗೆ ಹೃದಯಾಘಾತ!

Viral News: ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ; 11 ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಆದೇಶ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ