AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್ಟೆನ್​ ವೆಡ್ಸ್​ ಪವನ್​; ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ವೀಡಿಷ್​ ಯುವತಿ ಮದುವೆಯಾಗಲು ಭಾರತಕ್ಕೆ ಬಂದಳು

Facebook : 2012ರಲ್ಲಿ ಇವರಿಬ್ಬರೂ ಫೇಸ್​ಬುಕ್​ ಮೂಲಕ ಪರಿಚಯವಾದರು. ಕಳೆದ ವರ್ಷ ತಾಜ್​ಮಹಲಿನ ಎದುರು ಭೇಟಿಯಾಗಿ ಮದುವೆ ಒಪ್ಪಂದ ಮಾಡಿಕೊಂಡರು. ಇದೀಗ ಸ್ವೀಡಿಷ್​ ಯುವತಿ ಭಾರತದ ಸೊಸೆ.

ಕ್ರಿಸ್ಟೆನ್​ ವೆಡ್ಸ್​ ಪವನ್​; ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ವೀಡಿಷ್​ ಯುವತಿ ಮದುವೆಯಾಗಲು ಭಾರತಕ್ಕೆ ಬಂದಳು
ಕ್ರಿಸ್ಟೆನ್ ಮತ್ತು ಪವನ್
TV9 Web
| Edited By: ಶ್ರೀದೇವಿ ಕಳಸದ|

Updated on:Jan 30, 2023 | 12:51 PM

Share

Viral News : ಅಂತರ್ಜಾಲ ಈಗ ಎಲ್ಲ ದೂರವನ್ನು ಹತ್ತಿರ ಮಾಡಿಬಿಡುತ್ತದೆ. ಆದರೆ ಈ ಅವಕಾಶ ಅನುಕೂಲವನ್ನು ಹೇಗೆ ಉಪಯೋಗಿಸುತ್ತೇವೆ ಎನ್ನುವುದು ನಮ್ಮ ನಮ್ಮ ತಿಳಿವಳಿಕೆಗೆ ಬಿಟ್ಟಿದ್ದು. 2012ರಲ್ಲಿ ಸ್ವೀಡಿಷ್​ ಯುವತಿ ಮತ್ತು ಭಾರತೀಯ ಯುವಕ ಫೇಸ್​ಬುಕ್​ ಮೂಲಕ ಸ್ನೇಹಿತರಾದರು. ಸ್ನೇಹ ಪ್ರೇಮಕ್ಕೆ ತಿರುಗಿತು. ಪ್ರೇಮ ಸಂಬಂಧದಿಂದ ಮದುವೆಯತನಕ. ಇದೀಗ ಇವರಿಬ್ಬರ ಮದುವೆಯ ಫೋಟೋಗಳು ವೈರಲ್ ಆಗುತ್ತಿವೆ.

ಪ್ರೀತಿಗೆ ಯಾವ ಭಾಷೆ, ದೇಶ, ಗಡಿಯ ಹಂಗಿಲ್ಲ. ಒಂದುಗೂಡಿಸುವುದಷ್ಟೇ ಅದರ ಉದ್ದೇಶ. 2012ರಲ್ಲಿ ಪರಿಚಯವಾದ ಇವರು ಫೋನ್​ ಮತ್ತು ವಿಡಿಯೋ ಕಾಲ್​ ಮೂಲಕ ಒಡನಾಡಿಕೊಂಡಿದ್ದರು. ನಂತರ ಒಂದು ವರ್ಷದ ಹಿಂದೆ ಆಗ್ರಾದಲ್ಲಿ ಇವರಿಬ್ಬರೂ ಮೊದಲ ಸಲ ಭೇಟಿಯಾದರು. ಇವರ ಮದುವೆಯ ನಿರ್ಣಯಕ್ಕೆ ತಾಜ್​ಮಹಲ್​ ಸಾಕ್ಷಿಯಾಯಿತು.

ಇದನ್ನೂ ಓದಿ : ಟಾಮಿ ವೆಡ್ಸ್​ ಜೈಲಿ; ಉತ್ತರ ಪ್ರದೇಶದಲ್ಲಿ ನಾಯಿಗಳ ಮದುವೆ; ವಿಡಿಯೋ ವೈರಲ್

ಜನವರಿ 28ಕ್ಕೆ ಮದುವೆ ಏರ್ಪಾಡಾಯಿತು. ಮಾರು 6,000 ಕಿ.ಮೀ ಪ್ರಯಾಣಿಸಿ ಉತ್ತರ ಪ್ರದೇಶದ ಎಟಾ ನಗರಕ್ಕೆ ಇಟಾಹ್​ಕ್ಕೆ ವಧು ಕ್ರಿಸ್ಟೆನ್​ ಬಂದೇ ಬಿಟ್ಟಳು. ನೆರೆದ ಬಂಧುಬಳಗದವರೆದುರು ಶುಕ್ರವಾರ ಎಟಾದ ಶಾಲೆಯೊಂದರಲ್ಲಿ ಹಿಂದೂ ಪದ್ಧತಿಯ ಪ್ರಕಾರ ಪವನ್​ ಮತ್ತು ಕ್ರಿಸ್ಟೆನ್ ಮದುವೆಯಾದರು.

ಇದನ್ನೂ ಓದಿ : ನಾಯಿಮರಿ ತನ್ನ ಜನನ ಪ್ರಮಾಣ ಪತ್ರಕ್ಕೆ ಕಾಲ್ಬೆರಳು ಒತ್ತಿ ಸಹಿ ಮಾಡಿರುವ ವಿಡಿಯೋ ವೈರಲ್

ಪವನ್​ ಡೆಹ್ರಾಡೂನ್​ ವಿವಿಯಿಂದ ಬಿ.ಟೆಕ್​ ಪದವಿ ಪೂರೈಸಿದ್ದಾನೆ. ಖಾಸಗೀ ಸಂಸ್ಥೆಯೊಂದರಲ್ಲಿ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ‘ನನ್ನ ಕುಟುಂಬವನ್ನು ಈ ಮದುವೆಯನ್ನು ಸಂಪೂರ್ಣ ಸಂತೋಷದಿಂದ ಸ್ವೀಕರಿಸಿದೆ’ ಎಂದು ಹೇಳಿದ್ದಾನೆ. ‘ಈ ಮೊದಲು ಕೂಡ ನಾನು ಭಾರತಕ್ಕೆ ಭೇಟಿ ನೀಡಿದ್ದೆ. ನನಗೆ ಬಹಳ ಇಷ್ಟವಾಯಿತು. ಇದೀಗ ಇಲ್ಲಿಯವರನ್ನೇ ಮದುವೆಯಾಗಿದ್ದು ಖುಷಿ ಇದೆ’ ಎಂದಿದ್ದಾಳೆ ಕ್ರಿಸ್ಟೆನ್​

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:51 pm, Mon, 30 January 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ