AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ 23 ಹಲ್ಲು ಕಿತ್ತ ವೈದ್ಯ, ನೋವಿನಿಂದ ಸಾವನ್ನಪ್ಪಿದ್ದ ರೋಗಿ

"ದಂತ ವೈದ್ಯರು ತಂದೆಯ 23 ಹಲ್ಲುಗಳನ್ನು ಹೊರತೆಗೆದು, ಆ ದಿನವೇ 12 ಹೊಸ ಹಲ್ಲುಗಳನ್ನು ಅಳವಡಿಸಿದ್ದಾರೆ. ಚಿಕಿತ್ಸೆಯ ನಂತರ, ತಂದೆ ತುಂಬಾ ನೋವಿನಿಂದ ಬಳಲುತ್ತಿದ್ದರು. ಇದೀಗ ಹದಿಮೂರು ದಿನಗಳ ನಂತರ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ" ಎಂದು ಮೃತನ ಪುತ್ರಿ ಹೇಳಿಕೊಂಡಿದ್ದಾಳೆ.

ಒಂದೇ ದಿನ 23 ಹಲ್ಲು ಕಿತ್ತ ವೈದ್ಯ, ನೋವಿನಿಂದ ಸಾವನ್ನಪ್ಪಿದ್ದ ರೋಗಿ
ಒಂದೇ ದಿನ 23 ಹಲ್ಲು ಕಿತ್ತ ವೈದ್ಯ, ನೋವಿನಿಂದ ಸಾವನ್ನಪ್ಪಿದ್ದ ರೋಗಿ
ಅಕ್ಷತಾ ವರ್ಕಾಡಿ
|

Updated on: Sep 12, 2024 | 11:39 AM

Share

ಹುಳುಕು ಹಲ್ಲಿನ ಚಿಕಿತ್ಸೆಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಏಕಾಏಕಿ ಸಾವನ್ನಪ್ಪಿರುವ ಘಟನೆ ಪೂರ್ವ ಚೀನಾದ ಝೆಜಿಯಾಂಗ್ ಪ್ರಾಂತ್ಯದ ಜಿನ್ಹುವಾದಲ್ಲಿ ನಡೆದಿದೆ. ಹಲ್ಲಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ವ್ಯಕ್ತಿಗೆ ದಂತ ವೈದ್ಯರು ಹಲ್ಲು ತೆಗೆಸಿ ಹೊಸ ಹಲ್ಲು ಅಳವಡಿಸುವುದಾಗಿ ಹೇಳಿದ್ದರು. ಅದರಂತೆ ವೈದ್ಯರು ಒಂದೇ ದಿನ 23 ಹಲ್ಲು ಕಿತ್ತಿದ್ದಾರೆ. ಇದೀಗ ಹಲ್ಲು ಕಿತ್ತ 13 ದಿನಗಳ ಬಳಿಕ ವ್ಯಕ್ತಿ ಸಾವನ್ನಪ್ಪಿದ್ದು, ತೀವ್ರ ರಕ್ತಸ್ರಾವ ಹಾಗೂ ನೋವಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಮೃತನ ಮಗಳು ಆರೋಪಿಸಿದ್ದಾಳೆ.

ಘಟನೆಯ ಕುರಿತು ಯುವತಿ ಸೆಪ್ಟೆಂಬರ್ 2 ರಂದು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ಸದ್ಯ ಫೋಸ್ಟ್​​ ಎಲ್ಲೆಡೆ ವೈರಲ್​ ಆಗಿದೆ. “ನನ್ನ ತಂದೆ ಹುವಾಂಗ್ ಆಗಸ್ಟ್ 14 ರಂದು ಯೋಂಗ್‌ಕಾಂಗ್ ಡ್ಯೂ ಡೆಂಟಲ್ ಆಸ್ಪತ್ರೆಯಲ್ಲಿ ದಂತ ಚಿಕಿತ್ಸೆಗೆ ಒಳಗಾಗಿದ್ದರು. ದಂತ ವೈದ್ಯರು ತಂದೆಯ 23 ಹಲ್ಲುಗಳನ್ನು ಹೊರತೆಗೆದು, ಆ ದಿನವೇ 12 ಹೊಸ ಹಲ್ಲುಗಳನ್ನು ಅಳವಡಿಸಿದರು. ಆದರೆ ಚಿಕಿತ್ಸೆಯ ನಂತರ, ತಂದೆ ತುಂಬಾ ನೋವಿನಿಂದ ಬಳಲುತ್ತಿದ್ದರು. ಇದೀಗ ಹದಿಮೂರು ದಿನಗಳ ನಂತರ ಅವರು ಹಠಾತ್ ಹೃದಯಾಘಾತದಿಂದ ನಿಧನರಾದರು.” ಎಂದು ಯುವತಿ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ವಿಪರೀತ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ CT ಸ್ಕ್ಯಾನ್ ಕಂಡು ಬೆಚ್ಚಿಬಿದ್ದ ವೈದ್ಯರು

ಶಸ್ತ್ರಚಿಕಿತ್ಸೆ ನಡೆಸಿದ ದಂತ ವೈದ್ಯ ಐದು ವರ್ಷಗಳ ಸೇವೆಯಲ್ಲಿ ಅನುಭವ ಹೊಂದಿದ್ದು, ರೂಟ್ ಕೆನಾಲ್ ಚಿಕಿತ್ಸೆ ಸೇರಿದಂತೆ ಇತರ ಹಲ್ಲಿನ ಚಿಕಿತ್ಸೆಗಳಲ್ಲಿ ಹೆಚ್ಚು ನುರಿತ ಎಂದು ತಿಳಿದುಬಂದಿದೆ. ಆದರೆ ಹಲ್ಲಿನ ಚಿಕಿತ್ಸೆ ಮತ್ತು ಹುವಾಂಗ್ ಸಾವಿನ ನಡುವೆ 13 ದಿನಗಳ ಅಂತರವಿರುವುದರಿಂದ ಯುವತಿಯ ದೂರಿನ ಆಧಾರದ ಮೇಲೆ ಪ್ರಕರಣವನ್ನು ಇನ್ನೂ ಆಳವಾಗಿ ತನಿಖೆ ಮಾಡಲಾಗುತ್ತಿದೆ ಎಂದು ಅಲ್ಲಿನ ಆರೋಗ್ಯ ಆಯೋಗ ಹೇಳಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್